Shirdi Sai Baba: ಮೇ 1 ರಿಂದ ಶಿರಡಿ ಸಾಯಿ ಬಾಬಾ ದೇವಸ್ಥಾನ ಬಂದ್: ಸ್ಪಷ್ಟನೆ ಕೊಟ್ಟ ದೇವಸ್ಥಾನ ಆಡಳಿತ ಮಂಡಳಿ
ಮಹಾರಾಷ್ಟ್ರದ ಶಿರಡಿಯಲ್ಲಿ ವಿಶ್ವ ವಿಖ್ಯಾತ ಧಾರ್ಮಿಕ ಪ್ರವಾಸೋದ್ಯಮ ತಾಣ, ಶಿರಡಿ ಸಾಯಿಬಾಬಾ ದೇವಸ್ಥಾನವನ್ನು ಮೇ 1 ರಿಂದ ಅನಿರ್ದಿಷ್ಟಾವಧಿಯವರೆಗೆ ಮುಚ್ಚಲಾಗುವುದು ಎನ್ನು ವದಂತಿಗಳು ಹರಿದಾಡುತ್ತಿವೆ. ಹಲವು ಪತ್ರಿಕೆಗಳು, ಜಾಲತಾಣದಲ್ಲಿ ಈ ಸುದ್ದಿ ಹರಿದಾಡುತ್ತಿದ್ದು ಸಾಕಷ್ಟು ವೈರಲ್ ಆಗಿದೆ.
ದೇಗುಲದ ಭದ್ರತೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ನಿಯೋಜಿಸಲು ಕೇಂದ್ರ ಸರ್ಕಾರದ ನಿರ್ಧಾರ ಮಾಡಿದ್ದನ್ನು ವಿರೋಧಿಸಿ ದೇವಸ್ಥಾನದ ಬಾಗಿಲು ಮುಚ್ಚಲಾಗುತ್ತಿದೆ ಎಂದು ಹೇಳಲಾಗಿತ್ತು. ದೇವಾಲಯದ ಟ್ರಸ್ಟ್ ಬಂದ್ಗೆ ಕರೆನೀಡಿದೆ ಎಂದು ವರದಿಯಲ್ಲಿ ತಿಳಿಸಲಾಗಿತ್ತು.

ಆದರೆ, ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದು, ಇದೆಲ್ಲಾ ಸುಳ್ಳು ಸುದ್ದಿ ಎಂದು ಹೇಳಿದೆ. ಶ್ರೀ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ (SSST) ತನ್ನ ವೆಬ್ಸೈಟ್ನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದೆ. "ಎಲ್ಲಾ ಆರತಿಗಳು ಮತ್ತು ಎಲ್ಲಾ ಧಾರ್ಮಿಕ ಸಂಪ್ರದಾಯಗಳು ಸೋಮವಾರ 01 ನೇ ಮೇ 2023 ರಂದು ಯಥಾಪ್ರಕಾರ ಮುಂದುವರಿಯುತ್ತದೆ. ಸಂಸ್ಥಾನದ ಎಲ್ಲಾ ಸೌಲಭ್ಯಗಳಾದ ಶ್ರೀ ಸಾಯಿ ಪ್ರಸಾದಾಲಯ, ಎಲ್ಲಾ ಭಕ್ತ ನಿವಾಸ ಸ್ಥಳಗಳು ಮತ್ತು ಆಸ್ಪತ್ರೆಗಳು ಇತ್ಯಾದಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಈ ಮಾಹಿತಿಯನ್ನು ಸಂಸ್ಥಾನದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಜಾಧವ್ ಅವರು ಒದಗಿಸಿದ್ದಾರೆ" ಎಂದು ಪ್ರಕಟಿಸಿದೆ.
ಪ್ರತಿವರ್ಷ ಲಕ್ಷಾಂತರ ಭಕ್ತರ ಭೇಟಿ
ಮಹಾರಾಷ್ಟ್ರದ ಅಹಮದ್ನಗರದಲ್ಲಿರುವ ಸಣ್ಣ ಪಟ್ಟಣದಲ್ಲಿರುವ ಶಿರಡಿ ಸಾಯಿ ಬಾಬಾ ದೇವಸ್ಥಾನಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ದೇಶದ ಮೂಲೆ ಮೂಲೆಗಳಿಂದ ಸಾಯಿ ಬಾಬಾ ದರ್ಶನ ಮಾಡಲು ಜನ ಇಲ್ಲಿಗೆ ಧಾವಿಸುತ್ತಾರೆ. ತಿಂಗಳು, ವಾರಗಳ ಮೊದಲೇ ವಿಮಾನ, ಬಸ್, ರೈಲು ಟಿಕೆಟ್ ಬುಕ್ ಮಾಡಿರುತ್ತಾರೆ, ಮೇ 1ರಿಂದ ದೇವಸ್ಥಾನ ಮುಚ್ಚುತ್ತಾರೆ ಎನ್ನುವ ಸುದ್ದಿ ಭಕ್ತರಲ್ಲಿ ಆತಂಕವನ್ನು ಉಂಟು ಮಾಡಿತ್ತು ಸದ್ಯ ದೇವಸ್ಥಾನ ಆಡಳಿತ ಮಂಡಳಿ ಭಕ್ತರ ಆತಂಕವನ್ನು ದೂರಾಗಿಸಿದೆ.
ಪ್ರಾಥಮಿಕವಾಗಿ ಕೈಗಾರಿಕಾ ಸ್ಥಾಪನೆಗಳು, ಮೆಟ್ರೋ ನಿಲ್ದಾಣಗಳು ಮತ್ತು ವಿಮಾನ ನಿಲ್ದಾಣಗಳನ್ನು ರಕ್ಷಿಸುವ ಪಡೆಗಳಾದ ಸಿಐಎಸ್ಎಫ್ ಪಡೆಯನ್ನು ದೇವಸ್ಥಾನದ ಭದ್ರತೆಗೆ ನಿಯೋಜನೆ ಮಾಡುವುದನ್ನು ವಿರೋಧಿಸಿ ಆಡಳಿತ ಮಂಡಳಿ ಪ್ರತಿಭಟನೆಗೆ ಮುಂದಾಗಿತ್ತು ಎನ್ನಲಾಗಿದೆ.
ಒಂದು ವೇಳೆ ದೇವಸ್ಥಾನದ ಬಾಗಿಲು ಮುಚ್ಚಿದ್ದರೆ ಸಾವಿರಾರು ಜನರ ಮೇಲೆ ಪರಿಣಾಮ ಬೀರುತ್ತಿತ್ತು. ದೇವಸ್ಥಾನವನ್ನೇ ನಂಬಿಕೊಂಡಿರುವ ಹೋಟೆಲ್, ಅಂಗಡಿಗಳು, ವಾಹನಗಳು ಮುಂತಾದ ವ್ಯವಹಾರಗಳ ಮೇಲೆ ಹೊಡೆತ ಬೀಳುತ್ತಿತ್ತು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications