ಎಸ್ಸೆಂ ಕೃಷ್ಣ ಅವರಿಗೆ ಬಿಜೆಪಿಯಿಂದ ಭರ್ಜರಿ ಆಫರ್
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರುವುದಕ್ಕೂ ಮುನ್ನವೇ ಭರ್ಜರಿ ಆಫರ್ ಸಿಕ್ಕಿದೆ. ತಮಿಳುನಾಡಿನ ರಾಜ್ಯಪಾಲರಾಗುವ ಅವಕಾಶ ಕೂಡಿ ಬಂದಿದೆ.
ಬೆಂಗಳೂರು, ಮಾರ್ಚ್ ೧೪: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರುವುದಕ್ಕೂ ಮುನ್ನವೇ ಭರ್ಜರಿ ಆಫರ್ ಸಿಕ್ಕಿದೆ. ತಮಿಳುನಾಡಿನ ರಾಜ್ಯಪಾಲರಾಗುವ ಅವಕಾಶ ಕೂಡಿ ಬಂದಿದೆ. ಜನವರಿ ತಿಂಗಳಲ್ಲಿ ಕಾಂಗ್ರೆಸ್ ತೊರೆದ ಕೃಷ್ಣ ಅವರು ಬುಧವಾರದಂದು ಬಿಜೆಪಿ ಸೇರಲಿದ್ದಾರೆ.
ಕರ್ನಾಟಕದಲ್ಲಿ ಒಕ್ಕಲಿಗ ಸಮುದಾಯ ಓಲೈಕೆ, ಬೆಂಗಳೂರಿನ ಮೇಲ್ವರ್ಗದ ಜನತೆಯನ್ನು ಸೆಳೆಯಲು ಎಸ್ಸೆಂ ಕೃಷ್ಣ ಅವರ ರಾಜಕೀಯ ಅನುಭವವನ್ನು ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಇದರ ಜತೆಗೆ ತಮಿಳುನಾಡಿನ ರಾಜಕೀಯ ಸ್ಥಿತ್ಯಂತರದಲ್ಲಿ ಅಲ್ಲಿನ ವ್ಯವಸ್ಥೆ ಮೇಲೆ ಹಿಡಿತ ಸಾಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಎಸ್ಸೆಂ ಕೃಷ್ಣ ಅವರಿಗೆ ತಮಿಳುನಾಡಿನ ರಾಜ್ಯಪಾಲ ಹುದ್ದೆಯನ್ನು ನೀಡುವ ಬಗ್ಗೆ ಇನ್ನೆರಡು ದಿನಗಳಲ್ಲಿ ಅಧಿಕೃತ ಪ್ರಕಟಣೆ ಹೊರಡುವ ಸಾಧ್ಯತೆಯಿದೆ.
ಎಸ್ಸೆಂ ಕೃಷ್ಣ ಅವರ ಹೆಸರಲ್ಲದೆ ಗುಜರಾತಿನ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರ ಹೆಸರು ಕೂಡಾ ಕೇಳಿ ಬಂದಿದೆ. ಕರ್ನಾಟಕ ವಿಧಾನಪರಿಷತ್ ಸಭಾಪತಿ ಡಿಎಚ್ ಶಂಕರಮೂರ್ತಿ ಅವರಿಗೆ ಈ ಮುಂಚೆ ತಮಿಳುನಾಡಿನ ರಾಜ್ಯಪಾಲರಾಗುವ ಅವಕಾಶ ಒದಗಿ ಬಂದಿತ್ತು. ಆದರೆ, ತಮಿಳುನಾಡಿನಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.
More From
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ












Click it and Unblock the Notifications