ಶ್ರೀರಾಮನೊಂದಿಗೆ ನಿಮ್ಮ ಹೆಸರು ಎಂದೆಂದಿಗೂ ಉಳಿಯಲಿದೆ: ಮೋದಿಗೆ ಶಿಲ್ಪಾ ಶೆಟ್ಟಿ ಬರೆದ ಪತ್ರದಲ್ಲಿ ಏನಿದೆ?
ದಶಕಗಳ ಕನಸು ಅಂತೂ ನನಸಾಗುವ ಸಮಯ ಬಂದೇ ಬಿಟ್ಟಿದೆ. ಅಂತೂ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಿದೆ. ಹಿಂದೂಗಳ ಮಹಾದಾಸೆಯಾಗಿದ್ದ ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಪತ್ರ ಬರೆದಿದ್ದಾರೆ.
ಹೌದು, ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆ ಕುರಿತು ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಪ್ರಧಾನಿ ನರೇಂದ್ರ ಮೋದಿಅವರನ್ನ ಹಾಡಿ ಹೊಗಳಿದ್ದಾರೆ. ಶಿಲ್ಪಾ ಶೆಟ್ಟಿ ಅವರು ಪತ್ರವನ್ನ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಮಮಂದಿರ ನಿರ್ಮಿಸಿ ಪ್ರಧಾನಿ ಮೋದಿ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಭವ್ಯ ಮಂದಿರ ನಿರ್ಮಿಸಿದ ಪ್ರಧಾನಿ ಮೋದಿ ಅವರು ಯಾವಾಗಲೂ ದೇವಾಲಯದ ಜೊತೆ ಸಂಬಂಧ ಹೊಂದಿರುತ್ತಾರೆ. ಅವರ ಮಹತ್ವದ ಕಾರ್ಯಕ್ಕೆ ಧನ್ಯವಾದ ಅರ್ಪಿಸುತ್ತೇನೆಂದು ಬರೆದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಹಿಂದೂಗಳ 500 ವರ್ಷಗಳ ಹೋರಾಟಕ್ಕೆ ಬಾಲರಾಮನ ಪ್ರತಿಷ್ಠಾಪನೆಯಿಂದ ಜಯ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಬಾಲರಾಮನ ವಿಗ್ರಹ ಅನಾವರಣಗೊಳಿಸಲಾಯಿತು. ಭವ್ಯ ಮಂದಿರದಲ್ಲಿ ಬಾಲರಾಮ ನೆಲೆಸಿದನು. ಇಡೀ ಭಾರತವೇ ಅಂದು ಹಬ್ಬ ಆಚರಿಸಿತು ಅಂತ ಶಿಲ್ಪಾ ಶೆಟ್ಟಿ ಬರೆದಿದ್ದಾರೆ.
#धन्यवाद_मोदीजी
— भाजपा महाराष्ट्र (@BJP4Maharashtra) February 12, 2024
सुप्रसिध्द अभिनेत्री @TheShilpaShetty जी यांनी नुकताच पंतप्रधान नरेंद्र मोदीजींना पत्र लिहून त्यांचे आभार मानले.
५ शतकांपासून श्रीरामांना वनवास घडत होता. अखेर तो वनवास संपला. तेही मोदीजींच्या प्रयत्नांमुळे.. यासाठीच शिल्पाजींनी पंतप्रधानांचे आभार मानले आहेत.… pic.twitter.com/LTqpjGolLK
ಶಿಲ್ಪಾ ಶೆಟ್ಟಿ ಬರೆದ ಪತ್ರದಲ್ಲಿ ಏನಿದೆ?
ಕೆಲವರು ಇತಿಹಾಸ ಓದುತ್ತಾರೆ, ಇನ್ನೂ ಕೆಲವರು ಅದರಿಂದ ಕಲಿಯುತ್ತಾರೆ. ಆದರೆ ನಿಮ್ಮಂತಹ ವ್ಯಕ್ತಿಗಳು ಇತಿಹಾಸವನ್ನು ಮರು ಸೃಷ್ಟಿಸುವ ಅಸಾಧಾರಣ ಸಾಮರ್ಥ್ಯ ಹೊಂದಿರುತ್ತಾರೆ. 500 ವರ್ಷಗಳ ರಾಮಜನ್ಮಭೂಮಿಯ ಇತಿಹಾಸವನ್ನು ಪುನಃ ಸೃಷ್ಟಿಸಿದ್ದೀರಿ.
ಇಂತಹ ಮಂಗಳಕರ ಸಾಧನೆ ಮಾಡಿದಕ್ಕೆ ನಿಮ್ಮ ಹೆಸರು ಭಗವಾನ್ ಶ್ರೀರಾಮನೊಂದಿಗೆ ಶಾಶ್ವತವಾಗಿ ಇರುತ್ತದೆ ಎಂದು ಶಿಲ್ಪಾ ಶೆಟ್ಟಿ ಹಿಂದಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಸದ್ಯ ನಟಿಯ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.
-
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ











Click it and Unblock the Notifications