ಗುಂಡೇಟು ತಗುಲಿದ್ದ ಎನ್ಐಎ ಅಧಿಕಾರಿ ಪತ್ನಿ ವಿಧಿವಶ
ನವದೆಹಲಿ, ಏಪ್ರಿಲ್. 13: ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿ ತಂಜಿಲ್ ಅಹಮದ್ ಅವರ ಪತ್ನಿ ಚಿಕತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಅಹಮದ್ ತಮ್ಮ ಹೆಂಡತಿ ಮತ್ತು ಮಕ್ಕಳೊಂದಿಗೆ ಮನೆಗೆ ವಾಪಸಾಗುತ್ತಿದ್ದ ವೇಳೆ ಏಪ್ರಿಲ್ 3 ರಂದು ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದರು.
ತಂಜಿಲ್ ಅಹಮದ್ ಅವರ ಪತ್ನಿ ಫರ್ಜಾನಾ ಖಟೂನ್, ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅಹಮದ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದ ವೇಳೆ ಫರ್ಜಾನ ಅವರ ದೇಹಕ್ಕೂ ನಾಲ್ಕು ಗುಂಡುಗಳು ಹೊಕ್ಕಿದ್ದವು. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.[ಗುಂಡಿಟ್ಟು ಪಠಾಣ್ಕೋಟ್ ತನಿಖಾಧಿಕಾರಿ ಹತ್ಯೆ]

ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫರ್ಜಾನ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದರು ಎಂದು ಎನ್ ಐ ಎ ಅಧಿಕಾರಿಗಳು ತಿಳಿಸಿದ್ದಾರೆ. ಪಠಾಣ್ ಕೋಟ್ ದಾಳಿಯ ತನಿಖೆಯಲ್ಲಿ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದ ಅಧಿಕಾರಿ ಗುಂಡೇಟಿಗೆ ಬಲಿಯಾಗಿದ್ದು ಹಲವು ಅನುಮಾನಗಳಿಗೆ ಕಾರಣ ಮಾಡಿಕೊಟ್ಟಿತ್ತು.[ಎನ್ಐಎ ಅಧಿಕಾರಿ ತನ್ಜಿಲ್ ಹತ್ಯೆ, ಇಬ್ಬರ ಬಂಧನ]
ತಂಜಿಲ್ ಅಹ್ಮದ್ ಅವರು ಬಿಎಸ್ಎಫ್ನಲ್ಲಿ ಅಸಿಸ್ಟೆಂಟ್ ಕಮಾಂಡರ್ ಆಗಿದ್ದರು. 2009ರ ಫೆಬ್ರವರಿಯಲ್ಲಿ ಅವರನ್ನು ಎನ್ಐಎಗೆ ವರ್ಗಾವಣೆ ಮಾಡಲಾಗಿತ್ತು. ಮೊದಲು ಎನ್ಐಎ ಗುಪ್ತಚರ ವಿಭಾಗದಲ್ಲಿದ್ದ ಅವರು ನಂತರ ತನಿಖಾಧಿಕಾರಿಯಾಗಿದ್ದರು. ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸೇರಿದಂತೆ ಹಲವು ಮಹತ್ವದ ಪ್ರಕರಣಗಳ ತನಿಖೆಯನ್ನು ಅವರು ನಡೆಸುತ್ತಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications