Siddaramaiah: 'ಎರಡು ದಿನದಲ್ಲಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ'
ನವದೆಹಲಿ, ಸೆಪ್ಟೆಂಬರ್ 25: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ಶಾಕ್ ಎದುರಾಗಿದೆ, ಇತ್ತ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಸಿದ್ದರಾಮಯ್ಯ ಅವರಿಗೆ ಒತ್ತಾಯಿಸುತ್ತಿದ್ದಾರೆ.
ಈ ಕುರಿತು ಕೇಂದ್ರ ಸಚಿವ ವಿ ಸೋಮಣ್ಣ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೆನ್ಸಿಟಿವ್ ಮನುಷ್ಯ. ಎರಡು ದಿನದಲ್ಲಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುತ್ತಾರೆ ಎಂದು ಭಾವಿಸಿದ್ದೇನೆ. ನನ್ನ ಜೀವನ ತೆರೆದ ಪುಸ್ತಕ ಎನ್ನುತ್ತಿದ್ದರು ಆ ಪುಸ್ತಕ ಎಲ್ಲಿ ಕಳೆದು ಹೋಗಿದೆ ಗೊತ್ತಿಲ್ಲ ಎಂದಿದ್ದಾರೆ.

ಮುಡಾ ಕೇಸ್ ನಲ್ಲಿ ಹೈಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇನೆ ಕಾನೂನಿಗಿಂತ ಯಾರೂ ದೊಡ್ಡವರಲ್ಲ ನ್ಯಾಯಾಂಗ ವ್ಯವಸ್ಥೆಯಲ್ಲಿ ಕಾನೂನು ದೊಡ್ಡದು ನಾನು ಸಿದ್ದರಾಮಯ್ಯ ಅವರನ್ನು ಹತ್ತಿರದಿಂದ ನೋಡಿದ್ದೇನೆ. ಸಿದ್ದರಾಮಯ್ಯನವರು ಗಾಂಭೀರ್ಯ ಅರ್ಥಮಾಡಿಕೊಳ್ಳಬೇಕು. ತಪ್ಪು ಮಾಡುವುದು ಸಹಜ ಆದರೆ, ತಿದ್ದಿಕೊಳ್ಳಬೇಕು. ಹೈಕೋರ್ಟ್ ಆದೇಶ ಗೌರವಿಸಿ ಸಿಎಂ ರಾಜೀನಾಮೆ ನೀಡಲಿ ಎಂದು ಸಿದ್ದರಾಮಯ್ಯ ರಾಜೀನಾಮೆಗೆ ಕೇಂದ್ರ ಸಚಿವ ಸೋಮಣ್ಣ ಆಗ್ರಹಿಸಿದ್ದಾರೆ.
ರಾಜೀನಾಮೆ ಕೊಡಿ: ಎನ್. ರವಿಕುಮಾರ್ ಒತ್ತಾಯ
ಸಿದ್ದರಾಮಯ್ಯನವರು ಸಂವಿಧಾನ, ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗಕ್ಕೆ ಗೌರವ ಕೊಟ್ಟು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಒತ್ತಾಯಿಸಿದರು.
ಪಾರ್ವತಿ ಮೇಡಂ ಅವರು ನಿಮ್ಮ ಪತ್ನಿ. ನಿಮ್ಮ ಕುಟುಂಬದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿಗಳಿಗೆ ನೆನಪಿಸಿದರು. ಮಾನ್ಯ ರಾಜ್ಯಪಾಲರ ಕ್ರಮವನ್ನು ಕೋರ್ಟ್ ಎತ್ತಿಹಿಡಿದಿದೆ ಎಂದು ಗಮನ ಸೆಳೆದರು.
ಸಿದ್ದರಾಮಯ್ಯನವರು ರಾಜೀನಾಮೆ ಕೊಡದಿದ್ದರೆ ಅದು ಪ್ರಜಾಪ್ರಭುತ್ವ, ನ್ಯಾಯಾಂಗ ಮತ್ತು ಸಂವಿಧಾನಕ್ಕೆ ಮಾಡುವ ಅವಮಾನ ಎಂದು ಅವರು ತಿಳಿಸಿದರು. ಈ ತೀರ್ಪು ನೀಡಿದ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಅವರು ಅಭಿನಂದಿಸಿದರು.
ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಮಾತನಾಡಿ, ಕುರ್ಚಿ ಉಳಿಸಿಕೊಳ್ಳಲು ಭಂಡತನದಿಂದ ಪ್ರಯತ್ನ ಮಾಡಿದವರ ಇತಿಹಾಸ ಏನಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಕರ್ನಾಟಕ ರಾಜ್ಯದ ಗೌರವ ಉಳಿಸುವ ದೃಷ್ಟಿಯಿಂದ ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ಕೊಡಿ ಎಂದು ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು.
ಸಿದ್ದರಾಮಯ್ಯನವರು ಹಿಂದೆ ಯಡಿಯೂರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿದ್ದನ್ನು ನೆನಪಿಸಿದರಲ್ಲದೆ, ನಿಮ್ಮ ಹಿಂದಿನ ಮಾತಿನಂತೆ ರಾಜೀನಾಮೆ ಕೊಡಿ ಎಂದು ಆಗ್ರಹಿಸಿದರು. ನಾವೇನೂ ನಿಮ್ಮ ಕುರ್ಚಿ ಮೇಲೆ ಟವೆಲ್ ಹಾಕಿಲ್ಲ. ಸಿಎಂ ಸ್ಥಾನಕ್ಕಾಗಿ ನಾವೇನೂ ಬ್ರೇಕ್ಫಾಸ್ಟ್, ಡಿನ್ನರ್ ಮೀಟಿಂಗ್ ಮಾಡಿಲ್ಲ. ತನಿಖೆಯಲ್ಲಿ ನೀವು ನಿರ್ದೋಷಿ ಎಂದು ಸಾಬೀತಾದರೆ ಮತ್ತೆ ಮುಖ್ಯಮಂತ್ರಿ ಆಗಬಹುದಲ್ಲವೇ ಎಂದು ಪ್ರಶ್ನಿಸಿದರು.
ನೀವು ರಾಜೀನಾಮೆ ಕೊಡದಿದ್ದರೆ ಪ್ರಾಮಾಣಿಕರಲ್ಲ ಎಂದು ಗೊತ್ತಾಗಲಿದೆ. ಕಾಂಗ್ರೆಸ್ ಪಕ್ಷ ನಿಮ್ಮ ರಾಜೀನಾಮೆ ಕೇಳದಿದ್ದರೆ ಅದು ಭ್ರಷ್ಟಾಚಾರದ ರಕ್ಷಣೆ ಮಾಡುವುದು ಸ್ಪಷ್ಟ ಎಂದು ಗೊತ್ತಾಗಲಿದೆ ಎಂಬುದಾಗಿ ಎಚ್ಚರಿಸಿದರು. ನೀವು ಭ್ರಷ್ಟಾಚಾರದ ಸಮರ್ಥನೆಗೆ ಇದ್ದೀರಾ ಅಥವಾ ವಿರುದ್ಧ ಇದ್ದೀರಾ ಎಂಬ ಬಗ್ಗೆ ಆಗ ರಾಹುಲ್ ಗಾಂಧಿಯವರು ಉತ್ತರ ಕೊಡಬೇಕಾಗುತ್ತದೆ ಎಂದು ತಿಳಿಸಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Opinion - Kalyana Karnataka Train: ಕೇಂದ್ರ ಸಚಿವ ವಿ ಸೋಮಣ್ಣ ಅವರೇ ಕನ್ನಡಿಗರ ಸಂಕಷ್ಟ ಸ್ವಲ್ಪ ನೋಡಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್











Click it and Unblock the Notifications