ಜಮೀನಿಗಾಗಿ ಎರಡು ಕುಟುಂಬಗಳ ನಡುವೆ ಘರ್ಷಣೆ: ಆರು ಮಂದಿ ಸಾವು
ಎರಡು ಕುಟುಂಬಗಳ ನಡುವಿನ ದೀರ್ಘಕಾಲದ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಜಗಳದಲ್ಲಿ ಮಹಿಳೆ ಸೇರಿದಂತೆ ಆರು ಮಂದಿಯನ್ನು ಕೊಲೆ ಮಾಡಲಾಗಿದೆ. ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಜನರಲ್ಲಿ ಭೀತಿಯನ್ನು ಉಂಟುಮಾಡಿದೆ.
ಡಿಯೋರಿಯಾ ಜಿಲ್ಲೆಯ ರುದ್ರಪುರ ಪೊಲೀಸ್ ಠಾಣೆ ವ್ಯಾಪ್ತಿಯ ಫತೇಪುರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಅಲ್ಲಿಗೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಎರಡು ಕುಟುಂಬಗಳ ನಡುವೆ ಹಲವು ವರ್ಷಗಳಿಂದ ಜಮೀನು ವಿಚಾರದಲ್ಲಿ ವಿವಾದ ತಾರಕಕ್ಕೇರಿದ್ದು, ಇಬ್ಬರ ನಡುವೆ ವೈಮನಸ್ಸು ಹೆಚ್ಚಿತ್ತು. ಕೊಲೆಯಾದವರಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರೂ ಇದ್ದಾರೆ ಎಂದು ವರದಿಗಳು ತಿಳಿಸಿವೆ.
ಜಿಪಂ ಸದಸ್ಯನ ಕೊಲೆ ನಂತರ ಹಿಂಸಾಚಾರ
ಫತೇಪುರದ ಲೆಹ್ರಾ ತೋಲಾದಲ್ಲಿ ಸೋಮವಾರ ಬೆಳಗ್ಗೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪ್ರೇಮ್ ಯಾದವ್ ಅವರನ್ನು ಹೊಡೆದು ಕೊಂದಾಗ ಹಿಂಸಾಚಾರ ಭುಗಿಲೆದ್ದಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ನಂತರ, ಆಕ್ರೋಶಗೊಂಡ ಜನರು ಆರೋಪಿಯ ಮನೆಗೆ ಜಮಾಯಿಸಿದರು ಮತ್ತು ಸೇಡು ತೀರಿಸಿಕೊಳ್ಳಲು ಸತ್ಯಪ್ರಕಾಶ್ ದುಬೆಯನ್ನು ಕೊಲೆ ಮಾಡಿದರು. ದುಬೆಯ ಕುಟುಂಬದ ನಾಲ್ವರು ಅಮಾಯಕರು ಸಹ ಪ್ರಾಣ ಕಳೆದುಕೊಂಡಿದ್ದು, ಆದರೂ ಜನರ ಕೋಪವು ಕಡಿಮೆಯಾಗಿಲ್ಲ.
ಇಬ್ಬರ ಬಂಧನ, ಬಿಗಿ ಬಂದೋಬಸ್ತ್
ಈ ಭೀಕರ ಘಟನೆಯ ಹಿನ್ನೆಲೆಯಲ್ಲಿ, ಇಡೀ ಗ್ರಾಮದಲ್ಲಿ ಅಶಾಂತಿ ಆವರಿಸಿತು. ಗ್ರಾಮದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಮತ್ತು ಘಟನಾ ಸ್ಥಳದಲ್ಲಿ ನಿರ್ಣಾಯಕ ಪುರಾವೆಗಳನ್ನು ಸಂಗ್ರಹಿಸಲು ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.
ಮೊದಲು ಕೊಲೆಯಾದ ಪ್ರೇಮ್ ಯಾದವ್ ಅವರು ಸತ್ಯಪ್ರಕಾಶ್ ಅವರ ಮನೆಗೆ ಭೇಟಿ ನೀಡಿದ್ದರು ಎಂದು ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ತಿಳಿಸಿದ್ದಾರೆ. ಇಬ್ಬರ ನಡುವಿನ ತೀವ್ರ ವಾಗ್ವಾದ ಉಂಟಾಗಿದ್ದು, ಪ್ರೇಮ್ ಯಾದವ್ರನ್ನು ಹರಿತವಾದ ಆಯುಧದಿಂದ ಕೊಲೆ ಮಾಡಲಾಗಿದೆ. . ಇದಕ್ಕೆ ಪ್ರತೀಕಾರವಾಗಿ ಸತ್ಯಪ್ರಕಾಶ್ ಅವರ ಮನೆಯ ಮೇಲೆ ಪ್ರೇಮ್ ಅವರ ನೆರೆಹೊರೆಯವರು ದಾಳಿ ಮಾಡಿ ಕುಟುಂಬಸ್ಥರನ್ನು ಕೊಲೆ ಮಾಡಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.
ಸಿಎಂ ಯೋಗಿ ಆದಿತ್ಯನಾಥ್ ಟ್ವೀಟ್
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಸಂಬಂಧ ಎಕ್ಸ್ (ಟ್ವಿಟರ್) ನಲ್ಲಿ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಭರವಸೆ ನೀಡಿದರು. ಘಟನಾ ಸ್ಥಳಕ್ಕೆ ಆಗಮಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಎಡಿಜಿ ಆಯುಕ್ತರು ಮತ್ತು ಐಜಿ ಅವರಿಗೆ ಸೂಚಿಸಿದ್ದೇನೆ, ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತವನ್ನು ಕೋರಿದ್ದೇನೆ. ತಪ್ಪಿತಸ್ಥರನ್ನು ಬಿಡಲಾಗುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications