ಕೊಲ್ಹಾಪುರದಲ್ಲಿ KSRTC ಬಸ್ ಗಳ ಮೇಲೆ ಶಿವಸೇನೆ ಪುಂಡಾಟಿಕೆ
ಬೆಳಗಾವಿಯಲ್ಲಿ ಕನ್ನಡ ವಿರೋಧಿ ಧೋರಣೆ ಪ್ರದರ್ಶಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಹಾಗೂ ಹಜ್ ಸಚಿವ ರೋಷನ್ ಬೇಗ್ ನೀಡಿದ್ದ ಹೇಳಿಕೆಗೆ ವಿರುದ್ಧವಾಗಿ ಶಿವಸೇನೆಯಿಂದ ಪ್ರತಿಭಟನೆ.
ಕೊಲ್ಹಾಪುರ (ಮಹಾರಾಷ್ಟ್ರ), ಮೇ 22: ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ನೀಡಿದ್ದ ಹೇಳಿಕೆಯೊಂದರ ವಿರುದ್ಧ ಸಿಡಿದೆದ್ದಿರುವ ಶಿವಸೇನೆ ಪಕ್ಷದ ಕಾರ್ಯಕರ್ತರು, ಕೊಲ್ಹಾಪುರದಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳ ಮೇಲೆ ತಮ್ಮ ಪುಂಡಾಟಿಕೆ ತೋರಿದ್ದಾರೆ.
ನಗರ ಪ್ರವೇಶಿಸುತ್ತಿದ್ದ ರಾಜ್ಯ ಸಂಸ್ಥೆಯ ಬಸ್ ಗಳನ್ನು ತಡೆದದ್ದೇ ಅಲ್ಲದೆ, ಅವುಗಳಲ್ಲಿದ್ದ ಕನ್ನಡ ನಾಮಫಲಕಗಳನ್ನು ತೆಗೆದು, ಶಿವಸೇನೆ ಹೆಸರಿನ ನಾಮಫಲಕಗಳನ್ನು ಹಾಕಿ ಪ್ರತಿಭಟನೆ ಮಾಡಿದ್ದಾರೆ.

ಸೋಮವಾರ, ಬೆಳಗಾವಿಗೆ ಭೇಟಿ ನೀಡಿದ್ದ ಸಚಿವ ರೋಷನ್ ಬೇಗ್, ಮಾಧ್ಯಮಗಳೊಂದಿಗೆ ಮಾತನಾಡುವಾಗ ಬೆಳಗಾವಿಯಲ್ಲಿ ಕನ್ನಡ ವಿರೋಧಿ ಧೋರಣೆ ಪ್ರದರ್ಶಿಸುವ ಎಂಇಎಸ್ ಕಾರ್ಯಕರ್ತರು, ಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಬೆಳಗಾವಿಯಲ್ಲಿ ಇರುವವರೆಲ್ಲರೂ ಮೊದಲು ನಾವು ಭಾರತೀಯರು,ಕನ್ನಡಿಗರು ಎಂದು ಅರಿತುಕೊಳ್ಳಬೇಕು. ಕನ್ನಡ ನೆಲಕ್ಕೆ ಗೌರವ ಕೊಡಬೇಕು. ಅದನ್ನು ಬಿಟ್ಟು ಕನ್ನಡ ವಿರೋಧಿ ಪ್ರತಿಭಟನೆಗಳನ್ನು ಮಾಡುವುದು, ಕನ್ನಡ ವಿರೋಧಿ ಧೋರಣೆಗಳನ್ನು ಅನುಸರಿಸುವುದು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ಇನ್ನು ಮುಂದೆ ಬೆಳಗಾವಿಯಲ್ಲಿ ಕನ್ನಡ ವಿರೋಧಿ ಘೋಷಣೆಗಳಿಗೆ ಬ್ರೇಕ್ ಹಾಕಲಾಗುವುದು ಎಂದು ಹೇಳಿದ್ದರು.
ಇವರ ಹೇಳಿಕೆಯನ್ನು ವಿರೋಧಿಸಿ, ಶಿವಸೇನೆ ಪ್ರತಿಭಟನೆಗೆ ಇಳಿದಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications