ನವಜ್ಯೋತ್ ಸಿಂಗ್ ಸಿಧು ಪತ್ನಿ 'ಕಾಂಗ್ರೆಸ್' ಪಕ್ಷಕ್ಕೆ ಎಂಟ್ರಿ!
ಮಾಜಿ ಕ್ರಿಕೆಟರ್, ಕಾಮೆಂಟೆಟರ್, ಮಾಜಿ ಸಂಸದ ನವಜ್ಯೋತ್ ಸಿಂಗ್ ಸಿಧು ಅವರ ಪತ್ನಿ ನವಜ್ಯೋತ್ ಕೌರ್ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) ವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ನವೆಂಬರ್ 28ರಂದು ಅಧಿಕೃತವಾಗಿ ಸೇರಲಿದ್ದಾರೆ.
ಬೆಂಗಳೂರು, ನವೆಂಬರ್ 24: ಮಾಜಿ ಕ್ರಿಕೆಟರ್, ಕಾಮೆಂಟೆಟರ್, ಮಾಜಿ ಸಂಸದ ನವಜ್ಯೋತ್ ಸಿಂಗ್ ಸಿಧು ಅವರ ಪತ್ನಿ ನವಜ್ಯೋತ್ ಕೌರ್ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) ವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ನವೆಂಬರ್ 28ರಂದು ಅಧಿಕೃತವಾಗಿ ಸೇರಲಿದ್ದಾರೆ.
ಪಂಜಾಬ್ ಕಾಂಗ್ರೆಸ್ ಘಟಕದ ಮುಖ್ಯಸ್ಥ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಸಿಧು ಪತ್ನಿ ಕೌರ್ ಸೇರ್ಪಡೆಯನ್ನು ಖಚಿತಪಡಿಸಿದ್ದಾರೆ. ಸಿಧು ಪತ್ನಿ ಕೌರ್ ಹಾಗೂ ಪರ್ಗತ್ ಸಿಂಗ್ ಅವರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಅಮರೀಂದರ್ ಟ್ವೀಟ್ ಮಾಡಿದ್ದಾರೆ.

ಸಿಧು ಅವರ ಪತ್ನಿ ಕೌರ್ ಅವರು ಪಂಜಾಬಿನ ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಸಂಸದೀಯ ಕಾರ್ಯದರ್ಶಿ ಹುದ್ದೆಯಿಂದ ಕೆಳಗಿಳಿದು ಅಕ್ಟೋಬರ್ 8ರಂದು ಬಿಜೆಪಿಯನ್ನು ಅಧಿಕೃತವಾಗಿ ತೊರೆದಿದ್ದರು.[ನವಜ್ಯೋತ್ ಸಿಧು ಹೊಸ ಇನ್ನಿಂಗ್ಸ್, ಅವಾಜ್ ಇ ಪಂಜಾಬ್ ಪಕ್ಷಕ್ಕೆ ಉದಯ]
ಸಿಧು ಅವರು ಸೆಪ್ಟೆಂಬರ್ 08 ರಂದು ಹೊಸ ರಾಜಕೀಯ ಪಕ್ಷ ಅವಾಜ್ ಇ ಪಂಜಾಬ್ ಗೆ ನಾಂದಿ ಹಾಡಿದ್ದರು. ಮಾಜಿ ಹಾಕಿ ಕ್ಯಾಪ್ಟನ್ ಪರ್ಗತ್ ಸಿಂಗ್ ಅವರು ಸಿಧು ಬೆನ್ನಿಗೆ ನಿಂತಿದ್ದರು. ಆದರೆ, ಈಗ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ.
ಸಿಧು ಅವರು 2014ರ ಲೋಕಸಭೆ ಚುನಾವಣೆಯಲ್ಲಿ ಅರುಣ್ ಜೇಟ್ಲಿ ಅವರಿಗೆ ತಮ್ಮ ಅಮೃತಸರ್ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಬಿಜೆಪಿ ಸಂಸತ್ ಸ್ಥಾನದಿಂದ ಕೆಳಗಿಳಿದಿರುವ ಸಿಧು ಅವರು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಸೇರುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಜತೆಗೆ ಕಾಂಗ್ರೆಸ್ ನಿಂದಲೂ ಸಿಧುಗೆ ಆಹ್ವಾನ ಬಂದಿತ್ತು. ಆದರೆ, ಇದೆಲ್ಲ ಸುದ್ದಿಯನ್ನು ಬದಿಗೊತ್ತಿ ಅವಾಜ್ ಇ ಪಂಜಾಬ್ ಪಕ್ಷಕ್ಕೆ ಉದಯ ಹಾಡಿದ್ದರು.ಈಗ ಪತ್ನಿ ಜತೆಗೆ ಕಾಂಗ್ರೆಸ್ ಸೇರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. (ಐಎಎನ್ಎಸ್)
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications