ಬಾರ್ ಮತ್ತು ಮಗಳು: ಕಾಂಗ್ರೆಸ್ಸಿಗರಿಗೆ ಸ್ಮೃತಿ ಇರಾನಿ ಲೀಗಲ್ ನೋಟೀಸ್
ನವದೆಹಲಿ, ಜುಲೈ 24: ತಮ್ಮ ಹಾಗೂ ತಮ್ಮ ಮಗಳ ಮೇಲೆ ಆರೋಪ ಮಾಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾನುವಾರ ಲೀಗಲ್ ನೋಟೀಸ್ ಕಳುಹಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ಪವನ್ ಖೇರಾ ಮಾಡಿರುವ ಆರೋಪಗಳು ಸುಳ್ಳು ಹಾಗು ಆಧಾರ ರಹಿತ ಎಂದು ಹೇಳಿರುವ ಇರಾನಿ, ಈ ಕಾಂಗ್ರೆಸ್ ನಾಯಕರು ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ನಾಯಕರು ನಿನ್ನೆ ಶನಿವಾರ ಸ್ಮೃತಿ ಇರಾನಿಯವರ 18 ವರ್ಷದ ಮಗಳು ಜೋಯಿಶ್ ಇರಾನಿ ಗೋವಾದಲ್ಲಿ ಅಕ್ರಮವಾಗಿ ಬಾರ್ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಸ್ಮೃತಿ ಇರಾನಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದರು.
ಈ ವಿಚಾರದ ಬಗ್ಗೆ ಸ್ಮೃತಿ ಇರಾನಿ ಇಂದು ಭಾನುವಾರ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. "ಅವರು ತಮ್ಮ ಆರೋಪಗಳನ್ನು ವಾಪಸ್ ಪಡೆದು ಬೇಷರತ್ ಕ್ಷಮೆ ಕೋರದೇ ಹೋದರೆ ಇರಾನಿಯವರು ಕಾನೂನು ಪ್ರಕಾರ ಕ್ರಿಮಿನಲ್ ಮೊಕದ್ದಮೆ ಹಾಕುತ್ತಾರೆ" ಎಂದು ಲೀಗಲ್ ನೋಟೀಸ್ನಲ್ಲಿ ಎಚ್ಚರಿಕೆ ನೀಡಲಾಗಿದೆ.

"ನಮ್ಮ ಕ್ಲೈಂಟ್ ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಯಾಗಿದ್ದಾರೆ, ಸಚಿವೆಯಾಗಿದ್ದಾರೆ. ಅವರ ಗೌರವಕ್ಕೆ ಕುಂದು ತರುವ ಉದ್ದೇಶದಿಂದ ಈ ಸುಳ್ಳು ಆರೋಪಗಳನ್ನು ಮಾಡಲಾಗಿದೆ," ಎಂದು ನೋಟೀಸ್ನಲ್ಲಿ ತಿಳಿಸಲಾಗಿದೆ.
ಇದೇ ನೋಟೀಸ್ ಅನ್ನು ಮಹಿಳಾ ಕಾಂಗ್ರೆಸ್ ನಾಯಕಿ ನೇಟ್ಟಾ ಡಿಸೋಜಾ ಹಾಗೂ ಕಾಂಗ್ರೆಸ್ ಪಕ್ಷಕ್ಕೂ ನೀಡಲಾಗಿದೆ.
ಜೋಯಿಶ್ ಯಾವ ಪರವಾನಿಗೆಗೂ ಅರ್ಜಿ ಸಲ್ಲಿಸಿಲ್ಲ
ಕಾಂಗ್ರೆಸ್ ನಾಯಕರು ಆರೋಪಿಸಿರುವಂತೆ ಸ್ಮೃತಿ ಇರಾನಿ ಮಗಳು ಜೋಯಿಶ್ ಇರಾನಿ ಯಾವುದೇ ಬಾರ್ ಆಗಲೀ ಅಥವಾ ಉದ್ಯಮವಾಗಲೀ ನಡೆಸಲು ಯಾವುದೇ ಲೈಸೆನ್ಸ್ಗೆ ಅರ್ಜಿ ಸಲ್ಲಿಸಿಲ್ಲ. ಗೋವಾದ ಅಬಕಾರಿ ಇಲಾಖೆಯಿಂದ ಆಕೆಗೆ ಯಾವುದೇ ಶೋಕಾಸ್ ನೋಟೀಸ್ ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಗಾಂಧಿ ಕುಟುಂಬದ ಚಿತಾವಣೆ
ತಮ್ಮ ಹಾಗು ತಮ್ಮ ಮಗಳ ಮೇಲೆ ಕಾಂಗ್ರೆಸ್ ನಾಯಕರು ಮಾಡಿರುವ ಈ ಆರೋಪದ ಹಿಂದೆ ಗಾಂಧಿ ಕುಟುಂಬದ ಕೈವಾಡ ಇದೆ ಎಂದು ಸ್ಮೃತಿ ಇರಾನಿ ಇದೇ ವೇಳೆ ಶಂಕಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ತಾನು ಗಟ್ಟಿಯಾಗಿ ಧ್ವನಿ ಎತ್ತುತ್ತಿರುವುದರಿಂದ ಗಾಂಧಿ ಕುಟುಂಬದವರು ಈ ಸುಳ್ಳು ಆರೋಪಗಳನ್ನು ಹೇಳಿಸುತ್ತಿದ್ದಾರೆ. ತಾನು ಇದನ್ನು ಇಲ್ಲಿಗೇ ಬಿಡುವುದಿಲ್ಲ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.
ಸ್ಮೃತಿ ಇರಾನಿ ಮಗಳು ಜೋಯಿಶ್ ಇರಾನಿ ಎಂದು ಹೇಳಲಾದ ರೆಸ್ಟೋರೆಂಟ್ ಮುಂದೆ ಭಾನುವಾರ ಗೋವಾದ ಕಾಂಗ್ರೆಸ್ಸಿಗರು ಪ್ರತಿಭಟನೆ ಮಾಡಿದ ಘಟನೆಯೂ ನಡೆದಿದೆ.
(ಒನ್ಇಂಡಿಯಾ ಸುದ್ದಿ)
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications