ಅಕ್ಟೋಬರ್ 1ರಂದು ಶಿರಡಿ ವಿಮಾನ ನಿಲ್ದಾಣ ಲೋಕಾರ್ಪಣೆ
ಶಿರಡಿ, ಸೆಪ್ಟೆಂಬರ್ 21 : ಶಿರಡಿ ಸಾಯಿಬಾಬಾ ದರ್ಶನಕ್ಕೆ ಹೋಗುವ ಭಕ್ತರಿಗೆ ಸಿಹಿ ಸುದ್ದಿ. ಅಕ್ಟೋಬರ್ 1ರಿಂದ ಶಿರಡಿ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆ. ಟ್ರೂ ಜೆಟ್ ಸೇರಿದಂತೆ ವಿವಿಧ ಕಂಪನಿಗಳು ಶಿರಡಿಗೆ ವಿಮಾನ ಸಂಪರ್ಕ ಕಲ್ಪಿಸಲು ಸಿದ್ಧವಾಗಿವೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಕ್ಟೋಬರ್ 1ರಂದು ಶಿರಡಿ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. ಪ್ರತಿದಿನ 500 ಪ್ರಯಾಣಿಕರ ಆಗಮನ, ನಿರ್ಗಮನಕ್ಕೆ ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣದ ವಿಸ್ತರಣೆ ಕಾರ್ಯವೂ ನಡೆಯುತ್ತಿದೆ.

ಮುಂಬೈ, ದೆಹಲಿ, ಹೈದರಾಬಾದ್ ನಗರಗಳಿಗೆ ವಿಮಾನ ಹಾರಾಟ ಆರಂಭವಾಗಲಿದೆ. ಅಲೆಯನ್ಸ್ ಏರ್ ಮುಂಬೈ ಮತ್ತು ದೆಹಲಿಗೆ ವಿಮಾನ ಸಂಪರ್ಕ ಕಲ್ಪಿಸಲಿದೆ. ಟ್ರೂ ಜೆಟ್ ಹೈದರಾಬಾದ್ಗೆ ಹಾರಾಟ ನಡೆಸಲಿದೆ. ಇಂಡಿಗೋ ಸಹ ವಿಮಾನಯಾನ ಸೇವೆ ಆರಂಭಿಸಲು ಅರ್ಜಿ ಸಲ್ಲಿಸಿದೆ.
ಶಿರಡಿ ವಿಮಾನ ನಿಲ್ದಾಣ 3,200 ಕಿ.ಮೀ ರನ್ ವೇ ಹೊಂದಿದೆ. ವಿಮಾನ ನಿಲ್ದಾಣದ ರನ್ ವೇ ವಿಸ್ತರಣಾ ಕಾರ್ಯವೂ ನಡೆಯುತ್ತಿದೆ. ರಾತ್ರಿ ವಿಮಾನಗಳ ಹಾರಾಟಕ್ಕೆ ಇನ್ನೂ ಒಪ್ಪಿಗೆ ಸಿಕ್ಕಿಲ್ಲ. ಕೆಲವು ತಿಂಗಳುಗಳಲ್ಲಿ ಒಪ್ಪಿಗೆ ಸಿಗುವ ಸಾಧ್ಯತೆ ಇದೆ.
ಶಿರಡಿ ಸಾಯಿಬಾಬಾ ದೇವಾಲಯ ವಿಮಾನ ನಿಲ್ದಾಣದಿಂದ 14 ಕಿ.ಮೀ.ದೂರದಲ್ಲಿದೆ. ಪ್ರಯಾಣಿಕರು ವಿಮಾನ ನಿಲ್ದಾಣದಿಂದ ದೇವಾಲಯಕ್ಕೆ ತೆರಳಲು ಬಸ್ ವ್ಯವಸ್ಥೆ ಮಾಡಲು ಮಹಾರಾಷ್ಟ್ರ ಸರ್ಕಾರ ಸಿದ್ಧತೆ ನಡೆಸಿದೆ. ಟ್ಯಾಕ್ಸಿ ಸೇವೆಲೂ ಲಭ್ಯವಾಗಲಿದೆ.
ಅಲೆಯನ್ಸ್ ಏರ್, ಟ್ರೂ ಜೆಟ್, ಇಂಡಿಗೋ ಹೊರತುಪಡಿಸಿ ಬೇರೆ ಯಾವುದೇ ಕಂಪನಿಗಳು ವಿಮಾನ ಸಂಪರ್ಕ ಕಲ್ಪಿಸಲು ಮುಂದೆ ಬಂದಿಲ್ಲ. ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿದ ಬಳಿಕ ಬೇರೆ ಕಂಪನಿಗಳು ವಿಮಾನ ಹಾರಾಟ ನಡೆಸಲು ಆಸಕ್ತಿ ವಹಿಸುವ ಸಾಧ್ಯತೆ ಇದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications