Assembly Election Results 2024: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ; ಸಿಕ್ಕಿಂನಲ್ಲಿ ಎಸ್ಕೆಎಂಗೆ ಬಹುಮತ
ದೇಶದಲ್ಲಿ ಲೋಕಸಭಾ ಚುನಾವಣೆ ಮುಗಿದಿವೆ. ಜೂನ್ 4 ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ. ಇದಕ್ಕೂ ಮುನ್ನ ಎರಡು ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ ಹಾಗೂ ಸಿಕ್ಕಿ ವಿಧಾಸಭಾ ಕ್ಷೇತ್ರಗಳ ಮತಗಳ ಏಣಿಕೆ ಇಂದು (ಜೂನ್ 2) ನಡೆಯಲಿದೆ.
ಉಭಯ ರಾಜ್ಯಗಳ ಒಟ್ಟು 82 ಸ್ಥಾನಗಳ ಮತ ಎಣಿಕೆ ಸದ್ಯದಲ್ಲೇ ಆರಂಭವಾಲಿದೆ. 60 ಸದಸ್ಯ ಬಲದ ಅರುಣಾಚಲದಲ್ಲಿ ಈಗಾಗಲೇ ಬಿಜೆಪಿ 10 ಶಾಸಕರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಇನ್ನು ಉಳಿದ 50 ಸ್ಥಾನಗಳ ಫಲಿತಾಂಶ ಇಂದು ಹೊರ ಬೀಳಲಿದೆ. ಸಿಕ್ಕಿಂನ ಎಲ್ಲಾ 32 ಸ್ಥಾನ ಮತ ಏಣಿಕೆ ಆರಂಭವಾಗಲಿದೆ.

ಈಶಾನ್ಯ ಎರಡೂ ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರ ವಹಿಸಿಕೊಳ್ಳಲಿದೆ ಎಂಬುದು ಬಹಳ ಕುತೂಹಲ ಮೂಡಿಸಿದೆ.
ಸಿಕ್ಕಿಂನಲ್ಲಿ, ಹಾಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮತ್ತೆ ಅಧಿಕಾರಕ್ಕೆ ಬಂದಿದೆ. 32ರಲ್ಲಿ 31 ಸ್ಥಾನಗಳನ್ನು ಗೆದ್ದಿದೆ. ಪ್ರತಿಪಕ್ಷ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ ಕೇವಲ ಒಂದು ಸ್ಥಾನವನ್ನು ಗೆದ್ದಿದೆ.
ಏಪ್ರಿಲ್ 19 ರಂದು ನಡೆದ ಅರುಣಾಚಲ ಪ್ರದೇಶ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. 60 ಕ್ಷೇತ್ರಗಳಲ್ಲಿ ಬಿಜೆಪಿ 46 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಸಿಕ್ಕಿಂ ಮುಖ್ಯಮಂತ್ರಿ ಮತ್ತು ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (SKM) ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ ಅವರು ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ನ ಸೋಮ್ ನಾಥ್ ಪೌಡ್ಯಾಲ್ ಅವರನ್ನು 7,044 ಮತಗಳಿಂದ ಸೋಲಿಸಿದ್ದಾರೆ. ಈ ಮೂಲಕ ರೆನಾಕ್ ವಿಧಾನಸಭಾ ಸ್ಥಾನವನ್ನು ಗೆದ್ದಿದ್ದಾರೆ. ಪ್ರೇಮ್ ಸಿಂಗ್ ತಮಾಂಗ್ 10,094 ಮತಗಳನ್ನು ಗಳಿಸಿದರೆ, ಎಸ್ಡಿಎಫ್ನ ಅವರ ಪ್ರತಿಸ್ಪರ್ಧಿ ಸೋಮ್ ನಾಥ್ ಪೌಡ್ಯಾ 3,050 ಮತಗಳನ್ನು ಪಡೆದಿದ್ದಾರೆ.
ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳಲ್ಲಿ ಜಯಗಳಿಸಿದೆ. 28 ಸೀಟುಗಳಲ್ಲಿ ಮುನ್ನಡೆಯಲ್ಲಿದೆ. ಪಕ್ಷೇತರ ಅಭ್ಯರ್ಥಿ 1 ಸ್ಥಾನದಲ್ಲಿ ಗೆಲುವು ಕಂಡಿದ್ದು, ಎನ್ಪಿಪಿ 6, ಎನ್ಸಿಪಿ 3 ಸೀಟುಗಳಲ್ಲಿ ಮುನ್ನಡೆಯಲ್ಲಿದೆ.
ಅರುಣಾಚಲ ಪ್ರದೇಶದಲ್ಲಿ ಬಿಜೆಪಿ 45, ಎನ್ಪಿಪಿ 6, ಎನ್ಸಿಪಿ 3, ಪಿಪಿಎ 3 ಮತ್ತು ಪಕ್ಷೇತರ ಅಭ್ಯರ್ಥಿಗಳು 1 ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 60 ಸದಸ್ಯ ಬಲದ ವಿಧಾನಸಭೆ ಚುನಾವಣೆ ಮತ ಎಣಿಕೆ ಭಾನುವಾರ ನಡೆಯುತ್ತಿದೆ.
ಅರುಣಾಚಲ ಪ್ರದೇಶದಲ್ಲಿ ಮುಖ್ಯಮಂತ್ರಿ ಪೆಮಾ ಖಂಡು 3ನೇ ಬಾರಿ ಸರ್ಕಾರ ರಚನೆ ಮಾಡುವತ್ತ ಹೆಜ್ಜೆ ಹಾಕಿದ್ದಾರೆ. 60 ಸದಸ್ಯ ಬದಲ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 45 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಸಿಕ್ಕಿಂನಲ್ಲಿ ಆಡಳಿತಾರೂಡ ಎಸ್ಕೆಎಂ ಪಕ್ಷ 29 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಅಧಿಕಾರಕ್ಕೆ ಏರುವ ಕನಸು ಕಾಣುತ್ತಿದೆ.
ಲೋಕಸಭೆ ಜೊತೆಗೆ ಅರುಣಾಚಲ ಪ್ರದೇಶ & ಸಿಕ್ಕಿಂ ವಿಧಾನಸಭೆ ಚುನಾವಣೆ ಕೂಡ ಗಮನ ಸೆಳೆದಿತ್ತು. ಇದೀಗ, ಈ ಎರಡು ರಾಜ್ಯಗಳ ಪೈಕಿ ಒಂದರಲ್ಲಿ ಬಿಜೆಪಿ ಭರ್ಜರಿಯಾಗಿ ಹವಾ ಎಬ್ಬಿಸಿದೆ.
ಬಿಜೆಪಿಗೆ ಮುನ್ನಡೆ
ಅರುಣಾಚಲ ಪ್ರದೇಶ & ಸಿಕ್ಕಿಂ ವಿಧಾನಸಭೆ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಹೊರ ಬೀಳುತ್ತಿದೆ. ಅದರಲ್ಲೂ ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಈಗ ಹೊಸ ಇತಿಹಾಸ ನಿರ್ಮಿಸುತ್ತಿದೆ. ಬರೋಬ್ಬರಿ 36 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಅರುಣಾಚಲ ಪ್ರದೇಶದಲ್ಲಿ 14 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ, ಎನ್ಪಿಇಪಿ 14 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಸಿಕ್ಕಿಂ ಸಿಎಂ ಮುನ್ನಡೆ
ಸಿಕ್ಕಿಂನ ಆರು ರಾಜ್ಯಗಳಲ್ಲಿ ಮತ ಏಣಿಕೆ ನಡೆದಿದೆ. ಸಿಕ್ಕಿಂ ಮುಖ್ಯ ಮಂತ್ರಿ ಎಸ್ಕೆಎಂ ಅಭ್ಯರ್ಥಿ ಪ್ರೇಮ್ ಸಿಂಗ್ ತಮಾಂಗ್ ಸುಮಾರು 1,400 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಎಸ್ಕೆಎಂ 32ರಲ್ಲಿ ಮುನ್ನಡೆ
ಸಿಕ್ಕಿ ಕ್ರಾಂತಿ ಕಾರಿ ಮೋರ್ಚಾ (SKM) 32 ರಲ್ಲಿ 28 ಸ್ಥಾನಗಳಲ್ಲಿ ಮುನ್ನಡೆ. ಎಸ್ಡಿಎಫ್ ಪಕ್ಷ ಒಂದು ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಬಿಜೆಪಿಗೆ ಮುನ್ನಡೆ
ಅರುಣಾಚಲ ಪ್ರದೇಶದಲ್ಲಿ ಬಿಜೆಪಿ 21 ಸ್ಥಾನಗಳಲ್ಲಿ ಮುನ್ನಡೆ, ನ್ಯಾಷನಲ್ ಪೀಪಲ್ ಪಾರ್ಟಿ 2, ಕಾಂಗ್ರೆಸ್ ಹಾಗೂ ಎನ್ಸಿಪಿ ಒಂದು ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಸಿಕ್ಕಿಂನಲ್ಲಿ ಎಸ್ಕೆಎಂ ಮುನ್ನಡೆ
ಸಿಕ್ಕಿಂನಲ್ಲಿ ಸಿಕ್ಕಿ ಕ್ರಾಂತಿ ಕಾರಿ ಮೋರ್ಚಾ (SKM) 32 ರಲ್ಲಿ 17 ಸ್ಥಾನಗಳಲ್ಲಿ ಮುನ್ನಡೆ. ಬಿಜೆಪಿ ಹಾಗೂ ಎಸ್ಡಿಎಫ್ ಪಕ್ಷಗಳಿಗೆ ಒಂದು ಸ್ಥಾನದಲ್ಲಿ ಮುನ್ನಡೆ
ಸಿಕ್ಕಿಂನಲ್ಲಿ ಎಸ್ಕೆಎಂ ಮುನ್ನಡೆ
ಸಿಕ್ಕಿಂನಲ್ಲಿ ಸಿಕ್ಕಿ ಕ್ರಾಂತಿ ಕಾರಿ ಮೋರ್ಚಾ (SKM) 32 ರಲ್ಲಿ 17 ಸ್ಥಾನಗಳಲ್ಲಿ ಮುನ್ನಡೆ. ಬಿಜೆಪಿ ಹಾಗೂ ಎಸ್ಡಿಎಫ್ ಪಕ್ಷಗಳಿಗೆ ಒಂದು ಸ್ಥಾನದಲ್ಲಿ ಮುನ್ನಡೆ
ಅರುಣಾಚಾಲದಲ್ಲಿ ಬಿಜೆಪಿ 10, ಎನ್ಪಿಇಪಿ 1 ಸ್ಥಾನದಲ್ಲಿ ಮುನ್ನಡೆ
ಅರುಣಾಚಾಲ ಪ್ರದೇಶದಲ್ಲಿ ಬಿಜೆಪಿ 10 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ನ್ಯಾಷನಲ್ ಪೀಪಲ್ ಪಾರ್ಟಿ ಒಂದು ಸ್ಥಾನದಲ್ಲಿ ಮುಂದಿದೆ.
ಅವಿರೋಧ ಆಯ್ಕೆ ಆದ ಬಿಜೆಪಿ ಶಾಸಕರು
ಮುಕ್ತೋ – ಪೇಮಾ ಖಂಡು ಬೊಮ್ಡಿಲಾ- ಡೊಂಗ್ರು ಸಿಯೊಂಗ್ಜು ಚೌಕಂ- ಚೌನಾ ಮೇ ಹಯುಲಿಯಾಂಗ್ - ದಸಾಂಗ್ಲು ಪುಲ್ ಇಟಾನಗರ - ಟೆಚಿ ಕಾಸೊ ರೋಯಿಂಗ್ – ಮುಚ್ಚು ಮಿಥಿ ಸಾಗಲೀ – ರತು ಟೆಚಿ ತಾಲಿ – ಜಿಕ್ಕೆ ಟಾಕೊ ತಾಲಿಹಾ – ನ್ಯಾತೋ ದುಕಮ್ ಜಿರೋ-ಹಾಪೋಲಿ - ಹಗೆ ಅಪ್ಪಾ
ಅರುಣಾಚಾಲದ 50 ವಿಧಾನಸಭಾ ಕ್ಷೇತ್ರಗಳ ಮತ ಏಣಿಕೆ ಇಂದು ಬೆಳಗ್ಗೆ 6 ರಿಂದ ಆರಂಭವಾಗಿದೆ. 24 ಜಿಲ್ಲೆಗಳಲ್ಲಿ ಮತ ಏಣಿಕೆ ನಡೆದಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications