ಉತ್ತರಾಖಂಡ ಮದರಸಾ ಧ್ವಂಸ: ಭುಗಿಲೆದ್ದ ಹಿಂಸಾಚಾರ; ಕಂಡಲ್ಲಿ ಗುಂಡು ಆದೇಶ
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಧಿಕಾರಿಗಳು ಅಕ್ರಮವಾಗಿ ನಿರ್ಮಿಸಿದ್ದ ಮದರಸಾವನ್ನು ಧ್ವಂಸಗೊಳಿಸಲು ಹೋದಾಗ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದು 50 ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.
ವನಭುಲ್ಪುರದಲ್ಲಿ ಮದರಸಾ ಧ್ವಂಸವನ್ನು ವಿರೋಧಿಸಿದ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿತು. ಇವರೆಲ್ಲರೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರದೇಶದಲ್ಲಿ ಕಂಡಲ್ಲಿ ಗುಂಡಿನ ದಾಳಿಗೆ ಆದೇಶ ನೀಡಲಾಗಿದ್ದು, ಭದ್ರತೆಯನ್ನು ಬಲಪಡಿಸಲಾಗಿದೆ.

ಪೊಲೀಸರಲ್ಲದೆ, ಆಡಳಿತ ಮತ್ತು ನಾಗರಿಕ ಅಧಿಕಾರಿಗಳ ತಂಡವು ಪಕ್ಕದಲ್ಲಿ ಮಸೀದಿಯನ್ನು ಹೊಂದಿರುವ ಮದರಸಾಕ್ಕೆ ಹೋಗಿತ್ತು. ಮೂಲಗಳ ಪ್ರಕಾರ ಜೆಸಿಬಿ ಯಂತ್ರ ಓಡಲು ಆರಂಭಿಸಿದಾಗ ಗುಂಪೊಂದು ಅಧಿಕಾರಿಗಳ ಮೇಲೆ ದಾಳಿ ನಡೆಸಿ ದೂರದಿಂದಲೇ ಕಲ್ಲು ತೂರಾಟ ನಡೆಸಿತು.
ಪೊಲೀಸರು ಅಲ್ಲದೆ ಹಲವಾರು ಆಡಳಿತ ಅಧಿಕಾರಿಗಳು ಹಾಗೂ ಪತ್ರಕರ್ತರು ಗಾಯಗೊಂಡರು. ಪೊಲೀಸರು ಅಶ್ರುವಾಯು ಸಿಡಿಸಿದ್ದರಿಂದ ಹಿಂಸಾಚಾರ ನಡೆಯಿತು. ಪೊಲೀಸ್ ಠಾಣೆಯ ಹೊರಗೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಲಾಯಿತು.
ನಿಷೇಧಾಜ್ಞೆ ಜಾರಿ
ಈ ಪ್ರದೇಶದಲ್ಲಿ ದೊಡ್ಡ ಗುಂಪು ಸೇರುವುದನ್ನು ನಿಷೇಧಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಸಹಜ ಸ್ಥಿತಿ ಕಾಪಾಡಲು ಗಲಭೆಕೋರರನ್ನು ಕಂಡರೆ ಗುಂಡು ಹಾರಿಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ತಿಳಿಸಿದರು.
ನ್ಯಾಯಾಲಯದ ಆದೇಶದ ನಂತರ ತಂಡವು ಅಕ್ರಮ ಕಟ್ಟಡವನ್ನು ಕೆಡವಲು ಹೋಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದರು, ಅಲ್ಲಿನ ಸಮಾಜ ವಿರೋಧಿಗಳು ಪೊಲೀಸರೊಂದಿಗೆ ಜಗಳವಾಡಿದರು. ಪೊಲೀಸ್ ಮತ್ತು ಕೇಂದ್ರ ಪಡೆಗಳ ಹೆಚ್ಚುವರಿ ಅಧಿಕಾರಿಗಳನ್ನು ಅಲ್ಲಿಗೆ ಕಳುಹಿಸಲಾಗುತ್ತಿದೆ. ನಾವು ಎಲ್ಲರಿಗೂ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದೇವೆ. ಕರ್ಫ್ಯೂ ಜಾರಿಯಲ್ಲಿದೆ. ದಂಗೆಕೋರರು ಮತ್ತು ಬೆಂಕಿ ಹಚ್ಚಿದ ಅತಿಕ್ರಮಣದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮದರಸಾ ಮತ್ತು ನಮಾಜ್ ಜಾಗ ಸಂಪೂರ್ಣ ಅಕ್ರಮವಾಗಿದೆ ಎಂದು ಪಾಲಿಕೆ ಆಯುಕ್ತ ಪಂಕಜ್ ಉಪಾಧ್ಯಾಯ ಹೇಳಿದ್ದಾರೆ. ಈ ಹಿಂದೆ ನಗರಸಭೆಯು ಸಮೀಪದ ಮೂರು ಎಕರೆ ಜಾಗವನ್ನು ಸ್ವಾಧೀನಪಡಿಸಿಕೊಂಡು ಅಕ್ರಮ ಮದರಸಾ ಮತ್ತು ನಮಾಜ್ ಸ್ಥಳವನ್ನು ಸೀಲ್ ಮಾಡಿತ್ತು. ಈ ಕಟ್ಟಡಗಳನ್ನು ಗುರುವಾರ ಕೆಡವಲಾಯಿತು.
ಕಲ್ಲು ಎಸೆದ ಕಿಡಿಗೇಡಿಗಳನ್ನು ಗುರುತಿಸಲಾಗುತ್ತಿದ್ದು, ಬಂಧಿಸಲಾಗುವುದು ಎಂದರು. ಮುಖ್ಯ ಕಾರ್ಯದರ್ಶಿ, ಉಪ ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications