ಸ್ಟಾಲಿನ್ ಸರ್ಕಾರ ಅಯೋಧ್ಯೆ ದೇವಸ್ಥಾನ ಉದ್ಘಾಟನಾ ನೇರ ಪ್ರಸಾರ ನಿಷೇಧಿಸಿದೆ: ನಿರ್ಮಲಾ ಸೀತಾರಾಮನ್ ಆರೋಪ
ಸೋಮವಾರ ನಡೆಯಲಿರುವ ರಾಮಮಂದಿರ ಕಾರ್ಯಕ್ರಮಗಳ ನೇರ ಪ್ರಸಾರವನ್ನು ಎಂಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ನಿಷೇಧಿಸಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಆರೋಪಿಸಿದ್ದಾರೆ.
ಅಯೋಧ್ಯೆಯಲ್ಲಿ ದೇವಸ್ಥಾನದ ಪ್ರಾಣ ಪ್ರತಿಷ್ಠಾಪನೆಯ ಅಂಗವಾಗಿ ಖಾಸಗಿ ದೇವಾಲಯಗಳು ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ರಾಜ್ಯ ಪೊಲೀಸರು ತಡೆಯುತ್ತಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದರೆ ಇದಕ್ಕೆ ಉತ್ತರ ನೀಡಿರುವ ತಮಿಳುನಾಡು ಸರ್ಕಾರ ಸೇಲಂನಲ್ಲಿ ನಡೆಯುತ್ತಿರುವ ಡಿಎಂಕೆ ಯುವ ಸಮಾವೇಶದಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ತಪ್ಪು ಮಾಹಿತಿಗಳನ್ನು ಪ್ರಚಾರ ಮಾಡುತ್ತಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ.

ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದು, "ಜನವರಿ 22ರಂದು ನಡೆಯುವ ಅಯೋಧ್ಯೆ ರಾಮ ಮಂದಿರ ಕಾರ್ಯಕ್ರಮಗಳ ನೇರ ಪ್ರಸಾರವನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ತಮಿಳುನಾಡಿನಲ್ಲಿ ಶ್ರೀರಾಮನಿಗೆ 200ಕ್ಕೂ ಹೆಚ್ಚು ದೇವಸ್ಥಾನಗಳಿವೆ. ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿರ್ವಹಿಸುವ ದೇವಾಲಯಗಳಲ್ಲಿ ಶ್ರೀರಾಮನ ಹೆಸರಿನಲ್ಲಿ ಯಾವುದೇ ಪೂಜೆ/ಭಜನೆ/ಪ್ರಸಾದ/ಅನ್ನದಾನವನ್ನು ನಡೆಸಲು ಅನುಮತಿ ನೀಡಿಲ್ಲ. ಪೊಲೀಸರು ಖಾಸಗಿಯಾಗಿ ನಡೆಸುವ ದೇವಸ್ಥಾನಗಳಲ್ಲಿ ಸಹ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ನಿಲ್ಲಿಸುತ್ತಿದ್ದಾರೆ. ಅವರು ಸಂಘಟಕರಿಗೆ ಬೆದರಿಕೆ ಹಾಕುತ್ತಿದ್ದಾರೆ. ಈ ಹಿಂದೂ ವಿರೋಧಿ, ದ್ವೇಷಪೂರಿತ ಕ್ರಮವನ್ನು ಬಲವಾಗಿ ಖಂಡಿಸುತ್ತೇನೆ" ಎಂದು ಸೀತಾರಾಮನ್ ಬರೆದಿದ್ದಾರೆ.
ಡಿಎಂಕೆ ಹಿಂದೂ ವಿರೋಧಿ ಎಂದ ಕೇಂದ್ರ ಸಚಿವೆ
"ನೇರ ಪ್ರಸಾರ ನಿಷೇಧವನ್ನು ಸಮರ್ಥಿಸಲು ತಮಿಳುನಾಡು ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆ ಕಾರಣ ನೀಡುತ್ತಿದೆ. ಸುಳ್ಳು ಮತ್ತು ನಕಲಿ ನಿರೂಪಣೆಯಿಂದ ಸಮಸ್ಯೆಗಳಾಗುತ್ತವೆ ಎಂದಿದೆ. ಅಯೋಧ್ಯೆ ತೀರ್ಪಿನ ದಿನದಂದು ಯಾವುದೇ ಕಾನೂನು ಸಮಸ್ಯೆಗಳು ಆಗಿಲ್ಲ. ದೇಶದ ಯಾವುದೇ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಡಿಪಾಯ ಹಾಕಿದ ದಿನವೂ ಸಮಸ್ಯೆ ಆಗಿಲ್ಲ. ತಮಿಳುನಾಡಿನಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಆಚರಿಸಲು ಜನರ ಸ್ವಯಂಪ್ರೇರಿತ ಭಾಗವಹಿಸುವಿಕೆ ತಡೆಯುವ ಮೂಲಕ ಡಿಎಂಕೆ ಹಿಂದೂ ವಿರೋಧಿಯಾಗಿದೆ," ಎಂದು ಹೇಳಿದರು.
ಸಚಿವೆ ಹೇಳಿಕೆ ಖಂಡಿಸಿದ ಪಿ.ಕೆ.ಸೇಕರ್ ಬಾಬು
ತಮಿಳುನಾಡಿನ ಹಿಂದೂ ಧಾರ್ಮಿಕ ಮತ್ತು ದತ್ತಿ ಸಚಿವ ಪಿ.ಕೆ.ಸೇಕರ್ ಬಾಬು ಹೇಳಿಕೆಯನ್ನು ಖಂಡಿಸಿದ್ದಾರೆ. ಸೇಲಂನಲ್ಲಿ ನಡೆಯಲಿರುವ ಡಿಎಂಕೆ ಯುವ ಸಮಾವೇಶದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಬಿಜೆಪಿ ಸುಳ್ಳು ಮಾಹಿತಿ ಹರಡಿರುವುದನ್ನು ಬಲವಾಗಿ ಖಂಡಿಸುತ್ತೇವೆ. ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು ತಮಿಳುನಾಡಿನ ದೇವಸ್ಥಾನಗಳಲ್ಲಿ ಪ್ರಸಾದ ನೀಡಲು, ಭಕ್ತರಿಗೆ ಅನ್ನದಾನ, ಪೂಜೆ ಸಲ್ಲಿಸುವ ಸ್ವಾತಂತ್ರ್ಯಕ್ಕೆ ಯಾವುದೇ ಮಿತಿ ಹೇರಿಲ್ಲ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರರಂತಹ ಕಚೇರಿಯಲ್ಲಿರುವವರು ಈ ತಪ್ಪು ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಪ್ರಚಾರ ಮಾಡುತ್ತಿದ್ದಾರೆ " ಎಂದು ಹೇಳಿದರು.
ಕಳೆದ ವಾರ, ಎಂಕೆ ಸ್ಟಾಲಿನ್ ಅವರ ಪುತ್ರ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಮಸೀದಿಯನ್ನು ಕೆಡವಿ ನಿರ್ಮಿಸಿದ ದೇವಾಲಯವನ್ನು ತಮ್ಮ ಪಕ್ಷವು ಒಪ್ಪುವುದಿಲ್ಲ ಎಂದು ಹೇಳಿದ್ದರು. "ಅಲ್ಲಿ ದೇವಸ್ಥಾನ ಬರುವುದರಿಂದ ನಮಗೆ ಯಾವುದೇ ಸಮಸ್ಯೆ ಇಲ್ಲ, ಮಸೀದಿ ಕೆಡವಿದ ನಂತರ ಮಂದಿರ ನಿರ್ಮಾಣಕ್ಕೆ ನಾವು ಒಪ್ಪುವುದಿಲ್ಲ" ಎಂದು ಡಿಎಂಕೆ ಯುವ ಘಟಕದ ಮುಖ್ಯಸ್ಥರು ಹೇಳಿದ್ದಾರೆ.
ಅಯೋಧ್ಯೆಯ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ನೂರಾರು ರಾಜಕಾರಣಿಗಳು, ನಟರು ಮತ್ತು ಇತರ ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ. ಧಾರ್ಮಿಕ ಸಮಾರಂಭದಿಂದ ರಾಜಕೀಯ ಲಾಭ ಪಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಬಹುತೇಕ ಪ್ರಮುಖ ವಿರೋಧ ಪಕ್ಷಗಳು ಕಾರ್ಯಕ್ರಮದ ಆಹ್ವಾನವನ್ನು ತಿರಸ್ಕರಿಸಿವೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications