ನವದೆಹಲಿ: ಏಮ್ಸ್ ಆಸ್ಪತ್ರೆ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ಅವಕಾಶ ಇಲ್ಲ
ಬೆಂಗಳೂರು, ಡಿಸೆಂಬರ್ 21: ರಾಷ್ಟ್ರ ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆ ಆವರಣಕ್ಕೆ ಇನ್ನು ಮುಂದೆ ಒಂದು ಭಾರಿ (ಏಕ) ಬಳಕೆಯಾಗುವ ಪ್ಲಾಸ್ಟಿಕ್ಗಳನ್ನು ತರುವಂತಿಲ್ಲ. ಹೀಗೆಂದು ಬುಧವಾರ ಆದೇಶ ಹೊರಡಿಸಲಾಗಿದೆ.
ಆಸ್ಪತ್ರೆ ಆವರಣದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಷೇಧಿಸಿ ಬುಧವಾರ ದೆಹಲಿಯ ಏಮ್ಸ್ ಆಡಳಿತ ಮಂಡಳಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳಿಗೆ ಅನುಸಾರ ಆದೇಶ ಹೊರಡಿಸಿದೆ. ಡಾ. ಶ್ರೀನಿವಾಸ್ ಅವರು ಹೊರಡಿಸಿದ ಕಚೇರಿ ಮೆಮೊ ಪ್ರಕಾರ, ಏಕ-ಬಳಕೆಯ ಪ್ಲಾಸ್ಟಿಕ್ (ಎಸ್ಯುಪಿ) ಬಳಕೆ ಜೊತೆಗೆ ಎಸ್ಯುಪಿ ವಸ್ತುಗಳನ್ನು ನಿಷೇಧಿಸಲು ಏಮ್ಸ್ ತಿಳಿಸಿದೆ.
ರಾಷ್ಟ್ರೀಯ ಪ್ಲಾಸ್ಟಿಕ್ ತ್ಯಾಜ್ಯದ ಉತ್ಪಾದನೆಯನ್ನು ಕಡಿಮೆ ಮಾಡಬೇಕಿದೆ. ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸುವ ಮುಖೇನ ತ್ಯಾಜ್ಯ ನಿರ್ವಹಣೆಯ ಮೂಲಸೌಕರ್ಯವನ್ನು ಬಲಪಡಿಸಬೇಕಿದೆ. ಭಾರತದ ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆಯು 2015ರ ನಂತರ ಎರಡು ಪಟ್ಟು ಅಂದರೆ ವಾರ್ಷಿಕವಾಗಿ ಶೇ. 21.8ರಷ್ಟು ಹೆಚ್ಚಳವಾಗಿದೆ. ಭಾರತವು ವಾರ್ಷಿಕವಾಗಿ 3.5 ಮಿಲಿಯನ್ ಟನ್ ಪ್ಲಾಸ್ಟಿಕ್ ತ್ಯಾಜ್ಯವನ್ನು ಉತ್ಪಾದಿಸುತ್ತದೆ ಎಂದು ಸಂಶೋಧನೆಗಳ ವರದಿಯೊಂದು ತಿಳಿಸಿದೆ.

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳು, 2021 ರ ಅನುಷ್ಠಾನವು ಜುಲೈ 1, 2022 ರಂದು, ಭಾರತ ಸರ್ಕಾರವು ಏಕ-ಬಳಕೆಯ ಪ್ಲಾಸ್ಟಿಕ್ (SUP) ವಸ್ತುಗಳ ಉತ್ಪಾದನೆ, ಆಮದು, ದಾಸ್ತಾನು, ಮಾರಾಟ, ವಿತರಣೆ ಮತ್ತು ಬಳಕೆಯನ್ನು ನಿಷೇಧಿಸಲು ಪ್ರಯತ್ನಿಸಿದೆ.

ಏಕಬಳಕೆ ಪ್ಲಾಸ್ಟಿಕ್ನಿಂದ ತ್ಯಾಜ್ಯ ಅಧಿಕ
ಈ ಏಕಬಳಕೆಯ ಪ್ಲಾಸ್ಟಿಕ್ಗಳು ಕಡಿಮೆ ಉಪಯುಕ್ತತೆ ಹೊಂದಿದ್ದು, ಹೆಚ್ಚಿನ ತ್ಯಾಜ್ಯ ಉತ್ಪಾದನೆಗೆ ಕಾರಣವಾಗಿವೆ. ನಿಯಮದ ಪ್ರಕಾರ 50 ಮೈಕ್ರಾನ್ಗಳಿಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳನ್ನು ನಿಷೇಧಿಸಲಾಗಿದೆ. ಅನೇಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಗುರುತಿಸಲಾದ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಸಹ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮ (2016) ಗಳಿಗೆ ತಿದ್ದುಪಡಿ ತರಲು ಸಚಿವಾಲಯ 2021ರ ಮಾರ್ಚ್ನಲ್ಲಿ ಕರಡು ಅಧಿಸೂಚನೆ ಹೊರಡಿಸಿತ್ತು. 12 ವಿಧದ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಈ ಅಧಿಸೂಚನೆ ವ್ಯಾಪ್ತಿಗೆ ಬರುತ್ತವೆ ಎನ್ನಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications