ಎಸಿ ರೂಂನಲ್ಲಿ ಕುಳಿತು ಬಿಜೆಪಿ ಪ್ರಣಾಳಿಕೆ ತಯಾರಿಸುವುದಿಲ್ಲ: ನಿರ್ಮಲಾ ಸೀತಾರಾಮನ್
ಪುದುಚೇರಿ, ಮಾರ್ಚ್ 26: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪುದುಚೇರಿ ಚುನಾವಣೆಗೆ ಬಿಜೆಪಿಯ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಸಚಿವರುಗಳಾದ ಅರ್ಜುನ್ ರಾಮ್ ಮೇಘಾವಲ್ ಮತ್ತು ಗಿರಿರಾಜ್ ಸಿಂಗ್ ಉಪಸ್ಥಿತರಿದ್ದರು.
ಎಸಿ ರೂಂನಲ್ಲಿ ಕುಳಿತುಕೊಂಡು ನಾವು ಪ್ರಣಾಳಿಕೆ ತಯಾರಿಸಿಲ್ಲ. ತಾವು ನೀಡಿರುವ ಭರವಸೆಗಳನ್ನು ಪ್ರಧಾನಿ ಮೋದಿಯವರು ಜನರಿಗೆ ನೀಡುತ್ತಾ ಬಂದಿದ್ದಾರೆ ಎಂದು ಪುದುಚೆರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಜನರಿಂದ ಸಲಹೆ, ಸೂಚನೆಗಳನ್ನು ಪಡೆದುಕೊಂಡು ಬಿಜೆಪಿಯು ನ್ಯಾಯಯುತವಾದ ಚುನಾವಣಾ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ. ಮಾರ್ಚ್ 12ರಂದು ಅಧಿಸೂಚನೆ ಪ್ರಕಟ. ಮಾರ್ಚ್ 19 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಮಾರ್ಚ್ 20 ನಾಮಪತ್ರ ಪರಿಶೀಲನೆ, 22ನೇ ಮಾರ್ಚ್ ನಾಮಪತ್ರ ಹಿಂಪಡೆಯಲು ಕೊನೆಯ ದಿನ, ಏಪ್ರಿಲ್ 6 ಚುನಾವಣೆ.
ಇತ್ತೀಚೆಗಷ್ಟೇ ಕಾಂಗ್ರೆಸ್ ಪುದುಚೇರಿ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿತ್ತು ಆದರೆ ಅದರಲ್ಲಿ ನಿರ್ಗಮಿತ ಸಿಎಂ ನಾರಾಯಣಸ್ವಾಮಿ ಅವರ ಹೆಸರೇ ಇರಲಿಲ್ಲ.
ಒಟ್ಟು 30 ಕ್ಷೇತ್ರಗಳಲ್ಲಿ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿದ್ದು, ಡಿಎಂಕೆ 13 ಹಾಗೂ ಸಿಪಿಐ ಹಾಗೂ ವಿಎಂಕೆ ತಲಾ ಒಂದು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಕೇಂದ್ರ ಚುನಾವಣಾ ಆಯೋಗವು ತಮಿಳುನಾಡು,ಪುದುಚೇರಿ,ಅಸ್ಸಾಂ,ಕೇರಳ,ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ದಿನಾಂಕಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications