ಸೀತಾರಾಂ ಯೆಚೂರಿ ಸಿಪಿಐ(ಎಂ) ಕಾರ್ಯದರ್ಶಿಯಾಗಿ ಮರು ಆಯ್ಕೆ
ನವದೆಹಲಿ, ಏಪ್ರಿಲ್ 11: ಸೀತಾರಾಂ ಯೆಚೂರಿ ಸಿಪಿಐ(ಎಂ)ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಭಾನುವಾರ ಆಯ್ಕೆಯಾಗಿದ್ದಾರೆ. ಮೂರನೇ ಬಾರಿಗೆ ಸಿಪಿಐಎಂನ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಸೀತಾರಾಂ ಯೆಚೂರಿ ಆಯ್ಕೆಯಾಗಿದ್ದಾರೆ.
ಕೇರಳದಲ್ಲಿ ಭಾನುವಾರ ನಡೆದ ಐದು ದಿನಗಳ 23 ನೇ ಪಕ್ಷದ ಕಾಂಗ್ರೆಸ್ನ ಮುಕ್ತಾಯದಲ್ಲಿ ಸೀತಾರಾಮ್ ಯೆಚೂರಿ ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) [ಸಿಪಿಐ(ಎಂ)] ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದರು.
ಪುನರ್ ರಚನೆ ಮಾಡಲಾದ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಪಾಲಿಟ್ ಬ್ಯೂರೋದಲ್ಲಿ 17 ಸದಸ್ಯರು ಇದ್ದಾರೆ. 15 ಮಹಿಳೆಯರು ಮತ್ತು 17 ಹೊಸ ಮುಖಗಳೊಂದಿಗೆ 85-ಸದಸ್ಯರ ಕೇಂದ್ರ ಸಮಿತಿಯನ್ನು ಸಹ ಪಕ್ಷದ ಸಮ್ಮೇಳನದಲ್ಲಿ ರಚನೆರ ಮಾಡಲಾಗಿದೆ.

ಮೊದಲ ಬಾರಿಗೆ ಪಾಲಿಟ್ ಬ್ಯೂರೋದಲ್ಲಿ ದಲಿತ ಸದಸ್ಯ
ಸಿಪಿಐಎಂ ಪಕ್ಷದ 58 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ದಲಿತ ಸದಸ್ಯರು ಪಾಲಿಟ್ ಬ್ಯೂರೋದಲ್ಲಿ ಕಾಣಿಸಿಕೊಂಡಿದ್ದಾರೆ. ವೈದ್ಯರು ಮತ್ತು ಪಶ್ಚಿಮ ಬಂಗಾಳದಿಂದ ಏಳು ಬಾರಿ ಲೋಕಸಭಾ ಸದಸ್ಯರಾಗಿರುವ ರಾಮಚಂದ್ರ ದೊಮೆ ಪಾಲಿಟ್ ಬ್ಯೂರೋ ಸದಸ್ಯರಾಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಅಶೋಕ್ ದವಲೆ ಹಾಗೂ ರಾಮಚಂದ್ರ ದೊಮೆ ಅವರ ಹೆಸರುಗಳು ಕೇಳಿಬಂದಿದ್ದವು.
ಈ ಹಿಂದೆ ಪ್ರಕಾಶ್ ಕಾರಟ್ ಕೂಡ ಎರಡು ಸಲ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆಯಾಗಿದ್ದರು. ಅವರು 2005 ರಿಂದ 2015ರವರೆಗೂ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಇನ್ನು ಪಕ್ಷದ ಪಾಲಿಟ್ ಬ್ಯೂರೋ ಸದಸ್ಯರಾಗಿದ್ದ ಸೀತಾರಾಂ ಅವರನ್ನು 2015ರಲ್ಲಿ ನಡೆದ ಪಕ್ಷದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು. 2018ರಲ್ಲಿ ಅವರು ಎರಡನೇ ಅವಧಿಗೆ ಆಯ್ಕೆಯಾಗಿದ್ದರು. ಈಗ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಈ ಹಿಂದಿನ ಕೇಂದ್ರ ಸಮಿತಿಯು 95 ಸದಸ್ಯರನ್ನು ಹೊಂದಿತ್ತು. ನೂತನ ಕೇಂದ್ರ ಸಮಿತಿಯಲ್ಲಿ ಒಂದು ಸ್ಥಾನವನ್ನು ಖಾಲಿ ಇಡಲಾಗಿದೆ. ಇನ್ನು ಪಕ್ಷದ ಪಾಲಿಟ್ ಬ್ಯೂರೋದಲ್ಲಿ ರಾಮಚಂದ್ರ ದೊಮೆ ಜೊತೆಗೆ ಕೇರಳದ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್ಡಿಎಫ್) ಸಂಚಾಲಕ ಎ. ವಿಜಯರಾಘವನ್ ಮತ್ತು ಕೃಷಿ ಕಾನೂನುಗಳ ವಿರುದ್ಧದ ರೈತರ ಪ್ರತಿಭಟನೆಯ ಮುಂದಾಳುಗಳಲ್ಲಿ ಒಬ್ಬರಾದ ಅಖಿಲ ಭಾರತ ಕಿಸಾನ್ ಸಭಾದ ಅಧ್ಯಕ್ಷ ಅಶೋಕ್ ಧವಳೆ ಇದ್ದಾರೆ.
ಉತ್ತರಾಖಂಡ ಮತ್ತು ಛತ್ತೀಸ್ಗಢದಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ರಾಜೇಂದ್ರ ಸಿಂಗ್ ನೇಗಿ ಮತ್ತು ಸಂಜಯ್ ಪರಾಟೆ ಅವರು ಕೇಂದ್ರ ಸಮಿತಿಗೆ ಶಾಶ್ವತ ಆಹ್ವಾನಿತರಾಗಿರುತ್ತಾರೆ. ಎ.ಕೆ. ಪದ್ಮನಾಭನ್ ಅವರು ಹೊಸ ನಿಯಂತ್ರಣ ಆಯೋಗದ ಅಧ್ಯಕ್ಷ ಮತ್ತು ಕೇಂದ್ರ ಸಮಿತಿಯ ಪದನಿಮಿತ್ತ ಸದಸ್ಯರಾಗಿದ್ದಾರೆ. ನಿರೀಕ್ಷೆಯಂತೆ ಕೇರಳದಿಂದ ಕೆ.ಎನ್. ಬಾಲಗೋಪಾಲ್, ಪಿ.ರಾಜೀವ್, ಸಿ.ಎಸ್.ಸುಜಾತಾ ಮತ್ತು ಪಿ.ಸತೀದೇವಿ ನೂತನ ಕೇಂದ್ರ ಸಮಿತಿಗೆ ಸ್ಥಾನ ಪಡೆದರೆ, ಪಿ.ಕರುಣಾಕರನ್, ವೈಕಂ ವಿಶ್ವನ್ ಮತ್ತು ದಿವಂಗತ ಎಂ.ಸಿ. ಜೋಸೆಫೀನ್ ಕೈಬಿಡಲಾಯಿತು.
ಪೊಲಿಟ್ ಬ್ಯೂರೋ ಸದಸ್ಯರಾಗಿ ಮುಂದುವರಿಯಲಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ವಯಸ್ಸಿನ ನಿಯಮದಿಂದ ವಿನಾಯಿತಿ ನೀಡಲಾಗಿದೆ. ರಾಜ್ಯ ಸಮಿತಿ ಸದಸ್ಯ ಎಂ.ವಿಜಯಕುಮಾರ್ ಅವರಿಗೆ ಕೇಂದ್ರ ನಿಯಂತ್ರಣ ಆಯೋಗದ ಸದಸ್ಯರಾಗಿ ಅವಕಾಶ ಕಲ್ಪಿಸಲಾಗಿದೆ.
Recommended Video
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್












Click it and Unblock the Notifications