ಮೋದಿ ನೈಜ ಹಿಂದೂವಲ್ಲ ಎಂದ ಕಪಿಲ್ ಸಿಬಲ್ ಗೆ ಬಿಜೆಪಿ ತಿರುಗೇಟು
ನವದೆಹಲಿ, ನವೆಂಬರ್ 30: ಪ್ರಧಾನಿ ನರೇಂದ್ರ ಮೋದಿ ನಿಜವಾದ ಹಿಂದೂವಲ್ಲ. ಅವರು 'ಹಿಂದೂ ಧರ್ಮ'ವನ್ನು ತೊರೆದಿದ್ದು 'ಹಿಂದುತ್ವ'ಕ್ಕೆ ಮುಜುಗರ ತಂದಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಗುಜರಾತ್ ನ ಸೋಮನಾಥ್ ದೇವಸ್ಥಾನಕ್ಕೆ ಭೇಟಿ ನಿಡುವ ವೇಳೆ ಹಿಂದೂಯೇತರ ಸಂದರ್ಶಕರ ಪುಸ್ತಕದಲ್ಲಿ ಹೆಸರು ಬರೆದಿದ್ದಾರೆ ಎಂಬುದು ಬುಧವಾರ ವಿವಾದ ಸೃಷ್ಟಿಸಿತ್ತು. ಇದರ ಮುಂದುವರಿದ ಭಾಗವಾಗಿ ಸಿಬಲ್ ಈ ಹೇಳಿಕೆ ನೀಡಿದ್ದಾರೆ.

"ಪ್ರಧಾನಿ ದಿನಕ್ಕೆ ಎಷ್ಟು ಬಾರಿ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ ಎಂಬುದನ್ನು ನಾನು ಕೇಳಲು ಇಚ್ಛಿಸುತ್ತೇನೆ. ಹಿಂದೂ ಧರ್ಮವನ್ನು ಗೌರವಿಸುವವರು ದೇವಸ್ಥಾನವನ್ನೂ ಗೌರವಿಸುತ್ತಾರೆ. ನೀವು ಹಿಂದೂ ಧರ್ಮವನ್ನು ಬಿಟ್ಟಿದ್ದಾರೆ," ಎಂಬುದಾಗಿ ಸಿಬಲ್ ಟೀಕಿಸಿದ್ದಾರೆ.
ನೀವು ಹಿಂದುತ್ವಕ್ಕೆ ಅವಮಾನಿಸಿದ್ದೀರಿ. ಹಾಗಾಗಿ ನೀವು ನಿಜವಾದ ಹಿಂದೂವಲ್ಲ ಎಂದು ಸಿಬಲ್ ಹೇಳಿದ್ದಾರೆ. "ಪ್ರತಿ ಭಾರತೀಯರನ್ನೂ ತಮ್ಮ ಸಹೋದರ, ಸಹೋದರಿ, ತಾಯಿ ರೀತಿಯಲ್ಲಿ ನೋಡುತ್ತಾರೋ ಅವರು ನಿಜವಾದ ಹಿಂದೂಗಳು," ಎಂದು ಸಿಬಲ್ ಹೇಳಿದ್ದಾರೆ.
ಸಿಬಲ್ ಹೇಳಿಕೆಗೆ ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ ರಾವ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು 'ರಾಮ ಭಕ್ತ' ಯಾರು 'ರೋಮ್ ಭಕ್ತ' ಯಾರು ಎಂದು ಜನರಿಗೆ ಗೊತ್ತಿದೆ ಎಂದು ನೇರವಾಗಿ ಇಟಲಿ ಮೂಲದ ಸೋನಿಯಾ ಗಾಂಧಿ ಕಾಲೆಳೆದಿದ್ದಾರೆ. ಕಾಂಗ್ರೆಸ್ ಹಿಂದೂಗಳನ್ನು ಉಗ್ರಗಾಮಿಗಳು ಎಂದೂ ಕರೆದಿತ್ತು ಎಂಬುದಾಗಿ ರಾವ್ ಟೀಕಿಸಿದ್ದಾರೆ
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ












Click it and Unblock the Notifications