ಶೀನಾ ಬೋರಾ ಕೊಲೆ ಕೇಸ್: ಇಂದ್ರಾಣಿ, ಪೀಟರ್ ವಿರುದ್ಧ ಸಿಬಿಐ ಆರೋಪ ಪಟ್ಟಿ
ಎರಡು ವರ್ಷಗಳ ಹಿಂದೆ ಬಹಿರಂಗಗೊಂಡಿದ್ದ ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ತಾಯಿ ಇಂದ್ರಾಣಿ ಸೇರಿದಂತೆ ಮೂವರ ಮೇಲೆ ಸಿಬಿಐ, ನ್ಯಾಯಾಲಯದಲ್ಲಿ ಆರೋಪ ಪಟ್ಟಿ ದಾಖಲಿಸಿದೆ.
ನವದೆಹಲಿ, ಜನವರಿ 17: ಎರಡು ವರ್ಷಗಳ ಹಿಂದೆ ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಶೀನಾ ತಾಯಿ ಇಂದ್ರಾಣಿ ಮುಖರ್ಜಿಯಾ, ಅವರ ಪತಿ ಪೀಟರ್ ಮುಖರ್ಜಿಯಾ ಹಾಗೂ ಇಂದ್ರಾಣಿ ಮಾಜಿ ಪತಿ ಸಂಜೀವ್ ಖನ್ನಾ ವಿರುದ್ಧ ಪ್ರಕರಣದ ತನಿಖೆ ನಡೆಸುತ್ತಿದ್ದ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಆರೋಪ ಪಟ್ಟಿ ದಾಖಲಿಸಿದೆ.
ಇಂದ್ರಾಣಿ, ಪೀಟರ್ ಹಾಗೂ ಸಂಜೀವ್ ಅವರು ವಿರುದ್ಧ ಐಪಿಸಿ ಸೆಕ್ಷನ್ 120 (ಬಿ) (ಕ್ರಿಮಿನಲ್ ಸಂಚು), 364 (ಕಿಡ್ನಾಪ್), 302 (ಕೊಲೆ), 34 (ಉದ್ದೇಶ ಈಡೇರಿಕೆಗಾಗಿ ಸಾಂಘಿಕ ಪ್ರಯತ್ನ), 203 (ತನಿಖೆ ವೇಳೆ ಅಧಿಕಾರಿಗಳಿಗೆ ತಪ್ಪು ಮಾಹಿತಿ) ಆರೋಪಗಳನ್ನು ದಾಖಲಿಸಲಾಗಿದೆ.

ಇಂದ್ರಾಣಿ, ಸಂಜೀವ್ ವಿರುದ್ಧ ಐಪಿಸಿ ಸೆಕ್ಷನ್ 307 (ಕೊಲೆ ಪ್ರಯತ್ನ), 120 ಬಿ (ಕ್ರಿಮಿನಲ್ ಸಂಚು) ಆರೋಪಗಳನ್ನು ದಾಖಲಿಸಲಾಗಿದೆ. ಈ ಪ್ರಕರಣದ ವಿಚಾರಣೆ ಸಿಬಿಐ ನ್ಯಾಯಾಲಯದಲ್ಲಿ ಫೆ. 1ರಿಂದ ಆರಂಭಗೊಳ್ಳಲಿದೆ.
2012ರ ಏಪ್ರಿಲ್ 24ರಂದು ಇಂದ್ರಾಣಿ ಮಗಳು ಶೀನಾ (24 ವರ್ಷ) ಅವರ ಅಪಹರಣವಾಗಿತ್ತು. ಶೀನಾ, ಇಂದ್ರಾಣಿಗಿದ್ದ ಮೊದಲ ಸಂಬಂಧದಿಂದ ಜನಿಸಿದ ಪುತ್ರಿ ಎಂದು ಹೇಳಲಾಗಿದೆ. 2012ರಲ್ಲಿ ಆಕೆಯ ಅಪಹರಣ ಮಾಡಿದ್ದ ದುಷ್ಕರ್ಮಿಗಳು ಆಕೆಯ ದೇಹವನ್ನು ಮುಂಬೈ ನಗರದ ಬಳಿಯೇ ಇರುವ ರಾಯಗಢದ ದಟ್ಟ ಅರಣ್ಯ ಪ್ರದೇಶದಲ್ಲಿ ಸುಟ್ಟುಹಾಕಲಾಗಿತ್ತೆಂದು ಹೇಳಲಾಗಿದೆ. ಆದರೂ, ಈ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು 2015ರಲ್ಲಿ. ಅಲ್ಲಿಯವರೆಗೂ ಶೀನಾ ಬೋರಾ ನಾಪತ್ತೆಯಾಗಿರುವ ಸುದ್ದಿ ಮಾತ್ರ ಪ್ರಚಲಿತವಾಗಿತ್ತು.
2015ರಲ್ಲಿ ಇಂದ್ರಾಣಿ ಮನೆಯ ಮಾಜಿ ಚಾಲಕನೊಬ್ಬ ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಕೊಲೆ ವಿಚಾರ ಬಾಯಿಬಿಟ್ಟಿದ್ದ. ಅಲ್ಲಿಂದ ಈ ಪ್ರಕರಣ ತಿರುವು ಪಡೆದುಕೊಂಡಿತ್ತು.
ವಿಚ್ಛೇದನ ಕೊಡಿ ಎಂದ ಇಂದ್ರಾಣಿ: ಏತನ್ಮಧ್ಯೆ, ಶೀನಾ ಬೋರಾ ಕೊಲೆಯ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ, ತಮ್ಮ ಪತಿ ಪೀಟರ್ ಮುಖರ್ಜಿಯಾ ಅವರಿಂದ ತಮಗೆ ವಿಚ್ಛೇದನ ನೀಡಬೇಕೆಂದು ನ್ಯಾಯಾಲಯವನ್ನು ಕೋರಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications