ಪ್ರಧಾನಿ ಮೋದಿ ಭೇಟಿ ಮಾಡಿದ ಎಸ್ಸೆಂ ಕೃಷ್ಣ
ಎರಡು ದಿನಗಳ ಹಿಂದಷ್ಟೇ ಬಿಜೆಪಿಗೆ ಸೇರಿಕೊಂಡ ನಂತರ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಇದೇ ಮೊದಲ ಬಾರಿಗೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ನವದೆಹಲಿ, ಮಾರ್ಚ್ 24: ಎರಡು ದಿನಗಳ ಹಿಂದಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿರುವ ಕಾಂಗ್ರೆಸ್ ಮಾಜಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು, ಶುಕ್ರವಾರ (ಮಾರ್ಚ್ 24) ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಮಾತುಕತೆ ವೇಳೆ, ಕೃಷ್ಣ ಅವರು ಬಿಜೆಪಿಗೆ ಆಗಮಿಸಿದ್ದಕ್ಕೆ ಖುಷಿ ವ್ಯಕ್ತಪಡಿಸಿದ ಮೋದಿ, ಬಿಜೆಪಿಯಲ್ಲಿ ಕೃಷ್ಣ ಅವರಿಗೆ ಒಳಿತಾಗಲಿ ಎಂದು ಹಾರೈಸಿರುವುದಾಗಿ ಮೂಲಗಳು ತಿಳಿಸಿವೆ.[ಎಸ್ಎಂ ಕೃಷ್ಣ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ: ಅಮಿತ್ ಶಾ]

ಮಾರ್ಚ್ 24ರ ಸಂಜೆ ನವದೆಹಲಿಯಿಂದ ಬೆಂಗಳೂರಿಗೆ ತೆರಳಲಿರುವ ಎಸ್.ಎಂ. ಕೃಷ್ಣ ಅವರಿಗಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸ್ವಾಗತ ಸಮಾರಂಭವನ್ನು ಏರ್ಪಡಿಸಲಾಗಿತ್ತು.[ಎಸ್ಎಂ ಕೃಷ್ಣ ಬಿಜೆಪಿ ಸೇರಿದರೆ ಆಗುವ ಲಾಭನಷ್ಟಗಳೇನು?]
ಈ ಸಮಾರಂಭದಲ್ಲಿ ಮಾತನಾಡಿದ ಎಸ್ಸೆಂ ಕೃಷ್ಣ, ತಾವು ಮೋದಿಯವರ ರಾಜಕೀಯ ನಡೆಗಳು, ಚಿಂತನೆಗಳಿಗೆ ಆಕರ್ಷಿಸಲ್ಪಟ್ಟು ಬಿಜೆಪಿಗೆ ಸೇರಿರುವುದಾಗಿ ತಿಳಿಸಿದರಲ್ಲದೆ, ಕಾಂಗ್ರೆಸ್ಸಿನಲ್ಲಿ ಅನುಭವಿಸಿದ ಮಾನಸಿಕ ಯಾತನೆಗಳೇ ಬಿಜೆಪಿಯತ್ತ ಮುಖ ಮಾಡಲು ಕಾರಣ ಎಂದು ತಿಳಿಸಿದರು.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications