ಮೋದಿಯಿಂದಾಗಿ ವಿಶ್ವದಲ್ಲಿ ಭಾರತದ ಹೆಗ್ಗುರುತು: ಕೃಷ್ಣ
ನವದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾರ್ಚ್ 22ರಂದು ಬಿಜೆಪಿಗೆ ವಿದ್ಯುಕ್ತವಾಗಿ ಸೇರಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಎಂ. ಕೃಷ್ಣ.
ನವದೆಹಲಿ, ಮಾರ್ಚ್ 22: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಯೋಜನೆಗಳಿಂದಾಗಿ ವಿಶ್ವ ಭೂಪಟದಲ್ಲಿ ಭಾರತವು ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು, ಇಡೀ ಪ್ರಪಂಚವೇ ಭಾರತದತ್ತ ತಿರುಗು ನೋಡುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿಯ ನೂತನ ಧುರೀಣ ಎಸ್.ಎಂ. ಕೃಷ್ಣ ತಿಳಿಸಿದ್ದಾರೆ.[ಎಸ್ಎಂ ಕೃಷ್ಣ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ: ಅಮಿತ್ ಶಾ]
ಬುಧವಾರ (ಮಾರ್ಚ್ 22) ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ಕೃಷ್ಣ, ಮೋದಿ ಹಾಗೂ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಕೊಂಡಾಡಿದರು.[ಬಿಜೆಪಿಗೆ ಕೃಷ್ಣಾಗಮನ, ಶಿಸ್ತಿನ ರಾಜಕಾರಣಿಯ ರಾಜಕೀಯ ಹಿನ್ನೋಟ]
ಮೋದಿ ಕೈ ಬಲಪಡಿಸಲು ತಾವು ಬಿಜೆಪಿಗೆ ಸೇರಿರುವುದಾಗಿ ತಿಳಿಸಿದ ಎಸ್.ಎಂ. ಕೃಷ್ಣ, ''ಕಾಂಗ್ರೆಸ್ ನಲ್ಲಿದ್ದಾಗಲೇ ಮೋದಿಯವರ ನೋಟು ನಿಷೇಧದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದೆ. ಇಂಥ ಹಲವಾರು ಆಲೋಚನೆಗಳನ್ನು ಹೊಂದಿರುವ ಮೋದಿಯವರನ್ನು ಬೆಂಬಲಿಸಲು ನಾನು ಬಿಜೆಪಿ ಸೇರಿದ್ದೇನೆ'' ಎಂದು ಅವರು ತಿಳಿಸಿದರು.[ಎಸ್.ಎಂ. ಕೃಷ್ಣ ಅಧಿಕೃತವಾಗಿ ಬಿಜೆಪಿ ಸೇರ್ಪಡೆ]