Snake Bite: ತನ್ನನ್ನು ಕಚ್ಚಿದ ಹಾವಿಗೆ ತಿರುಗಿ ಎರಡು ಬಾರಿ ಕಚ್ಚಿದ ವ್ಯಕ್ತಿ: ಬಳಿಕ ಆಗಿದ್ದೇನು?
ಹಾವನ್ನು ಕಂಡರೆ ಭಯ ಪಡುವವರೇ ಹೆಚ್ಚು. ಎಲ್ಲಾದರೂ ಆಕಸ್ಮಿಕವಾಗಿ ಹಾವು ಕಂಡರೆ ಹೆದರಿ ಓಡುತ್ತಾರೆ. ಇನ್ನು ಹಾವು ಕಚ್ಚಿದರಂತೂ ಮುಗಿದೇ ಹೋಯ್ತು, ಕೆಲವರು ಆ ಭಯದಲ್ಲೇ ಪ್ರಾಣ ಬಿಡುತ್ತಾರೆ. ಆದರೆ ಇಲ್ಲೊಬ್ಬ ಮಾತ್ರ ತನಗೆ ಕಚ್ಚಿದ ಹಾವಿಗೆ ಯಮಲೋಕದ ದಾರಿ ತೋರಿಸಿದ್ದಾರೆ.
ತನಗೆ ಹಾವು ಕಚ್ಚುತ್ತಿದ್ದಂತೆ ವಿಷದ ಪರಿಣಾಮ ಕಡಿಮೆಯಾಗುತ್ತದೆ ಎನ್ನುವ ನಂಬಿಕೆಯಲ್ಲಿ ಹಾವನ್ನೇ ತಿರುಗಿ ಎರಡು ಕಚ್ಚಿರುವ ವಿಚಿತ್ರ ಘಟನೆ ಬಿಹಾರದಲ್ಲಿ ವರದಿಯಾಗಿದೆ.

ವ್ಯಕ್ತಿಯಿಂದ ಎರಡು ಬಾರಿ ಕಚ್ಚಿಸಿಕೊಂಡ ಹಾವು ಸಾವನ್ನಪ್ಪಿದ್ದು, ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ದರಿಂದ ಬದುಕುಳಿದಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಅಸಲಿಗೆ ಆಗಿದ್ದೇನು?
ರೈಲ್ವೇ ಉದ್ಯೋಗಿ ಸಂತೋಷ್ ಲೋಹರ್ ಬಿಹಾರದ ರಜೌಲಿಯ ದಟ್ಟ ಅರಣ್ಯ ಪ್ರದೇಶದಲ್ಲಿ ರೈಲು ಹಳಿಗಳನ್ನು ಹಾಕುವ ತಂಡದ ಭಾಗವಾಗಿದ್ದರು. ಮಂಗಳವಾರ ರಾತ್ರಿ, ಪೂರ್ಣ ದಿನದ ಕೆಲಸದ ನಂತರ, ನಿದ್ದೆ ಮಾಡುತ್ತಿರುವಾಗ ಹಾವು ಕಚ್ಚಿತು.
ಲೋಹರ್ ಅವರು ಹಾವನ್ನು ಹಿಡಿದುಕೊಂಡು ಅದನ್ನು ಎರಡು ಬಾರಿ ಕಚ್ಚಿದ್ದಾರೆ. ತನ್ನನ್ನು ಕಚ್ಚಿದ ಹಾವಿಗೆ ಮರಳಿ ಕಚ್ಚಿದರೆ ಜೀವ ಯಉಳಿಯುತ್ತದೆ ಎಂದು ಸ್ಥಳೀಯರು ನಂಬುತ್ತಾರೆ. ದೇಶದ ಕೆಲವು ಭಾಗಗಳಲ್ಲಿ, ಹಾವಿನಿಂದ ಕಚ್ಚಿಸಿಕೊಂಡವರು ಮರಳಿ ಹಾವಿಗೆ ಕಚ್ಚಿದಾಗ ವಿಷವು ಮತ್ತೆ ಹಾವಿಗೆ ವರ್ಗಾವಣೆಯಾಗುತ್ತದೆ ಎಂಬುದು ಸಾಮಾನ್ಯ ನಂಬಿಕೆಯಾಗಿದೆ.
ಅದೃಷ್ಟವಶಾತ್ ಲೋಹರ್ ಅವರ ಜೊತೆ ಸಹೋದ್ಯೋಗಿಗಳು ಇದ್ದ ಕಾರಣ ತಕ್ಷಣ ಅವರನ್ನು ರಾಜೌಲಿ ಉಪವಿಭಾಗದ ಆಸ್ಪತ್ರೆಗೆ ಸಾಗಿಸಿದರು. ಡಾ.ಸತೀಶ್ ಚಂದ್ರ ಸಿನ್ಹಾ ಅವರು ಚಿಕಿತ್ಸೆ ನೀಡಿದ್ದಾರೆ ಎಂದು ವರದಿಯಾಗಿದೆ.
ರಾತ್ರಿಯಿಡೀ ಆಸ್ಪತ್ರೆಯಲ್ಲಿ ಇರಿಸಲಾಯಿತು ಮತ್ತು ಮರುದಿನ ಬಿಡುಗಡೆ ಮಾಡಲಾಗಿದೆ. ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದು ಡಾ.ಸಿನ್ಹಾ ಹೇಳಿದ್ದಾರೆ. ರೈಲ್ವೆ ನೌಕರನ ಮೇಲೆ ಯಾವ ರೀತಿಯ ಹಾವು ದಾಳಿ ಮಾಡಿದೆ ಎಂಬುದು ಸ್ಪಷ್ಟವಾಗಿಲ್ಲ.
ಹಾವು ಕಚ್ಚಿ ಪ್ರತಿ ವರ್ಷ 50 ಸಾವಿರ ಸಾವು
ಭಾರತದಲ್ಲಿ, ಹಾವು ಕಡಿತದಿಂದ ಪ್ರತಿ ವರ್ಷ ಸುಮಾರು 50,000 ಜನರು ಸಾಯುತ್ತಾರೆ. 30-40 ಲಕ್ಷ ಹಾವು ಕಡಿತ ಘಟನೆಗಳು ನಡೆಯುತ್ತವೆ. ಆದರೂ ಎಲ್ಲಾ ಘಟನೆಗಳಲ್ಲಿ ವಿಷದ ಹಾವುಗಳು ಕಚ್ಚದೆ ಇರುವುದರಿಂದ ಸಾವಿನ ಪ್ರಮಾಣ ಕಡಿಮೆ ಇದೆ. ಉತ್ತರ ಭಾರತದ ಹಲವು ಕಡೆಗಳಲ್ಲಿ ಹಾವಿಗೆ ಮರಳಿ ಕಡಿದರೆ ಬದುಕುಳಿಯುತ್ತಾರೆ ಎನ್ನುವ ನಂಬಿಕೆ ಇದೆ.
-
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Dr Rajkumar: ನಟ ಸಾರ್ವಭೌಮ, ಕನ್ನಡಿಗರ ಕಣ್ಮಣಿ ಡಾ. ರಾಜ್ ಕುಮಾರ್ ಬಗ್ಗೆ ಯಾರು ಏನಂದ್ರು, ಇಲ್ಲಿದೆ ವಿವರ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications