ಶ್ರೀರಾಮನೊಂದಿಗೆ ನಿಮ್ಮ ಹೆಸರು ಎಂದೆಂದಿಗೂ ಉಳಿಯಲಿದೆ: ಮೋದಿಗೆ ಶಿಲ್ಪಾ ಶೆಟ್ಟಿ ಬರೆದ ಪತ್ರದಲ್ಲಿ ಏನಿದೆ?
ದಶಕಗಳ ಕನಸು ಅಂತೂ ನನಸಾಗುವ ಸಮಯ ಬಂದೇ ಬಿಟ್ಟಿದೆ. ಅಂತೂ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಿದೆ. ಹಿಂದೂಗಳ ಮಹಾದಾಸೆಯಾಗಿದ್ದ ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಪತ್ರ ಬರೆದಿದ್ದಾರೆ.
ಹೌದು, ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆ ಕುರಿತು ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಪ್ರಧಾನಿ ನರೇಂದ್ರ ಮೋದಿಅವರನ್ನ ಹಾಡಿ ಹೊಗಳಿದ್ದಾರೆ. ಶಿಲ್ಪಾ ಶೆಟ್ಟಿ ಅವರು ಪತ್ರವನ್ನ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಮಮಂದಿರ ನಿರ್ಮಿಸಿ ಪ್ರಧಾನಿ ಮೋದಿ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಭವ್ಯ ಮಂದಿರ ನಿರ್ಮಿಸಿದ ಪ್ರಧಾನಿ ಮೋದಿ ಅವರು ಯಾವಾಗಲೂ ದೇವಾಲಯದ ಜೊತೆ ಸಂಬಂಧ ಹೊಂದಿರುತ್ತಾರೆ. ಅವರ ಮಹತ್ವದ ಕಾರ್ಯಕ್ಕೆ ಧನ್ಯವಾದ ಅರ್ಪಿಸುತ್ತೇನೆಂದು ಬರೆದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಹಿಂದೂಗಳ 500 ವರ್ಷಗಳ ಹೋರಾಟಕ್ಕೆ ಬಾಲರಾಮನ ಪ್ರತಿಷ್ಠಾಪನೆಯಿಂದ ಜಯ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಬಾಲರಾಮನ ವಿಗ್ರಹ ಅನಾವರಣಗೊಳಿಸಲಾಯಿತು. ಭವ್ಯ ಮಂದಿರದಲ್ಲಿ ಬಾಲರಾಮ ನೆಲೆಸಿದನು. ಇಡೀ ಭಾರತವೇ ಅಂದು ಹಬ್ಬ ಆಚರಿಸಿತು ಅಂತ ಶಿಲ್ಪಾ ಶೆಟ್ಟಿ ಬರೆದಿದ್ದಾರೆ.
#धन्यवाद_मोदीजी
— भाजपा महाराष्ट्र (@BJP4Maharashtra) February 12, 2024
सुप्रसिध्द अभिनेत्री @TheShilpaShetty जी यांनी नुकताच पंतप्रधान नरेंद्र मोदीजींना पत्र लिहून त्यांचे आभार मानले.
५ शतकांपासून श्रीरामांना वनवास घडत होता. अखेर तो वनवास संपला. तेही मोदीजींच्या प्रयत्नांमुळे.. यासाठीच शिल्पाजींनी पंतप्रधानांचे आभार मानले आहेत.… pic.twitter.com/LTqpjGolLK
ಶಿಲ್ಪಾ ಶೆಟ್ಟಿ ಬರೆದ ಪತ್ರದಲ್ಲಿ ಏನಿದೆ?
ಕೆಲವರು ಇತಿಹಾಸ ಓದುತ್ತಾರೆ, ಇನ್ನೂ ಕೆಲವರು ಅದರಿಂದ ಕಲಿಯುತ್ತಾರೆ. ಆದರೆ ನಿಮ್ಮಂತಹ ವ್ಯಕ್ತಿಗಳು ಇತಿಹಾಸವನ್ನು ಮರು ಸೃಷ್ಟಿಸುವ ಅಸಾಧಾರಣ ಸಾಮರ್ಥ್ಯ ಹೊಂದಿರುತ್ತಾರೆ. 500 ವರ್ಷಗಳ ರಾಮಜನ್ಮಭೂಮಿಯ ಇತಿಹಾಸವನ್ನು ಪುನಃ ಸೃಷ್ಟಿಸಿದ್ದೀರಿ.
ಇಂತಹ ಮಂಗಳಕರ ಸಾಧನೆ ಮಾಡಿದಕ್ಕೆ ನಿಮ್ಮ ಹೆಸರು ಭಗವಾನ್ ಶ್ರೀರಾಮನೊಂದಿಗೆ ಶಾಶ್ವತವಾಗಿ ಇರುತ್ತದೆ ಎಂದು ಶಿಲ್ಪಾ ಶೆಟ್ಟಿ ಹಿಂದಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಸದ್ಯ ನಟಿಯ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications