ವಿಶ್ವಾಸಮತ ಯಾಚನೆ ಚರ್ಚೆ: ರಾಹುಲ್ ಗಾಂಧಿಯವರ ಮಣಿಪುರ ಹೇಳಿಕೆಗೆ ಸ್ಮೃತಿ ಇರಾನಿ ತಿರುಗೇಟು
ವಿಶ್ವಾಸಮತ ಯಾಚನೆಯ ಅಧಿವೇಶನದಲ್ಲಿ ರಾಹುಲ್ ಗಾಂಧಿಯವರ ಮಣಿಪುರ ಹೇಳಿಕೆಗೆ ಸ್ಮೃತಿ ಇರಾನಿ ತಿರುಗೇಟು ನೀಡಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿಯವರ ಟೀಕೆಗೆ ಪ್ರತಿಯಾಗಿ, "ಮಣಿಪುರ ವಿಭಜನೆಯಾಗಿಲ್ಲ, ಅದು ಭಾರತದ ಭಾಗವಾಗಿದೆ" ಎಂದು ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ಮೈತ್ರಿಕೂಟ 'ಭಾರತ' ಇಂದು ತಂದಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ವಿರುದ್ಧ ಸಂಪೂರ್ಣ ವಾಗ್ದಾಳಿ ನಡೆಸಿದರು. ಅವರು(ಬಿಜೆಪಿ) ಮಣಿಪುರದಲ್ಲಿ 'ಭಾರತ ಮಾತೆಯನ್ನು ಹತ್ಯೆ' ಮಾಡಿದ್ದಾರೆ, ಪ್ರಧಾನಿ ಮಣಿಪುರಕ್ಕೆ ಭೇಟಿ ನೀಡುವುದಿಲ್ಲ ಏಕೆಂದರೆ ಅಲ್ಲಿ 'ಭಾರತ ಮಾತೆಯನ್ನು ಹತ್ಯೆ ಮಾಡಲಾಗಿದೆ' ಎಂದು ರಾಹುಲ್ ಗಾಂಧಿ ವಾಗ್ದಾಳಿ ಮಾಡಿದರು.

ರಾಹುಲ್ ಗಾಂಧಿ ಅವರ ಈ ಹೇಳಿಕೆಗೆ ಪ್ರತಿಯಾಗಿ ಸ್ಮೃತಿ ಇರಾನಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಮಣಿಪುರ ವಿಭಜನೆಯಾಗಿಲ್ಲ, ಅದು ಭಾರತದ ಭಾಗವಾಗಿದೆ" ಎಂದು ಹೇಳಿದ್ದಾರೆ. ಗುರುವಾರದವರೆಗೆ ಅವಿಶ್ವಾಸದ ಚರ್ಚೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡುವ ನಿರೀಕ್ಷೆಯಿದೆ.
ಮಣಿಪುರ ಬಗ್ಗೆ ಮೋದಿ ಮೌನ
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರ 'ಮೌನ ವ್ರತ' ಮುರಿಯಲು ಅವಿಶ್ವಾಸ ನಿಲುವಳಿ ಮಂಡಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಸರಕಾರದ ವಿರುದ್ಧದ ಅವಿಶ್ವಾಸ ನಿಲುವಳಿ ಮೇಲೆ ಚರ್ಚೆಯಲ್ಲಿ ರಾಹುಲ್ ಗಾಂಧಿ ಪಾಲ್ಗೊಂಡು, ಮಂಗಳವಾರ ಲೋಕಸಭೆಯಲ್ಲಿ ಭಾಷಣ ಮಾಡಬೇಕಿತ್ತು. ಆದರೆ ಪ್ರಧಾನಿ ಮೋದಿ ಅವರು ಪಾಲ್ಗೊಳ್ಳದಿದ್ದ ಕಾರಣಕ್ಕೆ ರಾಹುಲ್ ಗಾಂಧಿ ಕೊನೆ ಕ್ಷಣದಲ್ಲಿ ಹಿಂದೆ ಸರಿದಿದ್ದು, ಬುಧವಾರ ಅವರು ಚರ್ಚೆಯಲ್ಲಿ ಪಾಲ್ಗೊಂಡು ಬಿಜೆಪಿ ವಿರುದ್ಧ ಆಕ್ರೋಶಗೊಂಡರು.
ಮಣಿಪುರ ಹಿಂಸಾಚಾರ
ಮಣಿಪುರದಲ್ಲಿ ಕಳೆದ ಕೆಲ ತಿಂಗಳಿನಿಂದ ಜನಾಂಗೀಯ ಹಿಂಸಾಚರ ನಡೆಯುತ್ತಿದೆ. ಈ ಹಿಂಸಾಚಾರದಲ್ಲಿ ನೂರಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ಹಲವಾರು ಜನ ಗಾಯಗೊಂಡು ಸ್ಥಳವನ್ನೇ ತೊರೆದಿದ್ದಾರೆ. ಈ ವೇಳೆ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಘಟನೆ ಬಗ್ಗೆ ತೀವ್ರ ವಿರೋಧ ವ್ಯಕ್ತವಾಯಿತು. ಆದರೆ ಈ ಘೋರ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಈ ಬಗ್ಗೆ ಮಾತಾಡುವಂತೆ ವಿಪಕ್ಷಗಳು ಪಟ್ಟು ಹಿಡಿದ ಬಳಿಕವೂ ಮೋದಿ ಘಟನೆ ಬಗ್ಗೆ ಮೌನ ತಾಳಿದ್ದಾರೆ. ಇದು ವಿಪಕ್ಷಗಳ ಕೋಪವನ್ನು ಮತ್ತಷ್ಟು ಕೆರಳಿಸಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications