ಉತ್ತರ ಭಾರತದಲ್ಲಿ ಶ್ರಾವಣ ಸೋಮವಾರ, ದೋಷ ನಿವಾರಣೆಗೆ ಪೊರಕೆ ದಾನ
ಉತ್ತರ ಭಾರತದಲ್ಲಿ ಈಗ ಶ್ರಾವಣ ಶುರುವಾಗಿದೆ. ಶ್ರಾವಣದ ಮೊದಲ ಸೋಮವಾರದ ಜುಲೈ 30ರಂದು ಉತ್ತರಪ್ರದೇಶದ ಸಂಭಾಲ್ ನಲ್ಲಿರುವ ಪಟಾಲೇಶ್ವರ ದೇವಸ್ಥಾನದಲ್ಲಿ ಭಕ್ತರು ಕಸದ ಪೊರಕೆ ದಾನ ಮಾಡಿ, ಪ್ರಾರ್ಥನೆ ಅರ್ಪಿಸಿದರು. ಸ್ಥಳೀಯರ ನಂಬಿಕೆ ಪ್ರಕಾರ. ಈ ದೇವಸ್ಥಾನದಲ್ಲಿ ಪೊರಕೆ ಅರ್ಪಿಸಿದರೆ ಎಲ್ಲ ರೋಗ- ರುಜಿನಗಳು ನಿವಾರಣೆಯಾಗುತ್ತವೆ.
ಇನ್ನು ಕಾಶಿ ವಿಶ್ವನಾಥ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ದೆಹಲಿಯಲ್ಲಿರುವ ಗೌರಿಶಂಕರ್ ದೇವಾಲಯದಲ್ಲಿ ಶ್ರಾವಣದ ಮೊದಲ ಸೋಮವಾರದ ಕಾರಣಕ್ಕೆ ಪ್ರಾರ್ಥನೆ ಸಲ್ಲಿಸಲಾಯಿತು. ಕಾನ್ಪುರದ ಆನಂದೇಶ್ವರ ದೇಗುಲದಲ್ಲಿ ಕೂಡ ಭಕ್ತರು ತಮ್ಮ ಪ್ರಾರ್ಥನೆಯನ್ನು ಸಲ್ಲಿಸಿದರು.
ಉಜ್ಜೈನಿಯ ಮಹಾಕಾಲ ದೇವಾಲಯದಲ್ಲಿ ಬೆಳ್ಳಂಬೆಳಗ್ಗೆ ಭಕ್ತರು ತಮ್ಮ ಮನದ ಅಭಿಲಾಷೆ ತೀರಿಸುವಂತೆ ಕೋರಿಕೊಂಡರು. ಒಟ್ಟಾರೆ ಈಗ ಉತ್ತರ ಭಾರತದಲ್ಲಿ ಶ್ರಾವಣ ಮಾಸ ಆರಂಭ ಆಗಿರುವುದರಿಂದ ಶಿವನಿಗೆ ವಿಶೇಷ ಪೂಜೆ ಸಲ್ಲಿಸುವ ಪದ್ಧತಿ ಇದೆ. ಆದರೆ ಕರ್ನಾಟಕದಲ್ಲಿ ಈಗ ಆಷಾಢ ಮಾಸ ನಡೆಯುತ್ತಿದೆ.

ಉತ್ತರ ಭಾರತದಲ್ಲಿ ವಿಕ್ರಮ ಶಕೆ- ಸೌರಮಾನವನ್ನು ಅನುಸರಿಸುತ್ತಾರೆ. ಅಲ್ಲಿನ ಮಾಸಗಳ ಲೆಕ್ಕಾಚಾರದಲ್ಲಿ ವ್ಯತ್ಯಾಸ ಇರುತ್ತದೆ. ದಕ್ಷಿಣ ಭಾರತದಲ್ಲಿ ಶಾಲಿವಾಹನ ಶಕೆ- ಚಾಂದ್ರಮಾನವನ್ನು ಅನುಸರಿಸುತ್ತಾರೆ. ಆದ್ದರಿಂದ ಈ ರೀತಿಯಾಗುತ್ತದೆ ಎಂದು ಜ್ಯೋತಿಷಿಗಳು ಅಭಿಪ್ರಾಯ ಪಡುತ್ತಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications