ಲಸಿಕೆ ನೀತಿ ವಿರುದ್ದದ ರಾಹುಲ್ ಟ್ವೀಟ್ಗೆ ಕಬೀರದಾಸರ ಕಾವ್ಯದ ಮೂಲಕ ಸ್ಮೃತಿ ಇರಾನಿ ತಿರುಗೇಟು
ನವದೆಹಲಿ, ಜೂ. 10: ಕೇಂದ್ರದ ಕೋವಿಡ್ -19 ಲಸಿಕೆ ನೀತಿಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚಿನ ಟೀಕೆಗಳಿಗೆ, ವಿಶೇಷವಾಗಿ ಆನ್ಲೈನ್ ನೋಂದಣಿಗೆ ಸಂಬಂಧಿಸಿದ ಟೀಕೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
''ವ್ಯಾಕ್ಸಿನೇಷನ್ ಕೇಂದ್ರಕ್ಕೆ ಕಾಲಿಡುವ ಪ್ರತಿಯೊಬ್ಬ ವ್ಯಕ್ತಿಗೂ ಲಸಿಕೆ ನೀಡಬೇಕು. ಇಂಟರ್ನೆಟ್ ಬಳಕೆಯ ಸೌಲಭ್ಯ ಇಲ್ಲದ ಜನರಿಗೂ ಜೀವಿಸುವ ಹಕ್ಕಿದೆ'' ಎಂದು ರಾಹುಲ್ ಗಾಂಧಿ ಹೇಳಿದ್ದರು.
ಈ ಬಗ್ಗೆ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ''ಲಸಿಕೆಗಾಗಿ ಆನ್ಲೈನ್ ನೋಂದಣಿ ಸಾಕಾಗುವುದಿಲ್ಲ. ಲಸಿಕೆ ಕೇಂದ್ರಕ್ಕೆ ಕಾಲಿಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ಇಂಟರ್ನೆಟ್ ಸೌಲಭ್ಯ ಇಲ್ಲದವರಿಗೂ ಜೀವಿಸುವ ಹಕ್ಕಿದೆ'' ಎಂದಿದ್ದಾರೆ.

ಈ ಟ್ವೀಟ್ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ, ''ನೀವು ಅಕೇಶಿಯ ಮರಕ್ಕೆ ಬೀಜಗಳನ್ನು ಬಿತ್ತಿದ್ದೀರಿ, ಅದರಿಂದ ಮಾವಿನಹಣ್ಣನ್ನು ನಿರೀಕ್ಷಿಸಬೇಡಿ ಎಂದು ಕಬೀರದಾಸರು ಹೇಳಿದ್ದಾರೆ. ಅರ್ಥಮಾಡಿಕೊಳ್ಳುವವರಿಗೆ ಅರ್ಥವಾಗುತ್ತದೆ'' ಎಂದು ರಾಹುಲ್ ಗಾಂಧಿಗೆ ಟಾಂಗ್ ನೀಡಿದ್ದಾರೆ.
वैक्सीन के लिए सिर्फ़ online रेजिस्ट्रेशन काफ़ी नहीं। वैक्सीन सेंटर पर walk-in करने वाले हर व्यक्ति को टीका मिलना चाहिए।
— Rahul Gandhi (@RahulGandhi) June 10, 2021
जीवन का अधिकार उनका भी है जिनके पास इंटर्नेट नहीं है।
''ವಾಕ್-ಇನ್ ನೋಂದಣಿಗೆ ಕೇಂದ್ರ ಸರ್ಕಾರ ಈಗಾಗಲೇ ರಾಜ್ಯಗಳಿಗೆ ಅನುಮೋದನೆ ನೀಡಿದೆ. ಗೊಂದಲವನ್ನು ಹರಡಬೇಡಿ, ಅದನ್ನು ಸರಿಪಡಿಸಿ'' ಎಂದು ಕೂಡಾ ಮನವಿ ಮಾಡಿದ್ದಾರೆ. ಹಾಗೆಯೇ ವಾಕ್-ಇನ್ ನೋಂದಣಿಗಳ ಸುದ್ದಿ ವರದಿಗಳ ಸ್ಕ್ರೀನ್ಶಾಟ್ಗಳನ್ನೂ ಟ್ವೀಟ್ ಮಾಡಿದ್ದಾರೆ.
"ಇಂಟರ್ನೆಟ್ ಅಥವಾ ಸ್ಮಾರ್ಟ್ ಫೋನ್ಗಳ ಸೌಲಭ್ಯವಿಲ್ಲದ 18-44 ವಯಸ್ಸಿನ ಜನರು ಕೋವಿನ್ ಡಿಜಿಟಲ್ ಪ್ಲಾಟ್ಫಾರ್ಮ್ನಲ್ಲಿ ನೋಂದಾಯಿಸಲು ಇಂಟರ್ನೆಟ್ ಇಲ್ಲದೆಯೇ ವಾಕ್-ಇನ್ ಸಹಾಯ ಪಡೆಯಬಹುದು ಎಂದು ಕೇಂದ್ರವು ಕಳೆದ ತಿಂಗಳು ಅಧಿಸೂಚನೆ ಹೊರಡಿಸಿತ್ತು.
ಈ ಹಿಂದೆ ಸಾಂಕ್ರಾಮಿಕ ಮತ್ತು ವ್ಯಾಕ್ಸಿನೇಷನ್ ನೀತಿಯನ್ನು ಕೇಂದ್ರವು ನಿಭಾಯಿಸುವುದರ ಬಗ್ಗೆ ತೀವ್ರವಾಗಿ ಟೀಕಿಸಿರುವ ರಾಹುಲ್ ಗಾಂಧಿ, ''ಲಸಿಕೆಗಳನ್ನು ಸುಲಭವಾಗಿ ದೊರೆಯುವಂತೆ ಸರ್ಕಾರ ವ್ಯವಸ್ಥೆ ಮಾಡಿದ್ದರೆ ಎರಡನೇ ಕೊರೊನಾ ಅಲೆಯು ಇಷ್ಟು ಮಾರಕವಾಗುತ್ತಿರಲಿಲ್ಲ'' ಎಂದು ಹೇಳಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications