ಸಚಿವ ಸಂಪುಟ ಪುನಾರಚನೆಯ ಬಗ್ಗೆ ಬಿಗ್‌ ಅಪ್‌ ಡೇಟ್‌ ಕೊಟ್ಟ ಸಿದ್ದರಾಮಯ್ಯ : ಯಾರಿಗೆ ಸಿಗಲಿದೆ ಚಾನ್ಸ್?‌

ದೆಹಲಿ, ಜೂನ್‌ 11: ಮೇ 20 ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ಪೂರ್ಣವಾಗಿದೆ. ಈ ನಡುವೆ ಕೈ ಪಾಳಯದಲ್ಲಿ ಸಚಿವ ಸಂಪುಟ ಪುನಾರಚನೆ ಬೇಡಿಕೆ ತೀವ್ರಗೊಳ್ಳುತ್ತಿದೆ. ಎರಡು ವರ್ಷ ಆಗುತ್ತಿದೆ ಹಾಗಾಗಿ ಇನ್ನೇಕೆ ತಡ ಎಂದು ಸಚಿವ ಸಂಪುಟ ಸೇರ್ಪಡೆಗೆ ಆಕಾಂಕ್ಷಿಗಳು ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ಹೈಕಮಾಂಡ್‌ ನಾಯಕರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಚರ್ಚೆ ನಡೆಸಿದ್ದಾರೆ.

ಈ ಕುರಿತು ಹೈಕಮಾಂಡ್‌ ನಾಯಕರ ಜೊತೆಗೆ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಇದೇ ತಿಂಗಳ 13 ರಂದು 16 ನೇ ಹಣಕಾಸಿನ ಆಯೋಗದ ಅಧ್ಯಕ್ಷರನ್ನು ಭೇಟಿಯಾಗಲು ನವದೆಹಲಿಗೆ ಆಗಮಿಸಲಿದ್ದೇನೆ. ಸಚಿವ ಸಂಪುಟ ಪುನರ್ರಚನೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ಈ ಬಾರಿ ಸಂಪುಟ ಪುನಾರಚನೆಯಾದರೇ ಹಿರಿಯಲಿಗೆ ಗೇಟ್‌ ಪಾಸ್‌ ಕೊಟ್ಟು, ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

Siddaramaiah gives big update on cabinet reshuffle

ಕೇಂದ್ರದ ಸಂಸತ್ ನಲ್ಲಿ ಬೆಂಗಳೂರಿನ ಕಾಲ್ತುಳಿತದ ಘಟನೆ ಚರ್ಚೆಗೆ ಬರುವ ಸಾಧ್ಯತೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರ ಮೊದಲು ಕುಂಭಮೇಳದಲ್ಲಿ ನಡೆದ ಕಾಲ್ತುಳಿತ , ಪ್ರಧಾನಿಯವರು ಉದ್ಘಾಟಿಸಿದ ಸೇತುವೆ ಕುಸಿದು ಜನ ಮೃತಪಟ್ಟ ಘಟನೆಯ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಯಲಿ. ಬೆಂಗಳೂರಿನಲ್ಲಿ ನಡೆದ ಘಟನೆ ನಡೆದಿರುವುದುಕ್ಕೆ ಸರ್ಕಾರಕ್ಕೆ ದು:ಖದ ಸಂಗತಿಯಾಗಿದೆ. ಯುವಜನರ ಸಾವು ಎಲ್ಲರಿಗೂ ನೋವು ತರುವ ವಿಚಾರ. ಕುಂಭಮೇಳದ ಘಟನೆಯಲ್ಲಿ ಜನರ ಸಾವು ಪ್ರಕರಣದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಜವಾಬ್ದಾರಿಯಲ್ಲವೇ ಎಂದು ಪ್ರಶ್ನಿಸಿದರು.

ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕರ್ನಾಟದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗಿದೆ. ವಿವಿಧ ಜಾತಿಗಳ ಸಂಘಸಂಸ್ಥೆಗಳು, ಮಠಾಧೀಶರು, ಸಮುದಾಯದಗಳ ಮುಖಂಡರು, ಸಚಿವರು ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚಿಸಲಾಗಿ, ಜಾತಿಗಣತಿ ವರದಿಯನ್ನು ತಾತ್ವಿಕವಾಗಿ ಒಪ್ಪಿಕೊಳ್ಳುವುದು ಹಾಗೂ ಜಾತಿ ಗಣತಿಯ ದತ್ತಾಂಶ ಹತ್ತು ವರ್ಷ ಹಳೆಯದಾಗಿರುವುದರಿಂದ ಮರುಗಣತಿ ಮಾಡಲು ತೀರ್ಮಾನಿಸಲಾಗಿದೆ. ಈಗಾಗಲೇ ಪರಿಶಿಷ್ಟ ಜಾತಿಗಳ ಜನಗಣತಿ ನಡೆದಂತೆ, ಇತರೆ ಜಾತಿಗಳ ಗಣತಿಯನ್ನು ಹೊಸದಾಗಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಸಮೀಕ್ಷಾ ಕಾರ್ಯವನ್ನು 90 ದಿನದೊಳಗೆ ಪೂರ್ಣಗೊಳಿಸಿ ವರದಿ ನೀಡಬೇಕಾಗುವುದು ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚಿಸಿ, ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ವರಿಷ್ಠರಿಗೆ ವಿವರಿಸಲಾಗಿದೆ. ಪ್ರಕರಣದ ತನಿಖೆಗೆ ಜಿಲ್ಲಾಧಿಕಾರಿಗಳ ನೇತೃತ್ವದ ಮ್ಯಾಜಿಸ್ಟ್ರಿಯಲ್ ತನಿಖೆ, ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮೈಕೆಲ್ ಕುನಾ , ಐದು ಪೊಲೀಸ್ ಅಧಿಕಾರಿಗಳ ಅಮಾನತ್ತು , ಗುಪ್ತಚರ ಇಲಾಖೆಯ ಮುಖ್ಯಸ್ಥರ ಬದಲಾವಣೆ , ರಾಜಕೀಯ ಕಾರ್ಯದರ್ಶಿಗಳ ಬದಲಾವಣೆಯಂತಹ ಸರ್ಕಾರದ ಕ್ರಮಗಳು ಸಮರ್ಪಕವಾಗಿರುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಏಕಸದಸ್ಯ ಆಯೋಗದ ತನಿಖಾ ವರದಿಯನ್ನು ಆಧರಿಸಿ, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಇಡಿ ತನಿಖಾ ಸಂಸ್ಥೆ 100ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕಾನೂನು ಕ್ರಮ ತೆಗೆದುಕೊಂಡಿರುವುದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+