ಯಾತ್ರಿಗಳ ಗಮನಕ್ಕೆ : ಮಾನಸ ಸರೋವರಕ್ಕೆ ಹಾದಿ ಸುಗುಮ!
ಗ್ಯಾಂಗ್ ಟಕ್(ಸಿಕ್ಕಿಂ), ನ.30: ಹಿಂದೂಗಳ ಪವಿತ್ರ ಯಾತ್ರಾಕ್ಷೇತ್ರ ಕೈಲಾಸ ಮಾನ ಸರೋವರ ಯಾತ್ರೆ ಹಾದಿ ಈಗ ಸುಗಮಗೊಂಡಿದೆ. ಚೀನಾ ದೇಶದೊಡನೆ ಒಪ್ಪಂದದ ನಂತರ ಸಿಕ್ಕಿಂನ ನಾಥುಲಾ ಪಾಸ್ ಮೂಲ ಭಾರತೀಯರು ಪವಿತ್ರ ಯಾತ್ರೆ ಕೈಗೊಳ್ಳಬಹುದಾಗಿದೆ.
ಚೀನಾ ಆಕ್ರಮಿತ ಟಿಬೇಟ್ ಭಾಗದಲ್ಲಿರುವ ಕೈಲಾಶ ಪರ್ವತವನ್ನು ಪರಿಕ್ರಮ ಮಾಡಲು ಯಾತ್ರಾರ್ಥಿಗಳು ಉತ್ತರ ಖಂಡದ ಲಿಪ್ಲೇಖ್ ಮಾರ್ಗದ ಮೂಲಕ ಮಾನಸ ಸರೋವರ ಯಾತ್ರೆ ಕೈಗೊಳ್ಳುತ್ತಿದ್ದಾರೆ. ಇದು ದುರ್ಗಮ ಹಾದಿಯಾಗಿದ್ದು, ಅನೇಕ ಕಡೆ ಯಾತ್ರಾರ್ಥಿಗಳು ಹಲವು ಕಿ.ಮೀ. ಚಾರಣ ನಡೆಸಬೇಕಿದೆ. ಹಾಗಾಗಿ ವಯೋವೃದ್ಧರು ಈ ಹಾದಿಯಲ್ಲಿ ಸಾಗಲು ಸಾಕಷ್ಟು ಪ್ರಯಾಸ ಪಡಬೇಕಿದೆ.

ಮುಂದಿನ ವರ್ಷ ಜೂನ್ ವೇಳೆಗೆ ಮಾನಸ ಸರೋವರಕ್ಕೆ ಸಿಕ್ಕಿಂ ಮೂಲಕ ಮಾರ್ಗ ತೆರೆಯುವ ನಿರೀಕ್ಷೆಯಿದೆ ಎಂದು ಸಿಕ್ಕಿಂನ ಪ್ರವಾಸೋದ್ಯಮ ಇಲಾಖೆ ಹೇಳಿದೆ. ಈ ಸಂಬಂಧ ಭಾರತ ಮತ್ತು ಚೀನಾ ಈಗಾಗಲೇ ಒಪ್ಪಂದಕ್ಕೆ ಸಹಿ ಹಾಕಿದೆ.
ಹೊಸ ಮಾರ್ಗಕ್ಕೆ ಸಂಬಂಧಿಸಿ ಸಿದ್ಧತಾ ಕಾರ್ಯಗಳು ನಡೆಯುತ್ತಿದ್ದು, ಜೂನ್ ವೇಳೆಗೆ ಭಾರತದಿಂದ ಮೊದಲ ಯಾತ್ರಿಗಳ ತಂಡ ನಾಥುಲಾ ಮಾರ್ಗದ ಮೂಲಕ ಯಾತ್ರೆ ಆರಂಭಿಸಲಿದೆ. ಮೊದಲ ತಂಡದಲ್ಲಿ 1,600 ಮಂದಿ ಇರಲಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉತ್ತರಾಖಂಡ್ ನ ಲಿಪುಲೇಖ್ ಪಾಸ್ ಮಾರ್ಗವೂ ಬಳಕೆಯಲ್ಲಿರಲಿದೆ. ಜೊತೆಗೆ ನಾಥುಲಾ ಪಾಸ್ ಮಾರ್ಗವೂ ಯಾತ್ರಿಗಳಿಗೆ ಲಭ್ಯವಾಗಲಿದೆ. ಸಿಕ್ಕಿಂ ಮಾರ್ಗದಲ್ಲಿ ಹೋಗ ಬಯಸುವ ಯಾತ್ರಿಗಳು ಗ್ಯಾಂಗ್ ಟಕ್ ನಲ್ಲಿ ಎರಡು ದಿನ ತಂಗುವುದು ಕಡ್ಡಾಯಗೊಳಿಸಲಾಗಿದೆ.
ಇಲ್ಲಿನ ವಾತಾವರಣಕ್ಕೆ ಯಾತ್ರಿಗಳು ಹೊಂದಿಕೊಂಡ ನಂತರ ಸೂಕ್ತ ಮಾರ್ಗದರ್ಶಿಗಳ ಜೊತೆ ಮುಂದಕ್ಕೆ ಸಾಗಬಹುದಾಗಿದೆ. 17 ಮೈಲಿಯಲ್ಲಿರುವ ಶೇರಾಥಾಂಗ್ ನಲ್ಲಿ ಮುಂದಿನೆ ನೆಲೆ ಕಾಣಬಹುದಾಗಿದೆ. ಇಲ್ಲದಿದ್ದರೆ ಶಿಗಾತ್ಸೆ ಮೂಲಕ ಕೈಲಾಸ ಮಾನಸ ಸರೋವರ ತಲುಪಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಹೇಳಿದೆ.(ಪಿಟಿಐ)
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications