Get Updates
Get notified of breaking news, exclusive insights, and must-see stories!

Sitaram Yechury: ಸಿಪಿಎಂ ಹಿರಿಯ ನಾಯಕ ಸೀತಾಮ್ ಯೆಚೂರಿ ನಿಧನ

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಹಿರಿಯ ನಾಯಕ, ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಗುರುವಾರ ನಿಧನವಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಸೆಪ್ಟೆಂಬರ್ 10 ರಂದು ನವದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಗೆ ದಾಖಲಿಸಲಾಗಿತ್ತು, ಅಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಅವರು ಚಿಕಿತ್ಸೆ ಪಡೆಯದೆ ಮೃತಪಟ್ಟಿದ್ದಾರೆ.

ಆಗಸ್ಟ್ 12, 1952 ರಂದು ಚೆನ್ನೈನಲ್ಲಿ ಜನಿಸಿದ ಸೀತಾರಾಂ ಯೆಚೂರಿ ಅವರು ಭಾರತೀಯ ರಾಜಕೀಯ ಕ್ಷೇತ್ರದಲ್ಲಿ ಪ್ರಮುಖ ಹೆಸರ. ಸಮ್ಮಿಶ್ರ ರಾಜಕೀಯಕ್ಕೆ ಅವರ ಕಾರ್ಯತಂತ್ರದ ವಿಧಾನ ಮತ್ತು ಮಾರ್ಕ್ಸ್‌ವಾದದ ತತ್ವಗಳನ್ನು ಅನುಸರಿಸುವ ಮೂಲಕ ಹೆಸರು ಮಾಡಿದ್ದರು.

Sitaram Yechury Veteran CPM Leader Dies at 72 After Long Illness

1974ರಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಸೇರುವ ಮೂಲಕ ಅವರ ರಾಜಕೀಯ ಜೀವನ ಆರಂಭವಾಯಿತು. ಮೂರು ಬಾರಿ ಜೆಎನ್‌ಯು ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷರಾಗಿದ್ದರು. ಎಸ್‌ಎಫ್‌ಐ ಅಖಿಲ ಭಾರತದ ಅಧ್ಯಕ್ಷರಾದರು, 1984 ರಲ್ಲಿ ಅವರು ಸಿಪಿಐ (ಎಂ) ಕೇಂದ್ರ ಸಮಿತಿಗೆ ಆಯ್ಕೆಯಾದರು. 1992 ರಿಂದ ಮೂರು ದಶಕಗಳ ಕಾಲ ಪಾಲಿಟ್‌ಬ್ಯೂರೊದ ಸದಸ್ಯರಾಗಿದ್ದರು.

ರಾಜ್ಯಸಭಾ ಸದಸ್ಯರಾಗಿ ಸೇವೆ

ಸೀತಾರಾಮ್ ಯೆಚೂರಿ 2005 ರಿಂದ 2017 ರವರೆಗೆ ಪಶ್ಚಿಮ ಬಂಗಾಳದಿಂದ ಸಂಸತ್ತಿನ ಸದಸ್ಯರಾಗಿ, ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಕಾಶ್ ಕಾರಟ್ ಬಳಿಕ 2015 ರಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿಯಾದರು, 2018 ಮತ್ತು 2022 ರಲ್ಲಿ ಎರಡು ಬಾರಿ ಮರು ಆಯ್ಕೆಯಾದರು.

ವಿವಿಧ ಗಣ್ಯರ ಸಂತಾಪ

ಹಿರಿಯ ನಾಯಕನ ನಿಧನಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. "ಭಾರತದ ಬಗ್ಗೆ ಆಳವಾದ ತಿಳುವಳಿಕೆ ಹೊಂದಿದ್ದ, ನೈಜ ಭಾರತದ ಕಲ್ಪನೆಯ ರಕ್ಷಲ" ಎಂದು ಕರೆದಿದ್ದಾರೆ.

"ನಾವಿಬ್ಬರೂ ಸುದೀರ್ಘವಾಗಿ ನಡೆಸಿದ್ದ ಚರ್ಚೆಗಳನ್ನು ಕಳೆದುಕೊಳ್ಳಯತ್ತೇನೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅನುಯಾಯಿಗಳಿಗೆ ಸಂತಾಪಗಳು" ಎಂದು ರಾಹುಲ್ ಗಾಂಧಿ ಟ್ವೀಟ್‌ ಮಾಡಿದ್ದಾರೆ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೂಡ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಸಿಪಿಎಂ ಮುಖಂಡ ಸೀತಾರಾಂ ಯೆಚೂರಿ ನಿಧನ ರಾಷ್ಟ್ರೀಯ ರಾಜಕೀಯಕ್ಕೆ ನಷ್ಟ ಎಂದು ಹೇಳಿದ್ದಾರೆ.

ಸಂತಾಪ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಎಡ ಸಿದ್ದಾಂತದ ಪ್ರಖರ ಚಿಂತಕರಾಗಿದ್ದ ಯಚೂರಿ ಅವರು ಅಪ್ಪಟ ಪ್ರಜಾಪ್ರಭುತ್ವವಾದಿಯೂ ಆಗಿದ್ದರು. ಕೋಮುವಾದಿ ರಾಜಕೀಯದ ವಿರುದ್ಧ ಜಾತ್ಯತೀತ ಶಕ್ತಿಗಳ ಒಗ್ಗೂಡಿಸುವಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯಚೂರಿಯವರು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ರೂವಾರಿಗಳಲ್ಲೊಬ್ಬರಾಗಿದ್ದರು. ಕಳೆದ ವರ್ಷ ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭಕ್ಕೆ ಆಗಮಿಸಿ, ಶುಭ ಹಾರೈಸಿದ್ದರು. ಇಂಡಿಯಾ ಒಕ್ಕೂಟ ಸ್ಥಾಪನೆಯಲ್ಲಿ ಕೂಡ ಅವರ ಕೊಡುಗೆ ಇದೆ.ಸೀತಾರಾಮ್ ಯಚೂರಿ ಅವರ ನಿಧನದಿಂದ ಕೋಮುವಾದ ಮತ್ತು ಬಂಡವಾಳವಾದದ ವಿರುದ್ಧದ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ಮತ್ತು ಸಂಗಾತಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+