ಹರಿಯಾಣದ ಶಾಲೆಯ ಮಧ್ಯಾಹ್ನದ ಊಟದಲ್ಲಿ ಮರಿಹಾವು
ಹರಿಯಾಣದ ಫರೀದಾಬಾದ್ ನ ಶಾಲೆಯೊಂದರ ಮಧಾಹ್ನದ ಊಟದಲ್ಲಿ ಮರಿ ಹಾವೊಂದು ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಶಾಲೆ ಪ್ರಾಂಶುಪಾಲರು ಹಾಗೂ ಶಿಕ್ಷಕರು ಹೆಚ್ಚಿನ ಅನಾಹುತ ಸಂಭವಿಸದಂತೆ ತಡೆಯುವಲ್ಲಿ ಸಫಲರಾಗಿದ್ದಾರೆ
ಫರೀದಾಬಾದ್, ಮೇ 12: ಹರಿಯಾಣದ ಫರೀದಾಬಾದ್ ನಲ್ಲಿರುವ ರಾಜ್ ಕೀಯ ಬಾಲಕಿಯರ ಹಿರಿಯ ಪ್ರೌಢಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಮಕ್ಕಳಿಗೆ ವಿತರಿಸಿದ ಬಿಸಿಯೂಟದಲ್ಲಿ ಮರಿಹಾವು ಕಾಣಿಸಿಕೊಂಡಿದೆ. ಇದು ಗೊತ್ತಾದ ತಕ್ಷಣ ಮಕ್ಕಳು ಊಟ ಮಾಡುವುದನ್ನು ನಿಲ್ಲಿಸಲಾಗಿದೆ. ಆದರೆ ಅಷ್ಟರಲ್ಲಾಗಲೇ ಕೆಲವು ವಿದ್ಯಾರ್ಥಿಗಳು ಊಟ ಮಾಡಿದ್ದರು.
ಆ ವೇಳೆಗಾಗಲೇ ಕೆಲವು ವಿದ್ಯಾರ್ಥಿಗಳಿಗೆ ವಾಂತಿಯಾಗಿತ್ತು. ಪ್ರಾಂಶುಪಾಲರು ಮತ್ತು ಕೆಲ ಶಿಕ್ಷಕರು ಆಹಾರವನ್ನು ಪರಿಶೀಲಿಸುವಾಗ ಅದರಲ್ಲಿ ಮರಿಹಾವು ಕಂಡುಬಂದಿದೆ. ಆ ತಕ್ಷಣವೇ ಉಳಿದ ವಿದ್ಯಾರ್ಥಿಗಳಿಗೆ ಆಹಾರ ಸೇವಿಸದಂತೆ ಸೂಚಿಸಿದ್ದಾರೆ. ಆ ಕೂಡಲೇ ವಿದ್ಯಾರ್ಥಿಗಳಿಗೆ ನೀಡಿದ್ದ ಆಹಾರ ಹಿಂಪಡೆಯಲಾಗಿದೆ.[ಹೊಸ ಸ್ಕೂಟಿ ಜತೆ ಮಂಗಳೂರಲ್ಲಿ ವಿಷಕಾರಿ ಹಾವು ಫ್ರೀ]

ಯಾವಾಗಲೂ ಊಟದಲ್ಲಿ ಹಳಸಲು ವಾಸನೆ ಬರುತ್ತಿತ್ತು. ಆದರೆ ಈ ಬಾರಿಯ ವಿಚಾರ ಗಾಬರಿ ಮೂಡಿಸುವಂತಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಶಾಲೆಯ ಪ್ರಾಂಶುಪಾಲರಾದ ಬ್ರಜ್ ಬಾಲಾ ಈ ಬಗ್ಗೆ ಮೇಲಧಿಕಾರಿಗಳಿಗೆ ಹಾಗೂ ಆಹಾರ ಪೂರೈಸುವ ಇಸ್ಕಾನ್ ನವರಿಗೆ ತಿಳಿಸಿದ್ದಾರೆ. ಇತರ ಶಾಲೆಗಳಿಗೂ ಇದೇ ಆಹಾರವನ್ನು ಪೂರೈಸಲಾಗಿದೆ. ಎಲ್ಲ ಕಡೆಯೂ ಈ ಬಗ್ಗೆ ಮಾಹಿತಿ ರವಾನಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications