Shraddha Walker case: ಆರೋಪಿ ಪೂನಾವಾಲಾ ಮೇಲೆ ನ್ಯಾಯಾಲಯ ಆರೋಪ
ದೆಹಲಿ ಮೇ 9: ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ದೆಹಲಿಯ ಸಾಕೇತ್ ಕೋರ್ಟ್ ಮಂಗಳವಾರ (ಮೇ 09) ಅಫ್ತಾಬ್ ಪೂನಾವಾಲಾ ವಿರುದ್ಧ ಕೊಲೆ ಮತ್ತು ಸಾಕ್ಷ್ಯ ನಾಶದ ಆರೋಪಗಳನ್ನು ಮಾಡಿದೆ. ದೆಹಲಿಯ ಸಾಕೇತ್ ನ್ಯಾಯಾಲಯ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 201 (ಸಾಕ್ಷ್ಯ ನಾಶಕ್ಕೆ ಕಾರಣ) ಅಡಿಯಲ್ಲಿ ಆರೋಪಗಳನ್ನು ರೂಪಿಸಲು ನಿರ್ದೇಶಿಸಿದೆ.
18 ಮೇ 2022 ರಂದು ದೆಹಲಿಯಲ್ಲಿ ಆರೋಪಿ ಅಫ್ತಾಬ್ ಪೂನಾವಾಲಾ ತನ್ನ ಲಿವ್-ಇನ್ ಪಾಲುದಾರಳಾದ ಶ್ರದ್ಧಾ ವಾಕರ್ ಅನ್ನು ಕತ್ತು ಹಿಸುಕಿ ಕೊಂದನು. ಆ ನಂತರ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ದೆಹಲಿಯ ಕಾಡಿನಲ್ಲಿ ಎಸೆಯಲಾಯಿತು.

ಇಂದು ಈ ಘಟನೆಯ ಬಗ್ಗೆ ವಿಚಾರಣೆ ನಡೆದಿದೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಮನಿಷಾ ಖುರಾನಾ ಕಕ್ಕರ್, ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು 201 (ಅಪರಾಧದ ಸಾಕ್ಷಿಗೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಮೇಲ್ನೋಟಕ್ಕೆ ತೋರುತ್ತಿದೆ ಎಂದು ಹೇಳಿದ್ದಾರೆ.
ಆದರೆ ಸಾಕೇತ್ ಕೋರ್ಟ್ನಲ್ಲಿ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿ ವಿಚಾರಣೆಗೆ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಪ್ರಕರಣದ ವಿಚಾರಣೆಗೆ ದಿನಾಂಕ ನಿಗದಿಪಡಿಸಲಾಗಿದೆ. ಇದರಂತೆ ಜೂನ್ 1 ರಂದು ಸಾಕ್ಷ್ಯ ದಾಖಲಿಸಲಾಗುವುದು.
ಏನಿದು ಪ್ರಕರಣ?
ಮುಂಬೈ ಮೂಲದ ಅಫ್ತಾಬ್ ಪೂನಾವಾಲಾ ಮತ್ತು ಶ್ರದ್ಧಾ ವಾಕರ್ ಲಿವ್-ಇನ್ ಪಾಲುದಾರರಾಗಿದ್ದರು. ಇಬ್ಬರೂ ಮೇ 2022 ರಲ್ಲಿ ಮುಂಬೈನಿಂದ ದೆಹಲಿಯಲ್ಲಿ ವಾಸವಾಗಿದ್ದರು. ಆದರೆ ಇದಕ್ಕೆ ಇಬ್ಬರ ಕುಟುಂಬಸ್ಥರು ಒಪ್ಪಿರಲಿಲ್ಲ. ಹೀಗಾಗಿ ಇಬ್ಬರು ಕುಟುಂಬದಿಂದ ದೂರ ಉಳಿದಿದ್ದರು. ಸುಮಾರು ಎರಡು ತಿಂಗಳಿನಿಂದ ಶ್ರದ್ಧಾ ವಾಕರ್ ತನ್ನೊಂದಿಗೆ ಮಾತನಾಡಿಲ್ಲ ಎಂದು ಶ್ರದ್ಧಾ ಸ್ನೇಹಿತೆಯೊಬ್ಬರು ತಂದೆಗೆ ತಿಳಿಸಿದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.
ಶ್ರದ್ಧಾ ವಾಕರ್ ಅವರ ತಂದೆ ಕಳೆದ ಅಕ್ಟೋಬರ್ 2022 ರಲ್ಲಿ ತಮ್ಮ ಮಗಳನ್ನು ಸಂಪರ್ಕಿಸಲು ಸಾಧ್ಯವಾಗದ ಕಾರಣ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮುಂಬೈ ಪೊಲೀಸರ ತನಿಖೆಯ ನಂತರ ಅವರು ದೆಹಲಿಗೆ ಸ್ಥಳಾಂತರಗೊಂಡಿರುವುದು ಬೆಳಕಿಗೆ ಬಂದಿದ್ದು, ಇಬ್ಬರೂ ದೆಹಲಿಯ ಛತ್ತರ್ಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ ಎಂದು ತಿಳಿದುಬಂದಿತ್ತು.
ಮಾಹಿತಿಯ ಜಾಡು ಹಿಡಿದು ಹೊರಟ ಪೊಲೀಸರು ಭಯಾನಕ ಸತ್ಯ ಬಹಿರಂಗಪಡಿಸಿದ್ದಾರೆ. ಅಫ್ತಾಬ್ ಪೂನಾವಾಲಾ ವಿಚಾರಣೆ ಮಾಡಿದಾಗ ಒಂದೊಂದೆ ಸತ್ಯ ಬಯಲಾಗಿದೆ. 18 ಮೇ 2022 ರಂದು ದೆಹಲಿಯಲ್ಲಿ ಆರೋಪಿ ಅಫ್ತಾಬ್ ಪೂನಾವಾಲಾ ತನ್ನ ಲಿವ್-ಇನ್ ಪಾಲುದಾರಳಾದ ಶ್ರದ್ಧಾ ವಾಕರ್ ಅನ್ನು ಕತ್ತು ಹಿಸುಕಿ ಕೊಂದನು. ನಂತರ ಆಕೆಯ ದೇಹದ ಭಾಗಗಳನ್ನು ಕತ್ತರಿಸಿ ದೆಹಲಿಯ ಮೆಹ್ರೌಲಿ ಮತ್ತು ಅದರ ಸುತ್ತಮುತ್ತಲಿನ ಅರಣ್ಯದಲ್ಲಿ ಎಸೆದಿದ್ದನು. ಶ್ರದ್ಧಾ ದೇಹವನ್ನು ಅಫ್ತಾಬ್ ಪೂನಾವಾಲಾ 35 ತುಣುಕುಗಳನ್ನು ಮಾಡಿದ್ದನು. ಆರಂಭದಲ್ಲಿ ಅವರು ಈ ತುಣುಕುಗಳನ್ನು 300 ಲೀಟರ್ ರೆಫ್ರಿಜರೇಟರ್ನಲ್ಲಿ ಇಟ್ಟು ಬಳಿಕ ಅರಣ್ಯದಲ್ಲಿ ಎಸೆದಿದ್ದನು.
ಅಫ್ತಾಬ್ ಪೂನಾವಾಲಾ ಶ್ರದ್ಧಾಳನ್ನು ಕೊಲೆ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಜೊತೆಗೆ ಆತ ಶ್ರದ್ಧಾಳ ದೇವನ್ನು 35 ತುಣುಕುಗಳನ್ನಾಗಿ ಮಾಡಿ ಆಕೆಯ ದೇಹವನ್ನು ಅರಣ್ಯದಲ್ಲಿ ಬೀಸಾಡಿರುವುದಾಗಿ ಹೇಳಿಕೊಂಡಿದ್ದಾನೆ. ಆತ ಸಾಕ್ಷಿ ಮಾಡಲು ದೇಹವನ್ನು ತುಂಡಾಗಿಸಿ ಅರಣ್ಯದಲ್ಲಿ ದೇಹದ ತುಂಡುಗಳನ್ನು ಬೀಸಾಡಿರುವುದಾಗಿ ಒಪ್ಪಿಕೊಂಡಿದ್ದಾನೆಂದು ತನಿಖೆಯಿಂದ ಬಯಲಾಗಿದೆ.
ಜನವರಿಯಲ್ಲಿ ದೆಹಲಿ ಪೊಲೀಸರು ಪ್ರಕರಣದಲ್ಲಿ 6,629 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು. ಕಳೆದ ವರ್ಷ ನವೆಂಬರ್ 2022ರಲ್ಲಿ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ 75 ದಿನಗಳ ನಂತರ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.












Click it and Unblock the Notifications