ಶಿರಡಿ ಸಾಯಿಬಾಬಾ ಸಮಾಧಿಸ್ಥರಾಗಿ ನೂರು ವರ್ಷ
ಬೆಂಗಳೂರು, ಜೂನ್ 07 : ಸಂತ, ಫಕೀರ, ಸದ್ಗುರು, ಕಲಿಯುಗದ ಪವಾಡಪುರುಷ, ದೇವರ ಅವತಾರವೆಂದೇ ಖ್ಯಾತಿ ಪಡೆದಿರುವ, ಹಿಂದೂ ಮುಸ್ಲಿಂ ಮತ್ತಾವುದೇ ಜಾತಿಯನ್ನು ಮೀರಿ ಭಕ್ತಗಣವನ್ನು ಪಡೆದಿರುವ ಶಿರಡಿ ಸಾಯಿಬಾಬಾ ಅವರು ಸಮಾಧಿಸ್ಥರಾಗಿ (1918) ಒಂದು ನೂರು ವರುಷ ತುಂಬುತ್ತಿದೆ.
ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯಲ್ಲಿರುವ ಶಿರಡಿಯಲ್ಲಿ ಅವರ ಸಮಾಧಿಯಿದ್ದು, ಅವರನ್ನು ದೇವರ ಅವತಾರವೆಂದೇ ಜನ ಪೂಜಿಸುತ್ತಾರೆ, ಭಜಿಸುತ್ತಾರೆ. ದೇಶದ ಮೂರನೇ ಅತ್ಯಂತ ಶ್ರೀಮಂತ ದೇಗುಲಗಳಲ್ಲಿ ಒಂದಾಗಿರುವ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಈಗ ಪುಣ್ಯಸ್ಮರಣೆಯ ಶತಮಾನೋತ್ಸವದ ಸಿದ್ಧತೆಗಳು ನಡೆದಿವೆ.
ಕರ್ನಾಟಕದಾದ್ಯಂತ ಶಿರಡಿ ಸಾಯಿಬಾಬಾ ಅವರ ಭಕ್ತರಿದ್ದಾರೆ. ಬೆಂಗಳೂರಿನಲ್ಲಿಯೂ ಪ್ರತಿ ಗುರುವಾರ ಶಿರಡಿ ಸಾಯಿಬಾಬಾ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಸಲಾಗುತ್ತದೆ. ನರಸಿಂಹರಾಜ ಕಾಲೋನಿಯಲ್ಲಿ ಪ್ರತಿ ಗುರುವಾರ ಅವರ ಭಕ್ತಾದಿಗಳ ಸೇರಿ, ಸಂಜೆ ರಸ್ತೆರಸ್ತೆಗಳಲ್ಲಿ ರಂಗೋಲಿ ಹಾಕಿ ಮೆರವಣಿಗೆಯನ್ನೂ ಮಾಡಿ ಪುನೀತರಾಗುತ್ತಾರೆ. [ಸಾಯಿಬಾಬಾ ಮೇಲೆ ಕಣ್ಣಿಟ್ಟಿದ್ದ ಅಮೆರಿಕದ ಬೇಹುಗಾರಿಕಾ ಸಂಸ್ಥೆ]

ಅತ್ಯಂತ ಸರಳಾತಿಸರಳ ವ್ಯಕ್ತಿಯಾಗಿದ್ದ ಸಾಯಿಬಾಬಾ ಅವರ ಜೀವನಾಧಾರಿತ ಟಿವಿ ಧಾರಾವಾಹಿಯನ್ನು ನಿರ್ಮಿಸಲು ಶ್ರೀ ಶಿರಡಿ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ನಿರ್ಧಾರ ತೆಗೆದುಕೊಂಡಿದೆ. ಆಸಕ್ತ ನಿರ್ಮಾಪಕರು ಸಂಪರ್ಕಿಸಬೇಕೆಂದು ಸಂಸ್ಥಾನದ ಚೇರ್ಮನ್ ಆಗಿರುವ ಡಾ. ಸುರೇಶ್ ಹವಾರೆ ಅವರು ಕರೆ ನೀಡಿದ್ದಾರೆ.
2017ರ ಅಕ್ಟೋಬರ್ 1ರಿಂದ 18ನೇ ತಾರೀಖಿನವರೆಗೆ ಶಿರಡಿ ಸಾಯಿಬಾಬಾ ಸಮಾಧಿ ಶತಮಾನೋತ್ಸವವನ್ನು ಆಚರಿಸಲಾಗುವುದು ಎಂದು ಸುರೇಶ್ ಹವಾರೆ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಭಕ್ತಾದಿಗಳು ಸಾಯಿಬಾಬಾ ಅವರ ಜೀವನವನ್ನು ಅರಿತುಕೊಳ್ಳಬೇಕು, ಅವರ ಜೀವನಕಥೆ ವಿಶ್ವದಾದ್ಯಂತ ಪಸರಿಸಬೇಕು ಎಂಬ ಉದ್ದೇಶ ಅವರದು. [ದೇವೇಗೌಡರ ಜೀವನದಲ್ಲಿ ನಡೆದ ಅತಿದೊಡ್ಡ ಪವಾಡ!]
ಈ ಧಾರಾವಾಹಿ ಹಲವಾರು ಭಾಷೆಗಳಲ್ಲಿ ತಯಾರಾಗಲಿದೆ ಎಂದು ಸುರೇಶ್ ಹವಾರೆ ತಿಳಿಸಿದ್ದಾರೆ. ಈ ಕಾರಣಕ್ಕಾಗಿ ಹಿಂದೆ ಸಾಯಿಬಾಬಾ ಕುರಿತಾಗಿ ಧಾರಾವಾಹಿ ನಿರ್ಮಿಸಿರುವವರು ಅಥವಾ ಹೊಸದಾಗಿ ನಿರ್ಮಿಸಲು ಉತ್ಸುಕರಾಗಿರುವವರು ಸಂಪರ್ಕಿಸಬೇಕೆಂದು ಕೋರಿದ್ದಾರೆ. ಈ ಧಾರಾವಾಹಿ ಕನ್ನಡದಲ್ಲಿಯೂ ನಿರ್ಮಾಣವಾಗಲೆಂಬುದು ಕನ್ನಡಿಗರ ಆಶಯ. [ಪವಾಡದ ಅನುಭೂತಿ : ಸಾಯಿಬಾಬಾ ಪಾದದ ಬಳಿ ವಿಭೂತಿ!]
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications