ಚಪ್ಪಲಿ ಏಟು ಪ್ರಕರಣ: ಸಂಸದನಿಗೆ ಶಿವಸೇನೆ ನೋಟಿಸ್

ನವದೆಹಲಿಯಲ್ಲಿ ಗುರುವಾರ ಬೆಳಗ್ಗೆ ಸುಮಾರು 10:30ರ ಹೊತ್ತಿಗೆ ಏರ್ ಇಂಡಿಯಾ ಸಿಬ್ಬಂದಿಯೊಂದಿಗೆ ಜಗಳವಾಡಿದ್ದ ಸಂಸದ ರವೀಂದ್ರ, ಆ ಸಂಸ್ಥೆಯ ಸಿಬ್ಬಂದಿ ಸುಕುಮಾರ್ ಎಂಬುವರಿಗೆ ಚಪ್ಪಲಿಯಿಂದ ಹೊಡೆದಿದ್ದರು.

ಮುಂಬೈ, ಮಾರ್ಚ್ 23: ಏರ್ ಇಂಡಿಯಾ ವಿಮಾನ ಸಿಬ್ಬಂದಿ ಸುಕುಮಾರ್ ಎಂಬುವರಿಗೆ ಚಪ್ಪಲಿಯಿಂದ ಹೊಡೆದು ರಂಪಾಟ ಮಾಡಿರುವ ಶಿವಸೇನಾ ಸಂಸದ ರವೀಂದ್ರ ಗಾಯಕ್ವಾಡ್ ಅವರಿಗೆ ನೋಟಿಸ್ ನೀಡಿರುವ ಶಿವಸೇನೆ, ಈ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿದೆ.

ಗುರುವಾರ (ಮಾರ್ಚ್ 23) ಬೆಳಗ್ಗೆ ಪುಣೆಯಿಂದ ದೆಹಲಿಗೆ ಏರ್ ಇಂಡಿಯಾ ವಿಮಾನದಲ್ಲಿ ಬಂದಿಳಿದ ಮಹಾರಾಷ್ಟ್ರದ ಒಸ್ಮಾನಾಬಾದ್ ಕ್ಷೇತ್ರದ ಸಂಸದ ರವೀಂದ್ರ ಗಾಯಕ್ವಾಡ್, ಏರ್ ಇಂಡಿಯಾದಿಂದ ತಮಗಾಗುತ್ತಿರುವ ಕೆಲವಾರು ತೊಂದರೆಗಳ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ವಿಮಾನ ಬಿಟ್ಟು ಇಳಿಯದೇ ಪಟ್ಟಾಗಿ ಕುಳಿತಿದ್ದರು.[ಚಪ್ಪಲಿಯೇಟು ಪ್ರಕರಣ: ಶಿವಸೇನಾ ಸಂಸದ ವಿರುದ್ಧ ಎಫ್ಐಆರ್]

Shiv Sena sends notice to MP Ravindra Gayakwad over his slapping controversy

ಅವರನ್ನು ಎಬ್ಬಿಸಲು ಬಂದ ಸಿಬ್ಬಂದಿಯೊಡನೆ ವಾಗ್ವಾದ ನಡೆಸಿದ್ದ ಅವರು, ಆ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಂಡು ಸಿಬ್ಬಂದಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದಿದ್ದರು.

ಆನಂತರ ,ಸುದ್ದಿಗಾರರೊಂದಿಗೆ ಮಾತನಾಡಿ, ''ಬಾಯಿಗೆ ಬಂದಂತೆ ಮಾತನಾಡಿದ್ದರಿಂದಾಗಿ ಏರ್ ಇಂಡಿಯಾ ಸಿಬ್ಬಂದಿಗೆ 25 ಬಾರಿ ಚಪ್ಪಲಿಯಿಂದ ಹೊಡೆದಿದ್ದೇನೆ'' ಎಂದೂ ಹೇಳಿಕೊಂಡಿದ್ದರು.

ರವೀಂದ್ರ ಈ ನಡೆ ದೇಶದಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದೆ. ಅತ್ತ, ನವದೆಹಲಿಯ ಠಾಣೆಯೊಂದರಲ್ಲಿ ಎಫ್ ಐ ಆರ್ ಕೂಡ ದಾಖಲಾಗಿದೆ. ಇದಲ್ಲದೆ, ಏರ್ ಇಂಡಿಯಾ ಸಂಸ್ಥೆಯು ರವೀಂದ್ರ ಅವರನ್ನು ಪ್ರಯಾಣಿಕರ ಕಪ್ಪುಪಟ್ಟಿಗೆ ಸೇರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+