Get Updates
Get notified of breaking news, exclusive insights, and must-see stories!

Shivaji Statue Collapses: ಮೋದಿ ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ

ಮುಂಬೈ ಆಗಸ್ಟ್ 27: ಕಳೆದ ವರ್ಷ ನೌಕಾಪಡೆಯ ದಿನದಂದು ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಪ್ರತಿಮೆ ಕುಸಿದು ಬಿದ್ದಿದೆ. ಈ ಘಟನೆಯಿಂದಾಗಿ ಭಾರತೀಯ ನೌಕಾಪಡೆ ಕಳವಳ ವ್ಯಕ್ತಪಡಿಸಿದ್ದು ತನಿಖೆಗೆ ಆದೇಶಿಸಿದೆ. ಶಿವಾಜಿ ಪ್ರತಿಮೆ ಕುಸಿಯಲು ಕಾರಣ ಪತ್ತೆ ಹಚ್ಚಿ, ದುರಸ್ತಿ ಕಾರ್ಯ ಆರಂಭಿಸಲು ತಂಡವನ್ನು ನಿಯೋಜಿಸಲಾಗಿದೆ.

ಹೌದು.. ಕಳೆದ ವರ್ಷ ನೌಕಾಪಡೆಯ ದಿನದಂದು ಈ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದರು. ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್ ಕೋಟೆಯಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ 35 ಅಡಿ ಎತ್ತರದ ಪ್ರತಿಮೆ ಕುಸಿದು ಬಿದ್ದಿದೆ.

Shivaji Maharaj statue inaugurated by PM Modi last year collapses in Maharashtra

ಈ ಬಗ್ಗೆ ಭಾರತೀಯ ನೌಕಾಪಡೆ ತಡರಾತ್ರಿ ಹೇಳಿಕೆ ನೀಡಿದೆ. ಘಟನೆಯ ಕಾರಣವನ್ನು ತಕ್ಷಣವೇ ತನಿಖೆ ಮಾಡಲು ಮತ್ತು ಸಾಧ್ಯವಾದಷ್ಟು ಬೇಗ ಪ್ರತಿಮೆಯನ್ನು ಸರಿಪಡಿಸಿ ಪುನಃಸ್ಥಾಪಿಸಲು ತಂಡವನ್ನು ನಿಯೋಜಿಸಲಾಗಿದೆ ಎಂದು ಅದು ಹೇಳಿದೆ. ಡಿಸೆಂಬರ್ 4, 2023 ರಂದು ನೌಕಾಪಡೆಯ ದಿನದಂದು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದರು. ಆದರೆ ಅದು ಒಂದು ವರ್ಷ ಪೂರ್ಣಗೊಳಿಸುವ ಮುನ್ನವೇ ನೆಲಕ್ಕಚ್ಚಿದೆ. ಈ ಘಟನೆ ಸಿಂಧುದುರ್ಗದ ನಿವಾಸಿಗಳ ಆತಂಕವನ್ನು ಹೆಚ್ಚಿಸಿದೆ. ಇದರ ಹಿಂದಿನ ಸೂಚನೆ ಬಗ್ಗೆ ಸ್ಥಳೀಯರು ಆತಂಕಗೊಂಡಿದೆ.

ಇನ್ನೊಂದೆಡೆ ಪ್ರತಿಮೆ ನಿರ್ಮಾಣ ಮಾಡಲು ಕಳಪೆ ಮಟ್ಟದ ವಸ್ತುಗಳನ್ನು ಬಳಕೆ ಮಾಡಿರುವುದೇ ಪ್ರತಿಮೆ ಕುಸಿಯಲು ಕಾರಣ ವಿಪಕ್ಷಗಳು ಆರೋಪ ಮಾಡಿವೆ. ಈ ಘಟನೆ ವಿರೋಧ ಪಕ್ಷಗಳ ವಾಗ್ದಾಳಿಗೂ ಕಾರಣವಾಗಿದೆ. ಮೋದಿ ಸರ್ಕಾರದಲ್ಲಿ ಕಾಮಗಾರಿಗಳು ಕಳಪೆ ಮಟ್ಟದ್ದಾಗಿರುತ್ತವೆ ಅನ್ನೋದಕ್ಕೆ ಇದೊಂದು ನೇರ ನಿದರ್ಶನ ಎಂದು ವಿಪಕ್ಷಗಳು ದಾಳಿ ಮಾಡಿವೆ.

Shivaji Maharaj statue inaugurated by PM Modi last year collapses in Maharashtra

ಗುತ್ತಿಗೆದಾರರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುವುದು? ಪ್ರಿಯಾಂಕಾ ಚತುರ್ವೇದಿ ಪ್ರಶ್ನೆ

ಪ್ರತಿಮೆ ನಿರ್ಮಾಣ ಕಾಮಗಾರಿಯ ಕಳಪೆ ಗುಣಮಟ್ಟದ ಬಗ್ಗೆ ವಿರೋಧ ಪಕ್ಷಗಳು ಮಹಾರಾಷ್ಟ್ರದ ಮಹಾಯುತಿ ಸಮ್ಮಿಶ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದೆ. ಪ್ರತಿಮೆ ನಿರ್ಮಾಣದ ಗುತ್ತಿಗೆ ನೀಡುವಲ್ಲಿ ಎಷ್ಟು ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಶಿವಸೇನೆ (ಯುಬಿಟಿ) ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಪ್ರಶ್ನಿಸಿದ್ದಾರೆ.

Shivaji Maharaj statue inaugurated by PM Modi last year collapses in Maharashtra

ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪ್ರಿಯಾಂಕಾ ಚತುರ್ವೇದಿ ರಾಜ್ಯ ಸರ್ಕಾರಕ್ಕೆ ಪ್ರಶ್ನೆಗಳನ್ನು ಎತ್ತಿದ್ದಾರೆ. ''ಇದನ್ನು ನಿರ್ಮಾಣ ಮಾಡಿದ ಗುತ್ತಿಗೆದಾರ ಯಾರು? ಥಾಣೆ ಮೂಲದ ಗುತ್ತಿಗೆದಾರರಿಗೆ ಕಾಮಗಾರಿ ನೀಡಿರುವುದು ನಿಜವೇ? ಗುತ್ತಿಗೆದಾರರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುವುದು? 'ದೋಕಾ ಸರ್ಕಾರ'ಕ್ಕೆ ಗುತ್ತಿಗೆದಾರರು ಕೊಟ್ಟ 'ಹಣ' ಎಷ್ಟು?'' ಎಂದು ಕೆಣಕಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಒವೈಸಿ ಕಿಡಿ

ಅಲ್ಲದೆ ಈ ಘಟನೆಯ ಬಗ್ಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಸಾದುದ್ದೀನ್ ಓವೈಸಿ ಅವರು ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ, '35 ಅಡಿ ಎತ್ತರದ ಶಿವಾಜಿ ಪ್ರತಿಮೆಯನ್ನು ನರೇಂದ್ರ ಮೋದಿ ಉದ್ಘಾಟಿಸಿ ಒಂದು ವರ್ಷದ ನಂತರ ಕುಸಿದಿದೆ. ಇದು ಮೋದಿ ಸರಕಾರ ಸೃಷ್ಟಿಸಿರುವ ಮೂಲಸೌಕರ್ಯದ ಕಳಪೆ ಗುಣಮಟ್ಟವನ್ನು ಪ್ರತಿಬಿಂಬಿಸುತ್ತದೆ. ಶಿವಾಜಿ ಅವರು ಸಮಾನತೆ ಮತ್ತು ಜಾತ್ಯತೀತತೆಯ ಸಂಕೇತವಾಗಿದ್ದರು, ಅವರ ಪ್ರತಿಮೆಯ ಪತನವು ಶಿವಾಜಿಯ ದೃಷ್ಟಿಗೆ ನರೇಂದ್ರ ಮೋದಿಯವರ ಬದ್ಧತೆಯ ಕೊರತೆಯನ್ನು ತೋರಿಸುತ್ತದೆ' ಎಂದು ಕಿಡಿ ಕಾರಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+