ಭಗತ್ಸಿಂಗ್ ಭಯೋತ್ಪಾದಕ ಎಂದ ದೆಹಲಿ ವಿವಿ!
ನವದೆಹಲಿ, ಏಪ್ರಿಲ್, 28: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ದೇಶದ್ರೋಹಿ ಘೋಷಣೆ ಗಲಾಟೆ ಒಂದು ಹಂತಕ್ಕೆ ಬಂದು ನಿಂತಿರುವಾಗಲೇ ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಎಡವಟ್ಟಾಗಿದೆ.
ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರನ್ನು ದೆಹಲಿ ವಿಶ್ವವಿದ್ಯಾಲಯದ ಪಠ್ಯವೊಂದರಲ್ಲಿ 'ಕ್ರಾಂತಿಕಾರಿ ಭಯೋತ್ಪಾದಕ' ಎಂದು ಕರೆದಿರುವುದು ಹೊಸ ವಿವಾದ ಹುಟ್ಟುಹಾಕಿದೆ.[ಬೆಂಗಳೂರಿನಲ್ಲಿ ಭಗತ್ ಕನಸಿನ ಭಾರತ ಬಿಚ್ಚಿಟ್ಟ ಮೊಮ್ಮಗ]

ಇತಿಹಾಸಕಾರರಾದ ಬಿಪಿನ್ ಚಂದ್ರ ಮತ್ತು ಮೃದುಲಾ ಮುಖರ್ಜಿ ಅವರು ಬರೆದಿರುವ 'ಭಾರತದ ಸ್ವಾತಂತ್ರ್ಯ ಹೋರಾಟ' ಎಂಬ ಪುಸ್ತಕದ 20ನೇ ಅಧ್ಯಾಯದಲ್ಲಿ ಭಗತ್ ಸಿಂಗ್ ಅಲ್ಲದೆ, ಚಂದ್ರಶೇಖರ್ ಆಜಾದ್, ಸೂರ್ಯ ಸೇನ್ ಮತ್ತು ಇತರರನ್ನು 'ಕ್ರಾಂತಿಕಾರಿ ಭಯೋತ್ಪಾದಕರು' ಎಂದು ಹೇಳಲಾಗಿದೆ.
ಈ ತಪ್ಪನ್ನು ಸರಿಪಡಿಸುವಂತೆ ಕೋರಿ ಭಗತ್ ಸಿಂಗ್ ಕುಟುಂಬದ ಸದಸ್ಯರು ದೆಹಲಿ ವಿ.ವಿ ಅಧಿಕಾರಿಗಳು ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ಆಗ್ರಹಿಸಿದ್ದಾರೆ.[ಭಗತ್ ಸಿಂಗ್ ಜನ್ಮಸ್ಥಳ ಕಾಪಾಡುತ್ತೇವೆ ಎಂದ ಪಾಕ್]
'ಚಿತ್ತಗಾಂಗ್ ಚಳವಳಿ' ಮತ್ತು ಸ್ಯಾಂಡರ್ಸ್ ಹತ್ಯೆಯನ್ನು ಈ ಪಠ್ಯಪುಸ್ತಕದಲ್ಲಿ 'ಭಯೋತ್ಪಾದಕ ಕೃತ್ಯ' ಎಂದು ಕರೆಯಲಾಗಿದೆ. ಭಗತ್ ಸಿಂಗ್ ಕುಟುಂಬದ ಸದಸ್ಯರು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಪತ್ರ ಬರೆದು ಕೂಡಲೇ ತಿದ್ದುಪಡಿ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.[ಜೈಲಿನಿಂದ ಬಿಡುಗಡೆಯಾದ ಕನ್ಹಯ್ಯಾ ಮೋದಿ ಬಗ್ಗೆ ಹೇಳಿದ್ದೇನು?]
ನವದೆಹಲಿಯ ಜವಾಹರಲಾಲ್ ನೆಹರು ವಿವಿಯಲ್ಲಿ ಭಯೋತ್ಪಾದಕ ಅಫ್ಜಲ್ ಗುರು ಪರ, ಭಾರತದ ವಿರುದ್ಧ ಘೋಷಣೆ ಕೂಗಿದ್ದು ದೊಡ್ಡ ಸುದ್ದಿಯಾಗಿತ್ತು. ವಿದ್ಯಾರ್ಥಿ ಸಂಘದ ಮುಖಂಡ ಕನ್ಹಯ್ಯಾ ಕುಮಾರ್ ನನ್ನು ಬಂಧನ ಮಾಡಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications