ಸಿಬಿಎಸ್ಇ ಪಠ್ಯಕ್ರಮ ಕಡಿತಕ್ಕೆ ಮಮತಾ ಬ್ಯಾನರ್ಜಿ, ಸಿದ್ದರಾಮಯ್ಯ ವಿರೋಧ
ಬೆಂಗಳೂರು, ಜುಲೈ 9: ಕೊರೊನಾ ವೈರಸ್ ಬಿಕ್ಕಟ್ಟು ಹಿನ್ನೆಲೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ 2020-21ನೇ ಶೈಕ್ಷಣಿಕ ಸಾಲಿನ ಸಿಬಿಎಸ್ಇ ಪಠ್ಯಕ್ರಮದಲ್ಲಿ ಶೇಕಡಾ 30ರಷ್ಟು ಕಡಿತಗೊಳಿಸಿದೆ.
Recommended Video
ಕೇಂದ್ರ ಸರ್ಕಾರದ ಈ ಕ್ರಮಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕರ್ನಾಟಕ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
9ನೇ ತರಗತಿಯಿಂದ 12ನೇ ತರಗತಿ ಪಠ್ಯಕ್ರಮದಲ್ಲಿ ಕಡಿತ ಮಾಡಲಾಗಿದ್ದು, ವಿಶೇಷವಾಗಿ 11ನೇ ತರಗತಿ ಪಠ್ಯಕ್ರಮದಿಂದ ಪೌರತ್ವ, ಜಾತ್ಯತೀತತೆ ಹಾಗೂ ಫೆಡರಲಿಸಂ ಅಂತಹ ಪ್ರಮುಖ ವಿಷಯಗಳನ್ನು ಕೈಬಿಡಲಾಗಿದೆ. ಇದಕ್ಕೆ ವಿಪಕ್ಷ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಂದೆ ಓದಿ...

ಈ ನಿರ್ಧಾರ ಆಘಾತ ತಂದಿದೆ
ಸಿಬಿಎಸ್ಇ ಪಠ್ಯಕ್ರಮ ಪ್ರಮುಖ ವಿಷಯಗಳನ್ನು ಕೈಬಿಟ್ಟಿರುವ ಬಗ್ಗೆ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ ''ಕೇಂದ್ರ ಸರ್ಕಾರದ ಈ ನಿರ್ಧಾರ ಆಘಾತ ತಂದಿದೆ. ಸಿಬಿಎಸ್ಇ ಕೋರ್ಸ್ ಕಡಿತಗೊಳಿಸುವ ಹೆಸರಿನಲ್ಲಿ ಪೌರತ್ವ, ಫೆಡರಲಿಸಂ, ಜಾತ್ಯತೀತತೆ ಹಾಗೂ ವಿಭಜನೆಯಂತಹ ವಿಷಯಗಳನ್ನು ಕೈಬಿಟ್ಟಿರುವುದು ಖಂಡನೀಯ'' ಎಂದಿದ್ದಾರೆ.

ಯಾವುದೇ ಕಾರಣಕ್ಕೂ ಕಡಿತಗೊಳಿಸಬಾರದು
''ಸರ್ಕಾರದ ಈ ಕ್ರಮವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಯಾವುದೇ ಕಾರಣಕ್ಕೂ ಸಿಬಿಎಸ್ಇ ಪಠ್ಯಕ್ರಮದಿಂದ ಇಂತಹ ಪ್ರಮುಖ ವಿಷಯಗಳನ್ನು ಕಡಿತಗೊಳಿಸದಂತೆ ಮಾನವ ಸಂಪನ್ಮೂಲ ಸಚಿವಾಲಯ ಗಮನಹರಿಸಬೇಕಾಗಿದೆ'' ಎಂದು ಪಶ್ಚಿಮ ಬಂಗಾಳ ಸಿಎಂ ಮನವಿ ಮಾಡಿದ್ದಾರೆ.

ಶಿಕ್ಷಣದಲ್ಲಿ ಕೇಸರಿಕರಣ ನಿಲ್ಲಿಸಿ
ಸಿಬಿಎಸ್ಇಯಿಂದ ಪ್ರಮುಖ ವಿಷಯಗಳ ಕಡಿತ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ''ಶಿಕ್ಷಣದಲ್ಲಿ ಕೇಸರಿಕರಣ ನಿಲ್ಲಿಸಿ'' ಎಂದಿದ್ದಾರೆ. ''ಪೌರತ್ವ, ಜಾತ್ಯತೀತತೆ ಮತ್ತು ಫೆಡರಲಿಸಂ ಕುರಿತ ಅಧ್ಯಾಯಗಳನ್ನು 11ನೇ ತರಗತಿಯಿಂದ ಕೈಬಿಡಲಾಗಿದನ್ನು ಗಮನಿಸಿದರೆ ಈ ತತ್ವಗಳನ್ನು ಬಿಜೆಪಿ ನಂಬುತ್ತಿಲ್ಲ, ಅದರ ಹಿಂದಿನ ನಡವಳಿಕೆಯನ್ನು ಮೌಲ್ಯೀಕರಿಸುತ್ತದೆ ಎಂದು ಅನಿಸುತ್ತಿದೆ'' ಎಂದು ಟೀಕಿಸಿದ್ದಾರೆ.

ವಿದ್ಯಾರ್ಥಿಗಳು ವಂಚಿತರಾಗುತ್ತಾರೆ
''ಪಠ್ಯಕ್ರಮದಿಂದ ಇಂತಹ ವಿಷಯಗಳನ್ನು ಕೈಬಿಡುವುದರಿಂದ ಭಾರತ ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭಗಳನ್ನು ಅರ್ಥಮಾಡಿಕೊಳ್ಳುವುದರಿಂದ ಒಂದು ಪೀಳಿಗೆಯ ವಿದ್ಯಾರ್ಥಿಗಳನ್ನು ವಂಚಿಸದಂತೆ ಆಗುತ್ತದೆ'' ಎಂದು ಸಿದ್ದರಾಮಯ್ಯ ಮಾನವ ಸಂಪನ್ಮೂಲ ಇಲಾಖೆಯ ನಿರ್ಧಾರವನ್ನು ವಿರೋಧಿಸಿದ್ದಾರೆ.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications