ಕರ್ನಾಟಕದಿಂದ ಅಯೋದ್ಯೆಗೆ ಏಳು ವಿಶೇಷ ರೈಲು: ಶೀಘ್ರದಲ್ಲೇ ಬುಕಿಂಗ್ ಶುರು, ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರು, ಜನವರಿ 23: ಅಯೋಧ್ಯೆಗೆ ಹೋಗಬೇಕೆಂಬ ಆಸೆ ಹೊಂದಿರುವ ಕರ್ನಾಟಕದ ಭಕ್ತರಿಗೆ ನೈಋತ್ಯ ರೈಲ್ವೆ ಶುಭ ಸುದ್ದಿ ನೀಡಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಂದ ಅಯೋಧ್ಯೆಗೆ ಏಳೂ ವಿಶೇಷ ರೈಲುಗಳು ಸಂಚರಿಸಲಿದೆ
ಹೌದು, ನೈಋತ್ಯ ರೈಲ್ವೆ (SWR) ಕರ್ನಾಟಕ ಮತ್ತು ಗೋವಾವನ್ನು ಅಯೋಧ್ಯಾ ಧಾಮದೊಂದಿಗೆ ಸಂಪರ್ಕಿಸಲು ವಿಶೇಷ ಎಕ್ಸ್ಪ್ರೆಸ್ ಎಂಬ ಏಳು ವಿಶೇಷ ರೈಲುಗಳು ಸಂಚರಿಸಲಿದೆ. ಎರಡು ರೈಲುಗಳು ಮೈಸೂರಿನಿಂದ (SMVT ಬೆಂಗಳೂರು ಮೂಲಕ), ಮತ್ತು SMVT ಬೆಂಗಳೂರು, ತುಮಕೂರು, ಚಿತ್ರದುರ್ಗ, ಬೆಳಗಾವಿ (ಧಾರವಾಡ ಮತ್ತು ಹುಬ್ಬಳ್ಳಿ ಮೂಲಕ) ಮತ್ತು ವಾಸ್ಕೋಡಗಾಮಾ (ರತ್ನಗಿರಿ ಮತ್ತು ಪನ್ವೇಲ್ ಮೂಲಕ) ತಲಾ ಒಂದು ರೈಲುಗಳು ಹೊರಡಲಿವೆ.

ಈ ರೈಲುಗಳು ಸೀಮಿತ ಪ್ರಯಾಣಗಳನ್ನು ಮಾಡುತ್ತವೆಯಾದರೂ, ರೈಲ್ವೆ ಮಂಡಳಿಯು ಬೇಡಿಕೆಯ ಆಧಾರದ ಮೇಲೆ ಅವುಗಳನ್ನು ವಿಸ್ತರಿಸಲು ನಿರ್ಧರಿಸಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಧಿಕೃತ ಬುಕಿಂಗ್ ಮತ್ತು ದರಗಳ ವಿವರಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು. ಸಂಚರಿಸುವ ವೇಳಾಪಟ್ಟಿ, ನಿಲುಗಡೆ ಇತ್ಯಾದಿ ಸಂಪೂರ್ಣ ವಿವರ ಇಲ್ಲಿದೆ.
ರೈಲು ಸಂಖ್ಯೆ 06201
ಇದು ಬುಧವಾರದಂದು SMVT ಬೆಂಗಳೂರಿನಿಂದ ಹೊರಟು ಶುಕ್ರವಾರದಂದು ಅಯೋಧ್ಯಾ ಧಾಮವನ್ನು ತಲುಪುತ್ತದೆ. ಇದು ಶನಿವಾರದಂದು ಅಯೋಧ್ಯಾಧಾಮದಿಂದ ಹೊರಟು ಮಂಗಳವಾರ SMVT ಬೆಂಗಳೂರು ತಲುಪುತ್ತದೆ. ಇದು ಜನವರಿ 31, ಫೆಬ್ರವರಿ 14 ಮತ್ತು 28 ರಂದು SMVT ಬೆಂಗಳೂರಿನಿಂದ ಚಲಿಸುತ್ತದೆ. ಅಲ್ಲದೇ ಫೆಬ್ರವರಿ 3, 17 ಮತ್ತು ಮಾರ್ಚ್ 2 ರಂದು ಅಯೋಧ್ಯೆಯಿಂದ ಹೊರಡಲಿದೆ. ಈ ರೈಲು 22 ಕೋಚ್ಗಳನ್ನು ಹೊಂದಿದ್ದು, 2,802 ಕಿಮೀ ಸಂಚರಿಸಲಿದೆ
ರೈಲು ಸಂಖ್ಯೆ 06202
ಇದು ಭಾನುವಾರ ಮೈಸೂರಿನಿಂದ ಹೊರಟು ಮಂಗಳವಾರ ಅಯೋಧ್ಯಾಧಾಮ ತಲುಪಲಿದೆ. ಇದು ಬುಧವಾರದಂದು ಅಯೋಧ್ಯಾಧಾಮದಿಂದ ಹೊರಟು ಶನಿವಾರದಂದು ಮೈಸೂರು ತಲುಪುತ್ತದೆ. ಇದು ಫೆಬ್ರವರಿ 2 ಮತ್ತು 18 ರಂದು ಮೈಸೂರಿನಿಂದ ಮತ್ತು ಫೆಬ್ರವರಿ 7 ಮತ್ತು 21 ರಂದು ಅಯೋಧ್ಯಾ ಧಾಮದಿಂದ ಚಲಿಸುತ್ತದೆ. ಈ ರೈಲು 22 ಕೋಚ್ಗಳನ್ನು ಹೊಂದಿದ್ದು, 2,952 ಕಿಮೀ ಸಂಚರಿಸಲಿದೆ. ಕರ್ನಾಟಕದಲ್ಲಿ ಎಸ್ಎಂವಿಟಿ ಬೆಂಗಳೂರು, ತುಮಕೂರು, ಅರಸೀಕೆರೆ, ಕಡೂರು, ಬೀರೂರು, ಚಿತ್ರದುರ್ಗ, ತೋರಣಗಲ್, ಹೊಸಪೇಟೆ, ಕೊಪ್ಪಳ, ಗದಗ, ಬಾದಾಮಿ, ಬಾಗಲಕೋಟ ಮತ್ತು ವಿಜಯಪುರ ನಿಲುಗಡೆಯಾಗಲಿದೆ.
ರೈಲು ಸಂಖ್ಯೆ 06203
ಇದು ತುಮಕೂರನ್ನು ಅಯೋಧ್ಯಾ ಧಾಮದೊಂದಿಗೆ ಸಂಪರ್ಕಿಸುತ್ತದೆ. ಈ ರೈಲು ಬುಧವಾರ (ಫೆಬ್ರವರಿ 7 ಮತ್ತು 21) ತುಮಕೂರಿನಿಂದ ಮತ್ತು ಫೆಬ್ರವರಿ 10 ಮತ್ತು 24 ರಂದು ಅಯೋಧ್ಯಾಧಾಮದಿಂದ ಹೊರಡಲಿದೆ. ಇದು 22 ಕೋಚ್ಗಳನ್ನು ಹೊಂದಿದ್ದು, 2,726 ಕಿಮೀ ಏಕಮುಖ ಸಂಚಾರ ಮಾಡಲಿದೆ.

ರೈಲು ಸಂಖ್ಯೆ 06204
ಇದು ಭಾನುವಾರ (ಫೆಬ್ರವರಿ 11 ಮತ್ತು 25) ಚಿತ್ರದುರ್ಗದಿಂದ ಮತ್ತು ಬುಧವಾರದಂದು (ಫೆಬ್ರವರಿ 14 ಮತ್ತು 28) ಅಯೋಧ್ಯಾಧಾಮದಿಂದ ಹೊರಡಲಿದೆ. ಇದು 22 ಕೋಚ್ಗಳನ್ನು ಹೊಂದಿದ್ದು, 2,483 ಕಿಮೀ ಏಕಮುಖ ಸಂಚಾರ ಒಳಗೊಂಡಿರಲಿದೆ.
ರೈಲು ಸಂಖ್ಯೆ 06205
ಇದು ವಾಸ್ಕೋಡಗಾಮಾವನ್ನು ದರ್ಶನ್ ನಗರದೊಂದಿಗೆ (ಅಯೋಧ್ಯೆಯ ಸಮೀಪವಿರುವ ರೈಲು ನಿಲ್ದಾಣ) ಸಂಪರ್ಕಿಸುತ್ತದೆ. ರೈಲು ಸೋಮವಾರ (ಫೆಬ್ರವರಿ 12 ಮತ್ತು 26) ವಾಸ್ಕೋಡಗಾಮಾದಿಂದ ಮತ್ತು ಶುಕ್ರವಾರ (ಫೆಬ್ರವರಿ 16 ಮತ್ತು ಮಾರ್ಚ್ 1) ದರ್ಶನ್ ನಗರದಿಂದ ಹೊರಡಲಿದೆ.ಇದು ಮಜೋರ್ಡಾ, ಮಡಗಾಂವ್, ಕರ್ಮಾಲಿ, ರತ್ನಗಿರಿ, ಪನ್ವೇಲ್, ವಾಪಿ, ಕೋಟಾ, ತುಂಡ್ಲಾ, ಪ್ರಯಾಗ್ರಾಜ್ ಮತ್ತು ಮಿರ್ಜಾಪುರ ಮೂಲಕ ಹಾದುಹೋಗುತ್ತದೆ. ಇದು 22 ಕೋಚ್ಗಳನ್ನು ಹೊಂದಿದ್ದು, 2,791 ಕಿಮೀ ಏಕಮುಖವಾಗಿ ಕ್ರಮಿಸುತ್ತದೆ.
ರೈಲು ಸಂಖ್ಯೆ 06206
ಇದು ಮೈಸೂರನ್ನು ಅಯೋಧ್ಯೆಯೊಂದಿಗೆ ಸಂಪರ್ಕಿಸುತ್ತದೆ ಮತ್ತು ತಲಾ ಒಂದು ಪ್ರವಾಸವನ್ನು ಮಾಡುತ್ತದೆ. ಇದು ಶನಿವಾರ (ಫೆಬ್ರವರಿ 17) ಮೈಸೂರಿನಿಂದ ಮತ್ತು ಮಂಗಳವಾರ (ಫೆಬ್ರವರಿ 20) ಅಯೋಧ್ಯಾಧಾಮದಿಂದ ಹೊರಡಲಿದೆ. ಇದು ಕೆಎಸ್ಆರ್ ಬೆಂಗಳೂರು, ತುಮಕೂರು, ಅರಸೀಕೆರೆ, ಕಡೂರು, ಬೀರೂರು, ಚಿತ್ರದುರ್ಗ, ತೋರಣಗಲ್, ಹೊಸಪೇಟೆ, ಕೊಪ್ಪಳ, ಗದಗ, ಬಾದಾಮಿ, ಬಾಗಲಕೋಟೆ ಮತ್ತು ಬಿಜಾಪುರ, ಕಲಬುರಗಿ, ವಾಡಿ, ಬಲ್ಹರ್ಷಾ, ನಾಗಪುರ, ಜಬಲ್ಪುರ ಮತ್ತು ಪ್ರಯಾಗರಾಜ್ ಮೂಲಕ ಹಾದು ಹೋಗಲಿದೆ. ಇದು 22 ಕೋಚ್ಗಳನ್ನು ಹೊಂದಿದ್ದು, 3,004 ಕಿಮೀ ಏಕಮುಖವಾಗಿ ಕ್ರಮಿಸುತ್ತದೆ.
ರೈಲು ಸಂಖ್ಯೆ 06207
ಇದು ಶನಿವಾರ (ಫೆಬ್ರವರಿ 17) ಬೆಳಗಾವಿಯಿಂದ ಮತ್ತು ಮಂಗಳವಾರ (ಫೆಬ್ರವರಿ 20) ಅಯೋಧ್ಯಾಧಾಮದಿಂದ ಹೊರಡಲಿದೆ. ಇದು ಧಾರವಾಡ, ಹುಬ್ಬಳ್ಳಿ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ, ಸಿಕಂದರಾಬಾದ್, ಬಲ್ಹರ್ಷಾ ಮತ್ತು ಪ್ರಯಾಗರಾಜ್ ಮೂಲಕ ಚಲಿಸುತ್ತದೆ. ಇದು 22 ಕೋಚ್ಗಳನ್ನು ಹೊಂದಿದ್ದು, 2462 ಕಿಮೀ ಏಕಮುಖ ಕ್ರಮಿಸಲಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications