ಕನ್ಹಯ್ಯಾ ಕುಮಾರ್ನನ್ನು ಶೂಟ್ ಮಾಡಿದರೆ 11 ಲಕ್ಷ ನಗದು!
ನವದೆಹಲಿ, ಮಾರ್ಚ್, 05: "ದೇಶದ್ರೋಹದ ಆರೋಪದ ಮೇಲೆ ಬಂಧಿತನಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜವಾಹರಲಾಲ್ ನೆಹರು ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ನನ್ನು ಶೂಟ್ ಮಾಡಿ ಕೊಲ್ಲುವವರಿಗೆ 11 ಲಕ್ಷ ರು.!"
ಹೌದು...ಇಂಥದ್ದೊಂದು ಭಿತ್ತಿ ಪತ್ರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾಣಿಸಿಕೊಂಡಿವೆ. ನವದೆಹಲಿಯ ವಿವಿಧ ಸ್ಥಳಗಳಲ್ಲಿ ಕಾಣಿಸಿಕೊಂಡಿರುವ ಚಿಕ್ಕ ಗಾತ್ರದ ಈ ಪೋಸ್ಟರ್ಗಳಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದ ಜನರಿಗಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿರುವ ಪೂರ್ವಾಂಚಲ ಸೇನೆ ಮತ್ತು ಅದರ ಅಧ್ಯಕ್ಷ ಆದರ್ಶ ಶರ್ಮಾ ಅವರ ಹೆಸರು ಕಂಡು ಬಂದಿದೆ.[ಮೋದಿ ಬಗ್ಗೆ ಜೈಲಿನಿಂದ ಬಿಡುಗಡೆಯಾದ ಕನ್ಹಯ್ಯಾ ಹೇಳಿದ್ದೇನು?]

"ದೇಶದ್ರೋಹಿ ಕನ್ಹಯ್ಯಾ ಕುಮಾರ್ನನ್ನು ಶೂಟ್ ಮಾಡಿ ಕೊಲ್ಲುವ ಯಾರಿಗೇ ಆದರೂ ಪೂರ್ವಾಂಚಲ ಸೇನೆ 11 ಲಕ್ಷ ರೂ. ಇನಾಮು ನೀಡಲಿದೆ' ಎಂದು ಹಿಂದಿಯಲ್ಲಿ ಬರೆಯಲಾಗಿದೆ.[ಕನ್ಹಯ್ಯಾ ಕುಮಾರ್ ಘೋಷಣೆ ಕೂಗಿದ 2 ವಿಡಿಯೋ ನಕಲಿ!]
ನಾಲಿಗೆ ಕತ್ತರಿಸುವವರಿಗೆ 5 ಲಕ್ಷ
ಕನ್ಹಯ್ಯಾ ಕಮಾರ್ನ ನಾಲಗೆಯನ್ನು ಕತ್ತರಿಸಿ ತರುವವರಿಗೆ ಐದು ಲಕ್ಷ ರೂ. ನಗದು ಇನಾಮು ಕೊಡುವುದಾಗಿ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ನಾಯಕ ಕುಲದೀಪ್ ವರ್ಶ್ನೆ ಇನ್ನೊಂದೆಡೆ ಹೇಳಿಕೆ ನೀಡಿದ್ದು ವಿವಾದ ಸೃಷ್ಟಿ ಮಾಡಿದೆ.
Pretty shocking poster near Press Club offering reward for killing of #KanhaiyaKumar pic.twitter.com/UTysrGTZ43
— Rezaul Hasan Laskar (@Rezhasan) March 5, 2016
ಇನ್ನೊಬ್ಬ ಜಿನ್ನಾ ಹುಟ್ಟಲು ಬಿಡುವುದಿಲ್ಲ
ಕನ್ಹಯ್ಯಾ ಮೇಲೆ ವಾಗ್ದಾಳಿ ಮಾಡಿರುವ ಬಿಜೆಪಿ ಸಂಸದ ಯೋದಿ ಆದಿತ್ಯನಾಥ್, ಜೆಎನ್ಯುನಲ್ಲಿ ಮುಹಮ್ಮದ್ ಅಲಿ ಜಿನ್ನಾರಂತ ಇನ್ನೊಬ್ಬರನ್ನು ಹುಟ್ಟಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ದೇಶದ್ರೋಹದ ಚಟುವಟಿಕೆ ನಡೆಸುವ ಯಾರನ್ನೇ ಆದರೂ ನಾಶ ಮಾಡದೇ ಬಿಡುವುದಿಲ್ಲ ಎಂದು ಅಬ್ಬರಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications