ಶಿವಸೇನೆಗೆ ಮತ್ತೊಂದು ಭರ್ಜರಿ ಶಾಕ್ ನೀಡಿದ ಬಿಜೆಪಿ
ನವದೆಹಲಿ, ನ 18: ಮಹಾರಾಷ್ಟ್ರದಲ್ಲಿ ಚುನಾವಣಾಪೂರ್ವ ಮೈತ್ರಿ ಧಿಕ್ಕರಿಸಿ, ಎನ್ಸಿಪಿ - ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸರಕಾರ ರಚಿಸಲು ಮುಂದಾಗಿರುವ ಶಿವಸೇನೆಗೆ ಬಿಜೆಪಿ ಮತ್ತೊಂದು ಶಾಕ್ ನೀಡಿದೆ.
ಮುಖ್ಯಮಂತ್ರಿ 50:50 ಹಂಚಿಕೆ ಮಾಡಿಕೊಳ್ಳಲು, ಬಿಜೆಪಿ ಒಪ್ಪದೇ, ಶಿವಸೇನೆಯ ಹಠಕ್ಕೆ ಸೊಪ್ಪು ಹಾಕಿರಲಿಲ್ಲ. ಈಗ, ಆ ಪಕ್ಷವನ್ನು ಎನ್ಡಿಎ ಮೈತ್ರಿಕೂಟದಿಂದಲೇ ದೂರವಾಗಿಸುವ ಕೆಲಸವನ್ನು ಬಿಜೆಪಿ ಮಾಡಿದೆ.
ಇಂದಿನಿಂದ (ನ 18) ಸಂಸತ್ತಿನ ಉಭಯ ಸದನಗಳ ಕಲಾಪ ಆರಂಭವಾಗಲಿದೆ. ಆಡಳಿತ ಪಕ್ಷದ ಸಾಲಿನಲ್ಲಿದ್ದ ಶಿವಸೇನೆಗೆ ವಿರೋಧ ಪಕ್ಷಗಳ ಸಾಲಿನಲ್ಲಿ ಆಸನ ವ್ಯವಸ್ಥೆ ಮಾಡಲಾಗಿದೆ.

ಈ ಬಗ್ಗೆ ಮಾತನಾಡುತ್ತಿದ್ದ ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಪ್ರಲ್ಹಾದ್ ಜೋಷಿ, "ಶಿವಸೇನೆ ಸಂಸದರಿಗೆ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಸಾಲಿನಲ್ಲಿ ಸ್ಥಾನಗಳನ್ನು ಮಂಜೂರು ಮಾಡಲಾಗುತ್ತಿದೆ" ಎಂದು ಸಚಿವರು ಹೇಳಿದ್ದಾರೆ.
"ಶಿವಸೇನೆ ಸಚಿವರು ರಾಜೀನಾಮೆಯನ್ನು ನೀಡಿದ್ದಾರೆ ಮತ್ತು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಶಿವಸೇನೆ, ಕಾಂಗ್ರೆಸ್ ಮತ್ತು ಎನ್ಸಿಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದೆ. ನಿನ್ನೆ ನಡೆದ ಎನ್ಡಿಎ ಕೂಟದ ಸಭೆಯಲ್ಲಿ ಶಿವಸೇನೆ ಭಾಗವಹಿಸಲಿಲ್ಲ" ಎಂದು ಸಚಿವ ಜೋಷಿ ಹೇಳಿದ್ದಾರೆ.
"ಹೀಗಾಗಿ ಸ್ವಾಭಾವಿಕವಾಗಿ ಶಿವಸೇನೆಗೆ ವಿರೋಧ ಪಕ್ಷದ ಸಾಲಿನಲ್ಲಿ ಆಸನ ವ್ಯವಸ್ಥೆ ಮಾಡಲಾಗಿದೆ" ಎಂದು ಪ್ರಲ್ಹಾದ್ ಜೋಷಿ ಹೇಳಿದ್ದಾರೆ. ಮೋದಿ ಸರಕಾರದಲ್ಲಿ ಶಿವಸೇನೆಯ ಏಕೈಕ ಸಚಿವರಾಗಿದ್ದ ಅರವಿಂದ್ ಸಾವಂತ್, ಇತ್ತೀಚೆಗೆ ರಾಜೀನಾಮೆ ನೀಡಿ, ಸರಕಾರದಿಂದ ಹೊರಬಂದಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications