Sheesh Mahal Controversy: ದೆಹಲಿ ಚುನಾವಣೆ ಬೆನ್ನಲ್ಲೇ ಶುರುವಾಯ್ತು "ಶೀಷ್ ಮಹಲ್" ವಿವಾದ
ಭಾರತದಲ್ಲಿ ಚುನಾವಣೆ ಸಮಯದಲ್ಲಿ ವಿವಾದಗಳು, ವಾಗ್ದಾಳಿಗಳು ನಡೆಯುವುದು ಹೊಸದಲ್ಲ. ಇದೀಗ ದೆಹಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವಾಗಲೇ ಶೀಷ್ ಮಹಲ್ ವಿವಾದ ಮುನ್ನೆಲೆಗೆ ಬಂದಿದೆ. ಶೀಷ್ ಮಹಲ್ ವಿವಾದದ ಮೂಲಕವೇ ಆಮ್ ಆದ್ಮಿ ಪಾರ್ಟಿಯನ್ನು ದೆಹಲಿಯಲ್ಲಿ ಕಟ್ಟಿ ಹಾಕುವುದಕ್ಕೆ ಬಿಜೆಪಿ ಮಾಸ್ಟರ್ ಪ್ಲಾನ್ ಮಾಡುತ್ತಿದೆ. ದೆಹಲಿಯಲ್ಲಿ ಇದೇ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯ ಬೆನ್ನಲ್ಲೇ ಶೀಷ್ ಮಹಲ್ ವಿವಾದ ಮುನ್ನೆಲೆಗೆ ಬಂದಿದೆ. ಹಾಗಾದರೆ ಏನಿದು ಶೀಷ್ ಮಹಲ್ ವಿವಾದ. ಈಗ ಯಾಕೆ ಈ ವಿಷಯದ ಬಗ್ಗೆ ಚರ್ಚೆ ಹಾಗೂ ದೆಹಲಿ ವಿಧಾನಸಭೆ ಚುನಾವಣೆಗೂ ಇದಕ್ಕೂ ಇರುವ ಸಂಬಂಧವೇನು ಎನ್ನುವ ವಿವರ ಇಲ್ಲಿದೆ.
ದೆಹಲಿ ಚುನಾವಣೆಗೆ ದಿನಗಣನೆ ಶುರುವಾಗಿದೆ. ಕಳೆದ ಎರಡು ಬಾರಿ ಗೆದ್ದಿದ್ದ ಎಎಪಿಗೆ ಈ ಬಾರಿ ಗೆಲ್ಲುವುದು ಸುಲಭದ ಮಾತಾಗಿಲ್ಲ. ಇದರ ನಡುವೆ ದೆಹಲಿಯ ಶೀಷ್ ಮಹಲ್ ವಿವಾದವು ಆಮ್ ಆದ್ಮಿ ಪಾರ್ಟಿಗೆ ನುಂಗಲಾಗದ ತುಪ್ಪವಾಗಿ ಪರಿಣಮಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ಶಾ ಅವರು ಶೀಷ್ ಮಹಲ್ ವಿವಾದದ ಬಗ್ಗೆ ಕಿಡಿಕಾರಿದ್ದಾರೆ. ಅಷ್ಟಕ್ಕೂ ಏನಿದು ಶೀಷ್ ಮಹಲ್ ವಿವಾದ ಅಷ್ಟಕ್ಕೂ ದೇಶದಲ್ಲಿ ಈ ವಿವಾದದ ಬಗ್ಗೆ ಚರ್ಚೆ ಜೋರಾಗಿರುವುದೇಕೆ ಎನ್ನುವ ಕಂಪ್ಲೀಟ್ ಮಾಹಿತಿ ಇಲ್ಲಿದೆ.

ಶೀಷ್ ಮಹಲ್ ವಿವಾದ ಇತ್ತೀಚಿನ ದಿನಗಳಲ್ಲಿ ಜೋರಾಗಿದೆ. ಶೀಷ್ ಮಹಲ್ ಎನ್ನುವುದು ದೆಹಲಿಯ ಸರ್ಕಾರಿ ಬಂಗಲೆಯಾಗಿದೆ. ಈ ಬಂಗಲೆಯ ವಿಚಾರವಾಗಿ ಆಮ್ ಆದ್ಮಿ ಪಾರ್ಟಿ ಹಾಗೂ ಬಿಜೆಪಿ ನಡುವೆ ವಾಕ್ಸಮರ ನಡೆಯುತ್ತಿದೆ. ಮದ್ಯ ನೀತಿ ಹಗರಣ ತಣ್ಣಗಾದ ಮೇಲೆ ಬಿಜೆಪಿ ಈ ವಿಷಯವನ್ನು ಇರಿಸಿಕೊಂಡು ಎಎಪಿಯ ಮೇಲೆ ಮುಗಿಬಿದ್ದಿದೆ. ಶೀಷ್ ಮಹಲ್ಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ.
ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯ ಸರ್ಕಾರಿ ಬಂಗಲೆಯಾಗಿರುವ ಮುಖ್ಯಮಂತ್ರಿ ಮನೆಯ ನವೀಕರಣಕ್ಕಾಗಿ ಮೂರು ಪಟ್ಟು ದುಡ್ಡು ಖರ್ಚು ಮಾಡಲಾಗಿದೆ. ಅದೂ ಸಹ ಜನ ಕೋವಿಡ್ ಸಂಕಷ್ಟದಲ್ಲಿ ಇದ್ದ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ ಎಂದು ಹೇಳಲಾಗಿದೆ.
ಕೋಟಿ.. ಕೋಟಿ ಖರ್ಚು ?
ದೆಹಲಿಯ ಶೀಷ್ ಮಹಲ್ ನಿರ್ಮಾಣಕ್ಕೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಸರ್ಕಾರಿ ಕಚೇರಿ ನಿರ್ಮಾಣ ಮಾಡುವುದಕ್ಕೆ 33 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿದೆ. ಈ ಹಿಂದೆ ದೆಹಲಿಯ ಸಿಎಂ ಆಗಿ ಕೇಜ್ರಿವಾಲ್ ಅವರು ಅಧಿಕಾರ ನಡೆಸುವಾಗ ಈ ಬೆಳವಣಿಗೆ ಆಗಿದೆ ಎನ್ನುವ ಆರೋಪ ಇದೆ. ಈ ಬಂಗಲೆಯನ್ನು ಒಂದಲ್ಲ ಎರಡಲ್ಲ ಬರೋಬ್ಬರಿ ಮೂರು ಬಾರಿ ನವೀಕರಣ ಮಾಡಿರುವ ಆರೋಪ ಕೇಳಿ ಬಂದಿದೆ. ಮೂರು ಬಾರಿ ದುಬಾರಿ ವಸ್ತುಗಳನ್ನು ಬಳಸಿಯೇ ಈ ಮನೆಯ ನವೀಕರಣ ಮಾಡಲಾಗಿದೆ ಎನ್ನುವ ಆರೋಪವನ್ನು ಬಿಜೆಪಿ ಮಾಡಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications