ಭಗತ್ಸಿಂಗ್ ಭಯೋತ್ಪಾದಕ ಎಂದ ದೆಹಲಿ ವಿವಿ!
ನವದೆಹಲಿ, ಏಪ್ರಿಲ್, 28: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ದೇಶದ್ರೋಹಿ ಘೋಷಣೆ ಗಲಾಟೆ ಒಂದು ಹಂತಕ್ಕೆ ಬಂದು ನಿಂತಿರುವಾಗಲೇ ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಎಡವಟ್ಟಾಗಿದೆ.
ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರನ್ನು ದೆಹಲಿ ವಿಶ್ವವಿದ್ಯಾಲಯದ ಪಠ್ಯವೊಂದರಲ್ಲಿ 'ಕ್ರಾಂತಿಕಾರಿ ಭಯೋತ್ಪಾದಕ' ಎಂದು ಕರೆದಿರುವುದು ಹೊಸ ವಿವಾದ ಹುಟ್ಟುಹಾಕಿದೆ.[ಬೆಂಗಳೂರಿನಲ್ಲಿ ಭಗತ್ ಕನಸಿನ ಭಾರತ ಬಿಚ್ಚಿಟ್ಟ ಮೊಮ್ಮಗ]

ಇತಿಹಾಸಕಾರರಾದ ಬಿಪಿನ್ ಚಂದ್ರ ಮತ್ತು ಮೃದುಲಾ ಮುಖರ್ಜಿ ಅವರು ಬರೆದಿರುವ 'ಭಾರತದ ಸ್ವಾತಂತ್ರ್ಯ ಹೋರಾಟ' ಎಂಬ ಪುಸ್ತಕದ 20ನೇ ಅಧ್ಯಾಯದಲ್ಲಿ ಭಗತ್ ಸಿಂಗ್ ಅಲ್ಲದೆ, ಚಂದ್ರಶೇಖರ್ ಆಜಾದ್, ಸೂರ್ಯ ಸೇನ್ ಮತ್ತು ಇತರರನ್ನು 'ಕ್ರಾಂತಿಕಾರಿ ಭಯೋತ್ಪಾದಕರು' ಎಂದು ಹೇಳಲಾಗಿದೆ.
ಈ ತಪ್ಪನ್ನು ಸರಿಪಡಿಸುವಂತೆ ಕೋರಿ ಭಗತ್ ಸಿಂಗ್ ಕುಟುಂಬದ ಸದಸ್ಯರು ದೆಹಲಿ ವಿ.ವಿ ಅಧಿಕಾರಿಗಳು ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ಆಗ್ರಹಿಸಿದ್ದಾರೆ.[ಭಗತ್ ಸಿಂಗ್ ಜನ್ಮಸ್ಥಳ ಕಾಪಾಡುತ್ತೇವೆ ಎಂದ ಪಾಕ್]
'ಚಿತ್ತಗಾಂಗ್ ಚಳವಳಿ' ಮತ್ತು ಸ್ಯಾಂಡರ್ಸ್ ಹತ್ಯೆಯನ್ನು ಈ ಪಠ್ಯಪುಸ್ತಕದಲ್ಲಿ 'ಭಯೋತ್ಪಾದಕ ಕೃತ್ಯ' ಎಂದು ಕರೆಯಲಾಗಿದೆ. ಭಗತ್ ಸಿಂಗ್ ಕುಟುಂಬದ ಸದಸ್ಯರು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಪತ್ರ ಬರೆದು ಕೂಡಲೇ ತಿದ್ದುಪಡಿ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.[ಜೈಲಿನಿಂದ ಬಿಡುಗಡೆಯಾದ ಕನ್ಹಯ್ಯಾ ಮೋದಿ ಬಗ್ಗೆ ಹೇಳಿದ್ದೇನು?]
ನವದೆಹಲಿಯ ಜವಾಹರಲಾಲ್ ನೆಹರು ವಿವಿಯಲ್ಲಿ ಭಯೋತ್ಪಾದಕ ಅಫ್ಜಲ್ ಗುರು ಪರ, ಭಾರತದ ವಿರುದ್ಧ ಘೋಷಣೆ ಕೂಗಿದ್ದು ದೊಡ್ಡ ಸುದ್ದಿಯಾಗಿತ್ತು. ವಿದ್ಯಾರ್ಥಿ ಸಂಘದ ಮುಖಂಡ ಕನ್ಹಯ್ಯಾ ಕುಮಾರ್ ನನ್ನು ಬಂಧನ ಮಾಡಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications