ನವದೆಹಲಿ, ಅ. 25: ಈ ಬಾರಿಯ ದೀಪಾವಳಿ ಅಮಾವಾಸ್ಯೆಯಂದೇ ಸೂರ್ಯಗ್ರಹಣ ಸಂಭವಿಸಲಿದೆ. ಅಕ್ಟೋಬರ್ 25 ರಂದು ಭಾಗಶಃ ಸೂರ್ಯಗ್ರಹಣ ಸಂಭವಿಸಲಿದೆ. ಭೂಮಿಯಿಂದ ಸೂರ್ಯ ಮರೆಯಾಗುವಂತೆ ಚಂದ್ರ ಅಡ್ಡ ಬಂದಾಗ ಸೂರ್ಯಗ್ರಹಣ ಸಂಭವಿಸುತ್ತದೆ.
ಭಾರತದಲ್ಲಿ ಗ್ರಹಣವು ಮಧ್ಯಾಹ್ನದ ನಂತರ ಸೂರ್ಯಾಸ್ತದ ಮೊದಲು ಕಾಣಿಸಿಕೊಳ್ಳಲಿದ್ದು, ಈ ವರ್ಷದ ಕೊನೆಯ ಸೂರ್ಯ ಗ್ರಹಣ ಹೆಚ್ಚಿನ ಸ್ಥಳಗಳಲ್ಲಿ ಗೋಚರಿಸುತ್ತದೆ.
ದೀಪಾವಳಿ ಅಮಾವಾಸ್ಯೆಯಂದೇ ಸೂರ್ಯಗ್ರಹಣ ಸಂಭವಿಸಿರುವುದರಿಂದ ಪೂಜೆ-ಪುನಸ್ಕಾರಗಳಿಗೆ ಬಗ್ಗೆ ಚರ್ಚೆಗಳು ನಡೆದಿವೆ. ಹಲವೆಡೆ ಹಬ್ಬಗಳ ಕೆಲವು ವಿಧಿಗಳನ್ನು ಮುಗಿಸಿಕೊಳ್ಳಲಾಗಿದೆ. ದೇವಾಲಯಗಳಲ್ಲಿ ದರ್ಶನಕ್ಕೆ ಅವಕಾಶವಿಲ್ಲ.
ಈ ಬಾರಿಯ ಗ್ರಹಣದ ಗರಿಷ್ಠ ಗೋಚರತೆಯು ರಷ್ಯಾ ಮತ್ತು ಖಜಕಿಸ್ತಾನ್ನಲ್ಲಿ ಹೆಚ್ಚಿದ್ದು, ಶೇ 80 ರಷ್ಟು ಕಾಣಿಸಿಕೊಳ್ಳಲಿದೆ. ದೆಹಲಿ ಮತ್ತು ಮುಂಬೈನಲ್ಲಿ, ಗ್ರಹಣದ ಪರ್ವ(ಉತ್ತುಂಗ) ಸಮಯದಲ್ಲಿ ಚಂದ್ರನು ಸೂರ್ಯನನ್ನು ಆವರಿಸಿಕೊಳ್ಳುವ ಶೇಕಡಾವಾರು ಪ್ರಮಾಣ ಕ್ರಮವಾಗಿ 44% ಮತ್ತು 24% ಇರುತ್ತದೆ. ದೇಶದ ಇತರ ಭಾಗಗಳಲ್ಲಿ, ಶೇಕಡಾವಾರು ವ್ಯಾಪ್ತಿಯು ಮೇಲಿನ ಮೌಲ್ಯಗಳಿಗಿಂತ ಕಡಿಮೆ ಇರುತ್ತದೆ.
*ಸೂರ್ಯಗ್ರಹಣದ ಸೂತಕವು 12 ಗಂಟೆಗಳ ಮೊದಲು ಪ್ರಾರಂಭವಾಗುತ್ತದೆ.
* ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸೂರ್ಯ, ಭೂಮಿ ಮತ್ತು ಚಂದ್ರ ಒಂದೇ ಸಾಲಿನಲ್ಲಿ ಬಂದಾಗ ಗ್ರಹಣ ಸಂಭವಿಸುತ್ತದೆ.
*ದೀಪಾವಳಿ ಅಮಾವಾಸ್ಯೆಯಂದು ಮಧ್ಯಾಹ್ನ 2:15 ಕ್ಕೆ ಸೂರ್ಯಗ್ರಹಣ ಆರಂಭವಾಗಲಿದೆ.
* ಗ್ರಹಣ ಸ್ಪರ್ಶಕಾಲ: ಮಧ್ಯಾಹ್ನ 2:15
* ಗ್ರಹಣ ಮಧ್ಯಕಾಲ: ಮಧ್ಯಾಹ್ನ 4:18
* ಗ್ರಹಣ ಮೋಕ್ಷಕಾಲ: ಸಂಜೆ 6:30
Oct 25, 2022, 6:46 pm IST
ದೇಶಾದ್ಯಂತ ಗೋಚರಿಸಿದ ಸೂರ್ಯಗ್ರಹಣದ ಸಂದರ್ಭದಲ್ಲಿ ದೇವಸ್ಥಾನಗಳ ಬಾಗಿಲು ಹಾಕಲಾಗಿತ್ತು. ಸೂರ್ಯಗ್ರಹಣ ಅಂತ್ಯಗೊಂಡ ನಂತರದಲ್ಲಿ ದೇವಸ್ಥಾನಗಳ ಬಾಗಿಲನ್ನು ತೆರೆದು, ಶುದ್ಧೀಕರಣ ಕಾರ್ಯವನ್ನು ಆರಂಭಿಸಲಾಗಿದೆ. ಜನರು ಸಹ ಸೂರ್ಯಗ್ರಹಣ ಮೋಕ್ಷ ಕಾಲದ ನಂತರದಲ್ಲಿ ಸ್ನಾನ ಮಾಡಿಕೊಂಡು ದೇವಸ್ಥಾನಗಳಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿದರು.
Oct 25, 2022, 6:46 pm IST
ಬೆಂಗಳೂರು, ಹಾಸನ, ಮೈಸೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಗದಗ, ಕೊಪ್ಪಳ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, ಸೇರಿದಂತೆ ಎಲ್ಲ ನಗರಗಳಲ್ಲೂ ಸೂರ್ಯಗ್ರಹಣ ಗೋಚರಿಸಿತು.
Oct 25, 2022, 6:44 pm IST
ದೀಪಾವಳಿ ಅಮಾವಾಸ್ಯೆ ದಿನವೇ ಸಂಭವಿಸಿದ ಸೂರ್ಯಗ್ರಹಣ ಸಂಜೆ 6.30ರ ಹೊತ್ತಿಗೆ ಅಂತ್ಯಗೊಂಡಿದೆ. ಅಕ್ಟೋಬರ್ 25ರ ಮಂಗಳವಾರ ಮಧ್ಯಾಹ್ನವೇ ಪ್ರಾರಂಭಗೊಂಡ ಸೂರ್ಯಗ್ರಹಣವು ಸಂಜೆ ವೇಳೆಗೆ ಮೋಕ್ಷ ಕಾಲವನ್ನು ತಲುಪಿತು.
Oct 25, 2022, 6:02 pm IST
ಬೆಂಗಳೂರಿನಲ್ಲೂ ಸೂರ್ಯಗ್ರಹಣದ ಸಂದರ್ಭದಲ್ಲಿ ಉಪಹಾರ ಸೇವನೆ ಮಾಡಲಾಯಿತು. ಮೂಢನಂಬಿಕೆ ವಿರೋಧಿ ವೇದಿಕೆಯಿಂದ ಹಣ್ಣು-ಹಂಪಲು ಸೇವನೆ ಮಾಡಲಾಯಿತು. ಆ ಮೂಲಕ ಮೂಢನಂಬಿಕೆಗೆ ಪ್ರಗತಿಪರರು ವಿರೋಧ ವ್ಯಕ್ತಪಡಿಸಿದರು.
Oct 25, 2022, 5:58 pm IST
ಕೇತುಗ್ರಸ್ಥ ಸೂರ್ಯ ಗ್ರಹಣದ ಹಿನ್ನೆಲೆ ಕೊಪ್ಪ ತಾಲೂಕಿನ ಜಯಪುರದ ಬದ್ರಿಯಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ಮಸೀದಿಯಲ್ಲಿ ನಮಾಜ್ ಮಾಡುವ ಮೂಲಕ ಪ್ರಾರ್ಥನೆ ಸಲ್ಲಿಸಿದರು.
Oct 25, 2022, 5:55 pm IST
ಕಲಬುರಗಿಯಲ್ಲಿ ಗ್ರಹಣದ ವೇಳೆಯೇ ಉಪಹಾರ:
ಕಲಬುರಗಿಯಲ್ಲಿ ಸೂರ್ಯಗ್ರಹಣದ ಸಂದರ್ಭದಲ್ಲಿಯೇ ಜನರು ಉಪಹಾರ ಸೇವನೆ ಮಾಡಿದರು. ಜ್ಞಾನ ವಿಜ್ಞಾನ ಸಮಿತಿಯಿಂದ ಮೌಢ್ಯ ವಿರೋಧಿ ಅಭಿಯಾನ ನಡೆಸಲಾಗುತ್ತಿದ್ದು, ನಗರದ ಜಗತ್ ವೃತ್ತದಲ್ಲಿ ಜನರು ಉಪಹಾರ ಸೇವನೆಯನ್ನು ಮಾಡಿದರು.
Oct 25, 2022, 5:48 pm IST
ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಇರುವ ಐತಿಹಾಸಿಕ ಸೋಮೇಶ್ವರ ದೇವಸ್ಥಾನ ಬಂದ್ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆಯಿಂದ ಸಂಜೆ 7 ಗಂಟೆಯ ವರೆಗೆ ದೇವಸ್ಥಾನ ಬಂದ್ ಮಾಡಲಾಗುತ್ತಿದ್ದು, ಪುನಃ ಸಂಜೆ ಸೂರ್ಯ ಗ್ರಹಣದ ನಂತರ ದೇವಸ್ಥಾನ ಬಾಗಿಲನ್ನು ಆಡಳಿತ ಮಂಡಳಿ ತೆರೆಯಲಿದ್ದಾರೆ. ಸೂರ್ಯ ಗ್ರಹಣದ ನಂತರ ದೇವಸ್ಥಾನ ಶುದ್ಧೀಕರಣ ಮಾಡಿ ಪುನಃ ಸೋಮೇಶ್ವರನಿಗೆ ಪೂಜೆ ಸಲ್ಲಿಕೆ ಮಾಡಲಿದ್ದಾರೆ. ಪೂಜೆ ನಂತ್ರ ಭಕ್ತರಿಗೆ ಅವಕಾಶ ನೀಡಲಾಗುವುದು.
Oct 25, 2022, 5:44 pm IST
ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಕಾಣಿಸಿಕೊಂಡ ಸೂರ್ಯಗ್ರಹಣದ ಚಿತ್ರಣ.
Oct 25, 2022, 5:34 pm IST
ಬೆಂಗಳೂರಿನಲ್ಲಿ ಸೂರ್ಯಗ್ರಹಣದ ಚಿತ್ರಣ:
ಬೆಂಗಳೂರಿನಲ್ಲಿ ಸೂರ್ಯಗ್ರಹಣದ ಸಂದರ್ಭದಲ್ಲಿ ಆಕಾಶದಲ್ಲಿ ಗೋಚರಿಸಿದ ಸೂರ್ಯನ ಚಿತ್ರಣ ಹೀಗಿತ್ತು.
ಪಂಜಾಬ್ನ ಅಮೃತಸರದ ಆಕಾಶದಲ್ಲಿ ಭಾಗಶಃ ಸೂರ್ಯಗ್ರಹಣ ಕಂಡುಬಂದಿದೆ. ಖಗೋಳ ವಿದ್ಯಮಾನವು ಇಂದು ಈಶಾನ್ಯದ ಕೆಲವು ಭಾಗಗಳನ್ನು ಹೊರತುಪಡಿಸಿ ಭಾರತದ ಬಹುತೇಕ ಭಾಗಗಳಲ್ಲಿ ಗೋಚರಿಸುತ್ತದೆ
#PartialSolarEclipse seen in the sky of Amritsar, Punjab. The astronomical phenomenon today is visible over most of India apart from some parts in the northeast pic.twitter.com/T9ZG068YTG
ಭಾಗಶಃ ಸೂರ್ಯಗ್ರಹಣ ಅಥವಾ ಸೂರ್ಯ ಗ್ರಹಣವು ಅಕ್ಟೋಬರ್ 25 ರಂದು ಸಂಭವಿಸಲಿದೆ. ಇದು ಯುರೋಪ್, ಮಧ್ಯಪ್ರಾಚ್ಯ, ಆಫ್ರಿಕಾ ಮತ್ತು ಏಷ್ಯಾದ ಪಶ್ಚಿಮ ಪ್ರದೇಶಗಳ ಹೆಚ್ಚಿನ ಭಾಗಗಳಿಂದ ಗೋಚರಿಸುತ್ತದೆ. ಭಾರತದಲ್ಲಿ, ಗ್ರಹಣವು ಮಧ್ಯಾಹ್ನ ಪ್ರಾರಂಭವಾಗುತ್ತದೆ.
Oct 25, 2022, 4:18 pm IST
ಶೃಂಗೇರಿಯಲ್ಲಿ ದರ್ಶನಕ್ಕೆ ಅವಕಾಶ
ಸೂರ್ಯ ಗ್ರಹಣದ ವೇಳೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಸಂಜೆ 4 ರಿಂದ ರಾತ್ರಿ 9 ಗಂಟೆವರೆಗೆ ಎಂದಿನಂತೆ ಶಾರದಾಂಭೆ ದರ್ಶನ ಇರಲಿದೆ. ಭಕ್ತರು ದೇವಸ್ಥಾನಕ್ಕೆ ಬಂದು-ಹೋಗುತ್ತಿದ್ದಾರೆ. ಆದರೆ ಈ ವೇಳೆ ಪ್ರಸಾದದ ಸೌಲಭ್ಯ ಇರುವುದಿಲ್ಲ.
Oct 25, 2022, 4:03 pm IST
ಪ್ರಮುಖ ಹಬ್ಬ ದೀಪಾವಳಿ ನಡುವೆ ಮಂಗಳವಾರ ಸೂರ್ಯಗ್ರಹಣವೂ ಇದೆ. ಈ ಹಿನ್ನೆಲೆ ದೀಪಾವಳಿ ಹಬ್ಬದ ಸಾಲು ಸಾಲು ರಜೆ ಅಂತ ದೇವಾಲಯಗಳಿಗೆ ಭೇಟಿ ನೀಡಲು ಹೊರಟಿರುವ ಭಕ್ತರಿಗೆ ಸೂರ್ಯಗ್ರಹಣದಿಂದ ನಿರಾಸೆ ಕಾದಿದೆ. ಹೌದು, ಪ್ರಮುಖ ದೀಪಾವಳಿ ಹಬ್ಬ ಇರುವುದರಿಂದ ದೇವಾಲಯಕ್ಕೆ ಭೇಟಿ ಭಕ್ತರಿಗೆ ಮಂಗಳವಾರ ಸೂರ್ಯಗ್ರಹಣ ಅಡ್ಡಿ ಪಡಿಸಿದೆ.
ಸೂರ್ಯ ಗ್ರಹಣ ಇರುವುದರಿಂದ ಹುಬ್ಬಳ್ಳಿ ನಗರದಲ್ಲಿ ಹಲವು ದೇವಸ್ಥಾನಗಳು ಬಂದ್ ಮಾಡಲಾಗಿದೆ. ಇನ್ನು, ಕೆಲವು ದೇವಾಲಯಗಳಲ್ಲಿ ಸಮಯ ಬದಲಾವಣೆ ಮಾಡಿವೆ. ಖಂಡಗ್ರಾಸ ಕೇತು ಸೂರ್ಯಗ್ರಹಣ ಹಿನ್ನೆಲೆಯಲ್ಲಿ ನಗರದ ವಿವಿಧ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲೂ ವಿರಳವಾಗಿದೆ.
Oct 25, 2022, 3:51 pm IST
'ಆಸ್ಟ್ರೋ ನೈಟ್ ಸ್ಕೈ ಟೂರಿಸಂ'
ರಾಜಸ್ಥಾನ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು 'ಆಸ್ಟ್ರೋ ನೈಟ್ ಸ್ಕೈ ಟೂರಿಸಂ' ಅಡಿಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಇದರಲ್ಲಿ ಆಕಾಶ ನೋಡುವ ಉತ್ಸಾಹಿಗಳು ತಜ್ಞರ ಸಮ್ಮುಖದಲ್ಲಿ ಕನ್ನಡಕವನ್ನು ಬಳಸಿಕೊಂಡು ಮಂಗಳವಾರ ಭಾಗಶಃ ಸೂರ್ಯಗ್ರಹಣವನ್ನು ವೀಕ್ಷಿಸಬಹುದು ಎಂದು ಸೈನ್ಸ್ ಪಾರ್ಕ್ ಮುಖ್ಯಸ್ಥ ಕೈಲಾಶ್ ಮಿಶ್ರಾ ಹೇಳಿದ್ದಾರೆ. ಖಗೋಳ ವಿಜ್ಞಾನದಲ್ಲಿ ಆಸಕ್ತಿ ಇರುವವರಿಗೆ ಉಚಿತವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಮಿಶ್ರಾ ಹೇಳಿದರು. ಸಂಜೆ 4.30 ರಿಂದ 5.30 ರವರೆಗೆ ಗಲ್ಟಾ ಗೇಟ್ ಬೆಟ್ಟದ ಸೂರ್ಯ ಮಂದಿರದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
Oct 25, 2022, 3:50 pm IST
ತೆಲಂಗಾಣದ ಪ್ರಮುಖ ದೇವಾಲಯಗಳಿಗೆ ಪ್ರವೇಶ ನಿರ್ಬಂಧ
ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣದ ಎಲ್ಲಾ ಪ್ರಮುಖ ದೇವಾಲಯಗಳನ್ನು ಇಂದು ಮುಚ್ಚಲಾಗಿದೆ. ಈ ದೇವಾಲಯಗಳಲ್ಲಿ ಎಲ್ಲಾ ಪೂಜಾ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ತಿರುಮಲದಲ್ಲಿರುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ನಡೆಸುತ್ತಿರುವ ವೆಂಕಟೇಶ್ವರ ದೇವಸ್ಥಾನವನ್ನು ಇಂದು ಬೆಳಗ್ಗೆ 8 ಗಂಟೆಗೆ ಮುಚ್ಚಲಾಗಿದ್ದು, ರಾತ್ರಿ 7.30ಕ್ಕೆ ಮತ್ತೆ ತೆರೆಯಲಾಗುವುದು. ಮಂಗಳವಾರದ ಸೂರ್ಯಗ್ರಹಣದಿಂದಾಗಿ ಟಿಟಿಡಿ ಆಡಳಿತದಲ್ಲಿರುವ ಎಲ್ಲಾ ದೇವಾಲಯಗಳನ್ನು ಸಹ ಮುಚ್ಚಲಾಗಿದೆ.
Oct 25, 2022, 2:48 pm IST
ಭಾರತದಲ್ಲಿ ದೀಪಾವಳಿಯಂದು ಸೂರ್ಯಗ್ರಹಣವನ್ನು ನೋಡುವುದು ಸಾಮಾನ್ಯವಾಗಿದೆ. ಈ ಹಿಂದೆ 1762 ರ ಅಕ್ಟೋಬರ್ 17 ರಂದು ಸಂಭವಿಸಿದ ಗ್ರಹಣವು ದೀಪಾವಳಿಯ ದಿನವಾಗಿತ್ತು. 1995 ರಲ್ಲಿ ಸಹ, ಅಕ್ಟೋಬರ್ 24 ರಂದು ಸಂಪೂರ್ಣ ಸೂರ್ಯಗ್ರಹಣವು ಸಂಭವಿಸಿತು, ಇದು ಬೆಳಕಿನ ಹಬ್ಬದಂದು ಸಂಭವಿಸಿತು ಮತ್ತು ದಿನದ ಅನುಕೂಲಕರ ಸಮಯದಲ್ಲಿ ಸಮಗ್ರತೆಯ ಹಾದಿಯು ಭಾರತದ ಮೇಲೆ ಹಾದುಹೋಯಿತು" ಎಂದು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ನ ಮಾಜಿ ಪ್ರೊಫೆಸರ್ ಆರ್ಸಿ ಕಪೂರ್ ಹೇಳಿದ್ದಾರೆ.
Oct 25, 2022, 2:13 pm IST
ಗ್ರಹಣದ ಸಮಯದಲ್ಲಿ ಶ್ರೀ ಕಾಳಹಸ್ತಿಯಲ್ಲಿರುವ ಕಾಳಹಸ್ತೀಶ್ವರ ದೇವಸ್ಥಾನವನ್ನು ಮುಚ್ಚುವುದಿಲ್ಲ. ಈ ದೇವಾಲಯವು ರಾಹು ಮತ್ತು ಕೇತುಗಳಿಗೆ ಪೂಜೆ ಮತ್ತು ಪ್ರಾರ್ಥನೆಗಳನ್ನು ಸಲ್ಲಿಸುವ ಭಾರತದ ಏಕೈಕ ದೇವಾಲಯವಾಗಿದೆ ಎಂದು ಹೇಳಲಾಗುತ್ತದೆ, ಹೀಗಾಗಿ, ಈ ದೇವಾಲಯವು ಗ್ರಹಣದಿಂದ ಪ್ರಭಾವಿತವಾಗುವುದಿಲ್ಲ.
Oct 25, 2022, 1:43 pm IST
ಈ ಶತಮಾನದ ಅತಿ ದೊಡ್ಡ ಸೂರ್ಯಗ್ರಹಣ ಇಂದು ಸಂಭವಿಸಲಿದೆ, ಇದೀಗ 'ಸೂತಕ' ನಡೆಯುತ್ತಿದೆ; ಮಕ್ಕಳು, ವೃದ್ಧರು ಮತ್ತು ರೋಗಿಗಳನ್ನು ಹೊರತುಪಡಿಸಿ ನಾವು ಅನಗತ್ಯವಾಗಿ ಪ್ರಯಾಣಿಸಬಾರದು, ತಿನ್ನಬಾರದು, ಮಲಗಬಾರದು. ನಾವು ನಮ್ಮ ಮನೆಗಳಲ್ಲಿಯೇ ಇರಬೇಕು ಮತ್ತು ಶಾಂತಿಯಿಂದ ಇರಬೇಕು ಎಂದು ಬಿರ್ಲಾ ಮಂದಿರದ ಅರ್ಚಕ ಲಾಲ್ ಚಂದ್ ಶರ್ಮಾ ಹೇಳಿದ್ದಾರೆ
Oct 25, 2022, 12:55 pm IST
ಗೋವರ್ಧನ ಪೂಜೆ ಸಾಮಾನ್ಯವಾಗಿ ದೀಪಾವಳಿ ಆಚರಣೆಯ ಒಂದು ದಿನದ ನಂತರ ನಡೆಯುತ್ತದೆ. ಈ ವರ್ಷ ದೀಪಾವಳಿ ಅಕ್ಟೋಬರ್ 24, ಗೋವರ್ಧನ ಪೂಜೆ ಅಕ್ಟೋಬರ್ 26ಕ್ಕೆ ಬಂದಿದೆ. ದೀಪಾವಳಿಯ ನಂತರದ ದಿನವಾದ ಅಕ್ಟೋಬರ್ 25 ರಂದು ಸಂಭವಿಸುವ ಭಾಗಶಃ ಸೂರ್ಯಗ್ರಹಣ ಇದಕ್ಕೆ ಕಾರಣ. ಗ್ರಹಣ, ಒಂದು ಆಕಾಶ ವಿದ್ಯಮಾನ, ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜನರ ಜೀವನದ ಮೇಲೆ ಭಾರಿ ಪ್ರಭಾವವನ್ನು ಉಂಟುಮಾಡಬಹುದು.
Oct 25, 2022, 12:28 pm IST
ಹಿಮಾಲಯದ ತಪ್ಪಲಿನ ಬದರಿನಾಥ, ಕೇದಾರನಾಥ ದೇಗುಲಗಳು ಕೂಡಾ ಸೂರ್ಯಗ್ರಹಣದ ನಿಮಿತ್ತ ಬಾಗಿಲು ಮುಚ್ಚಲಿವೆ. ಈ ಸಮಯದಲ್ಲಿ ಭಕ್ತರಿಗೆ ದರ್ಶನ ಭಾಗ್ಯ ಇರುವುದಿಲ್ಲ.
Uttarakhand | Due to the partial solar eclipse, the doors of the Badrinath Dham & Kedarnath Dham are closed today. pic.twitter.com/JnyXdL7gi8
ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿ ಬೆಟ್ಟಕ್ಕೆ ದೂರದ ಊರುಗಳಿಂದ ಸಾಕಷ್ಟು ಭಕ್ತರು ಹರಿದುಬರುತ್ತಾರೆ. ಆದರೆ ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಇರುವುದರಿಂದ ಈ ಬಾರಿ ಭಕ್ತರಿಗೆ ದರ್ಶನ ಸಮಯದಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ.
Oct 25, 2022, 11:53 am IST
ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿಯೂ ಗ್ರಹಣದ ಸಂದರ್ಭಲ್ಲಿ ದೇವರ ದರ್ಶನ, ಪೂಜೆಗೆ ಅವಕಾಶವಿಲ್ಲ. ಈ ಬಗ್ಗೆ ಮಾತನಾಡಿದ ದೇವಸ್ಥಾನದ ಅರ್ಚಕ ರಾಮ ಪ್ರಸಾದ್ ಅವರು, 'ಗ್ರಹಣದ ಸಮಯದಲ್ಲಿ ದೇವಸ್ಥಾನದ ಬಾಗಿಲನ್ನು ಮುಚ್ಚಲಾಗುತ್ತದೆ. ಗ್ರಹಣ ಮುಗಿದ ಮೇಲೆ ದೇವಸ್ಥಾನದ ಆವರಣವನ್ನು ಶುಚಿಗೊಳಿಸಲಾಗುತ್ತದೆ. ಪುಣ್ಯಾಹ ಮಾಡಿ ಬಾಗಿಲು ತೆಗೆದು ಅಂಜನೇಯನಿಗೆ ಪೂಜೆ ಸಲ್ಲಿಸಲಾಗುತ್ತದೆ
Oct 25, 2022, 11:36 am IST
ಅಕ್ಟೋಬರ್ 25ರಂದು ಸೂರ್ಯಗ್ರಹಣ ಇದ್ದು, ಭೂಮಿ ಮತ್ತು ಸೂರ್ಯನ ನಡುವೆ ಚಂದ್ರ ಹಾದು ಹೋಗಲಿದ್ದಾನೆ. ಈ ವೇಳೆ ಸೂರ್ಯನ ಬೆಳಕು ಭೂಮಿ ಮೇಲೆ ಬೀಳುವುದನ್ನು ಚಂದ್ರ ತಡೆಯಲಿದ್ದಾನೆ. ಸೂರ್ಯಗ್ರಹಣದ ಹಿನ್ನೆಲೆ ಅಕ್ಟೋಬರ್ 25ರಂದು ಸಿಗಂದೂರಿನ ಶ್ರೀ ಚೌಡೇಶ್ವರಿ ಕ್ಷೇತ್ರದಲ್ಲಿ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. 'ಗ್ರಹಣದ ಪ್ರಯುಕ್ತ ಬೆಳಗ್ಗೆ 9 ಗಂಟೆಯಿಂದ ಸಂಜೆಯವರೆಗೆ ಸಾರ್ವಜನಿಕರಿಗೆ ಯಾವುದೆ ಪೂಜೆ ಮತ್ತು ದರ್ಶನಕ್ಕೆ ಅವಕಾಶ ಇರುವುದಿಲ್ಲ' ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
Oct 25, 2022, 10:51 am IST
ಮಧ್ಯಾಹ್ನದ ಅನ್ನಸಂತರ್ಪಣೆ ಇರುವುದಿಲ್ಲ
ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೂರ್ಯ ಗ್ರಹಣದ ದಿನದಂದು ಸಂಜೆ 4:45ರಿಂದ 6:45ರವರೆಗೆ ಯಾವುದೇ ಪೂಜೆ, ಸೇವೆ, ಪ್ರಸಾದ ವಿತರಣೆ ಇರುವುದಿಲ್ಲ. ಸಂಜೆ 6:45ರ ಬಳಿಕ ನಿತ್ಯ ಪೂಜೆ ಜರುಗಲಿದೆ. ಆದರೆ ಅಂದು ಮಧ್ಯಾಹ್ನ ಅನ್ನ ಪ್ರಸಾದ ಇರುವುದಿಲ್ಲ ಎಂದು ತಿಳಿಸಲಾಗಿದೆ. ಸೂರ್ಯಗ್ರಹಣದ ಹಿನ್ನೆಲೆ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಮಧ್ಯಾಹ್ನದ ಅನ್ನಸಂತರ್ಪಣೆ ಇರುವುದಿಲ್ಲ.
Oct 25, 2022, 10:30 am IST
ಕಟೀಲು ದೇವಸ್ಥಾನ
ಕಟೀಲು ದೇವಸ್ಥಾನದಲ್ಲಿ ದೇವಿ ಲಿಂಗ ಸ್ವರೂಪಿ ಆಗಿರುವುದರಿಂದ ಅಕ್ಟೋಬರ್ 25ರಂದು ಸಂಜೆ 5:08ಕ್ಕೆ ಸೂರ್ಯಗ್ರಹಣ ಆರಂಭ ಗೊಂಡ ಅವಧಿಯಿಂದ ಮಧ್ಯಕಾಲ 5:51ರವರೆಗೆ ನಿರಂತರ ಅಭಿಷೇಕ ನಡೆಯಲಿದೆ. ಬಳಿಕ ಸಂಜೆ 6:29ರ ಮೋಕ್ಷ ಕಾಲದವರೆಗೆ ಪುನಃ ನಿರಂತರ ದೇವರಿಗೆ ಅಭಿಷೇಕ ನಡೆಯಲಿದ್ದು, ಮೋಕ್ಷದ ಬಳಿಕ ದೇವರಿಗೆ ಪೂಜೆ ಜರುಗಲಿದೆ. ಗ್ರಹಣದ ಅವಧಿಯಲ್ಲಿ ಭಕ್ತರು ದೇವರಿಗೆ ತುಪ್ಪವನ್ನು ನೀಡಬಹುದು. ಭಕ್ತಾದಿಗಳು ದೇವರ ದೀಪಕ್ಕೆ ಶುದ್ಧ ಅರಳೆಣ್ಣೆ, ತುಪ್ಪ, ಬತ್ತಿ ಸಮರ್ಪಿಸುವುದರಿಂದ ಗ್ರಹಣ ದೋಷ ತೊಲಗಿ ಅನುಗ್ರಹ ಪ್ರಾಪ್ತಿ ಆಗುತ್ತದೆ. ರಾತ್ರಿ ಅನ್ನ ಪ್ರಸಾದ ಇರುವುದಿಲ್ಲ. ಬದಲಿಗೆ ಫಲಾಹಾರ ಇರುತ್ತದೆ ಎಂದು ಅರ್ಚಕ ಶ್ರೀಹರಿನಾರಾಯಣ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಮಂಗಳವಾರದಂದು ಮಧ್ಯಾಹ್ನದವರೆಗೆ ಎಂದಿನಂತೆ ಭಕ್ತರಿಗೆ ದೇವರ ದರ್ಶನ ಮಾಡಲು ಅವಕಾಶವಿದ್ದು, ಬಳಿಕ ಮಧ್ಯಾಹ್ನ 2:30ರಿಂದ ರಾತ್ರಿ 7:30ರವರೆಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಅನ್ನಸಂತರ್ಪಣೆ ಛತ್ರದಲ್ಲಿ ಮಧ್ಯಾಹ್ನ 2:30ರವರೆಗೆ ಭೋಜನ ಪ್ರಸಾದದ ವ್ಯವಸ್ಥೆ ಇರಲಿದೆ. ಬಳಿಕ ರಾತ್ರಿ 7:30ರ ನಂತರ ಭೋಜನ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತ ಮಂಡಳಿ ಪ್ರಕಟಣೆಯನ್ನು ಹೊರಡಿಸಿದೆ.
ಬೆಂಗಳೂರಿನಲ್ಲಿ ಶೇ.10.09ರಷ್ಟು ಸೂರ್ಯ ಗ್ರಹಣ ಗೋಚರವಾಗಲಿದೆ.
10:31 PM, 24 Oct
ಬೆಂಗಳೂರು ಸಂಜೆ 5:12 ಗಂಟೆಗೆ ಗ್ರಹಣ ಪ್ರಾರಂಭವಾಗಲಿದೆ.
10:46 PM, 24 Oct
ಮುಂದಿನ ಸೂರ್ಯಗ್ರಹಣ
ಮುಂದಿನ ಸೂರ್ಯಗ್ರಹಣವು 2027ರ ಆಗಸ್ಟ್ 2ರಂದು ಭಾರತದಲ್ಲಿ ಗೋಚರಿಸಲಿದೆ. ಇದು ಪರಿಪೂರ್ಣ ಸೂರ್ಯಗ್ರಹಣವಾಗಿರಲಿದೆ.
10:58 PM, 24 Oct
ಅಮಾವಾಸ್ಯೆಯ ದಿನದಂದು ಚಂದ್ರನು ಪೃಥ್ವಿ ಮತ್ತು ಸೂರ್ಯನ ನಡುವೆ ಬಂದಾಗ ಮತ್ತು ಈ ಎಲ್ಲಾ 3 ಗ್ರಹಗಳು ಜೋಡಣೆಯಾದಾಗ(ಸಾಲುಗೂಡಿದಾಗ) ಸೂರ್ಯಗ್ರಹಣ ಸಂಭವಿಸುತ್ತದೆ. ಚಂದ್ರ ಮುದ್ರಿಕೆಯು(ಡಿಸ್ಕ್) ಸೌರ ಮುದ್ರಿಕೆಯನ್ನು ಭಾಗಶಃ ಆವರಿಸಿದಾಗ ಭಾಗಶಃ ಸೂರ್ಯಗ್ರಹಣ ಸಂಭವಿಸುತ್ತದೆ
6:06 AM, 25 Oct
ದೆಹಲಿ ಮತ್ತು ಮುಂಬೈನಲ್ಲಿ, ಗ್ರಹಣದ ಪರ್ವ(ಉತ್ತುಂಗ) ಸಮಯದಲ್ಲಿ ಚಂದ್ರನು ಸೂರ್ಯನನ್ನು ಆವರಿಸಿಕೊಳ್ಳುವ ಶೇಕಡಾವಾರು ಪ್ರಮಾಣ ಕ್ರಮವಾಗಿ 44% ಮತ್ತು 24% ಇರುತ್ತದೆ. ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಸೂರ್ಯಾಸ್ತದಿಂದ ಸೂರ್ಯಾಸ್ತಮಾನದವರೆಗೆ ಗ್ರಹಣದ ಅವಧಿ ಕ್ರಮವಾಗಿ 31 ನಿಮಿಷ ಮತ್ತು 12 ನಿಮಿಷ ಇರುತ್ತದೆ. ಇತರೆಡೆ ಗ್ರಹಣ ಗೋಚರಿಸುವ ಪ್ರಮಾಣ ಶೇ 20ಕ್ಕಿಂತ ಕಡಿಮೆ ಇರಲಿದೆ.
6:42 AM, 25 Oct
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ (ಐಜ್ವಾಲ್, ದಿಬ್ರುಗಢ್, ಇಂಫಾಲ್, ಇಟಾನಗರ, ಕೊಹಿಮಾ, ಸಿಬ್ಸಾಗರ್, ಸಿಲ್ಚಾರ್, ತಮೆಲಾಂಗ್ ಇತ್ಯಾದಿ) ಇದನ್ನು ನೋಡಲು ಸಾಧ್ಯವಿಲ್ಲ.
7:06 AM, 25 Oct
ಸೂರ್ಯಗ್ರಹಣವನ್ನು ಕ್ಷಣ ಮಾತ್ರಕ್ಕೂ ಬರಿಗಣ್ಣಿನಿಂದ ನೋಡಬಾರದು. ಚಂದ್ರನು ಸೂರ್ಯನ ಹೆಚ್ಚಿನ ಭಾಗವನ್ನು ಆವರಿಸಿದಾಗಲೂ ಇದು ಕಣ್ಣುಗಳಿಗೆ ಶಾಶ್ವತ ಹಾನಿ ಉಟುಮಾಡುತ್ತದೆ, ಕುರುಡುತನಕ್ಕೆ ಕಾರಣವಾಗುತ್ತದೆ. ಸೂರ್ಯಗ್ರಹಣಗಳನ್ನು ವೀಕ್ಷಿಸಲು ಕೆಲ ಪರೋಕ್ಷ ತಂತ್ರಜ್ಞಾನಗಳ ವಿಧಾನಗಳುಂಟು.
7:22 AM, 25 Oct
ಸೂರ್ಯಗ್ರಹಣ ನೋಡುವುದು ಹೇಗೆ?
ಅಲ್ಯೂಮಿನೈಸ್ಡ್ ಮೈಲಾರ್, ಕಪ್ಪು ಪಾಲಿಮರ್, ಶೇಡ್ ಸಂಖ್ಯೆ 14ರ ವೆಲ್ಡಿಂಗ್ ಗ್ಲಾಸ್ನಂತಹ ಸಮರ್ಪಕ ಫಿಲ್ಟರ್ ಬಳಸಬೇಕು ಅಥವಾ ದೂರದರ್ಶಕದ ಮೂಲಕ ಬಿಳಿ ಹಲಗೆಯಲ್ಲಿ ಸೂರ್ಯನ ಚಿತ್ರ ಪ್ರಕ್ಷೇಪಿಸುವ ಮೂಲಕ ಸೂರ್ಯಗ್ರಹಣ ವೀಕ್ಷಿಸುವುದು ಸುರಕ್ಷಿತ ವಿಧಾನವಾಗಿದೆ. ನಿಮ್ಮ ನಗರಗಳಲ್ಲಿರುವ ತಾರಾಲಯಗಳಲ್ಲಿ ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿರುತ್ತದೆ. ಆನ್ಲೈನ್ನಲ್ಲಿ ನಾಸಾ, ಸ್ಪೇಸ್ ಡಾಟ್ ಕಾಂ ಮುಂತಾದ ವೆಬ್ ತಾಣಗಳಲ್ಲಿ ನೇರ ಪ್ರಸಾರ ಇರಲಿದೆ.
7:57 AM, 25 Oct
ಅಕ್ಟೋಬರ್ 25 ರ ಗ್ರಹಣದ ಸಮಯದಲ್ಲಿ, ಕೇಂದ್ರ ಗ್ರಹಣದ ಬಿಂದುವು ಉತ್ತರ ಧ್ರುವದಲ್ಲಿರುತ್ತದೆ. ಇಲ್ಲಿಂದ ಚಲಿಸುವಾಗ, ಬಿಂದುವಿನಿಂದ ದೂರದಲ್ಲಿರುವ ಪ್ರದೇಶಗಳು ಸೂರ್ಯನ ಡಿಸ್ಕ್ ಗ್ರಹಣವನ್ನು ಕಡಿಮೆ ಮತ್ತು ಕಡಿಮೆ ನೋಡುತ್ತವೆ. ರಷ್ಯಾದಲ್ಲಿ, 80% ಸೂರ್ಯನ ಗ್ರಹಣ ಸಂಭವಿಸುತ್ತದೆ, ಈ ನೆರಳಿನ ಪ್ರದೇಶವು ಚೀನಾದಲ್ಲಿ 70%, ನಾರ್ವೆಯಲ್ಲಿ 63% ಮತ್ತು ಫಿನ್ಲ್ಯಾಂಡ್ನಲ್ಲಿ 62% ಕ್ಕೆ ಇಳಿಯುತ್ತದೆ.
8:49 AM, 25 Oct
ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಭಕ್ತರು ಈ ಎರಡು ದಿನಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಅವಧಿ ಕಾಯಬೇಕಾಗುತ್ತದೆ. ಅಕ್ಟೋಬರ್ 25ರಂದು ಸೂರ್ಯಗ್ರಹಣ ಹಾಗೂ ನವೆಂಬರ್ 8ರಂದು ಚಂದ್ರಗ್ರಹಣ ಸಂಭವಿಸಲಿದೆ. ಗ್ರಹಣ ಮೋಕ್ಷಕಾಲ ಹಾಗೂ ಶುದ್ಧೀಕರಣ ಕಾರ್ಯ ಮುಕ್ತಾಯವಾಗುವ ತನಕ ಏಳುಬೆಟ್ಟದ ಒಡೆಯನನ್ನು ಭಕ್ತರು ಕಣ್ತುಂಬಿಕೊಳ್ಳಲು ಸಾಧ್ಯವಿಲ್ಲ ಎಂದು ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿ(ಟಿಟಿಡಿ) ಪ್ರಕಟಣೆಯಲ್ಲಿ ತಿಳಿಸಿದೆ.
9:37 AM, 25 Oct
ದೀಪಾವಳಿ ದಿನದಂದೇ ಸೂರ್ಯಗ್ರಹಣ ಬರಲಿದ್ದು, ಈ ಹಿನ್ನೆಲೆ ಕರಾವಳಿಯ ಹಲವು ಪ್ರಮುಖ ದೇವಸ್ಥಾನಗಳಲ್ಲಿ ದೇವರ ದರ್ಶನ ಸಮಯ ಬದಲಾವಣೆ ಮಾಡಲಾಗಿದೆ. ಆಕ್ಟೋಬರ್ 25ರ ಮಂಗಳವಾರದಂದು ಸೂರ್ಯಗ್ರಹಣ ಆವರಿಸಲಿದೆ. ಗ್ರಹಣ ಆರಂಭ ಕಾಲದಿಂದ ಗ್ರಹಣ ಮೋಕ್ಷದವರೆಗೂ ದೇವಸ್ಥಾನಗಳಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸ ಆಗಲಿದೆ.
9:43 AM, 25 Oct
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ಹೊರತುಪಡಿಸಿ, ಭಾರತದ ಹಲವೆಡೆ ಇಂದು ಸೂರ್ಯಗ್ರಹಣ ವೀಕ್ಷಿಸಬಹುದು.
On Oct. 25, the Moon will pass in front of the Sun, partially blocking the star for some viewers in Africa, Asia, & Europe! 🌍🌑☀️
ದೀಪಾವಳಿ ಅಮಾವಾಸ್ಯೆಯಂದು ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಅದ್ಧೂರಿಯಾಗಿ ಜಾತ್ರೆ ನಡೆಯುವುದು ಎಲ್ಲರಿಗೂ ತಿಳಿದ ವಿಚಾರವೇ.. ಆದರೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗಡಿಭಾಗದ ತಾಳವಾಡಿ ಸಮೀಪದ ಇತಿಹಾಸ ಪ್ರಸಿದ್ಧ ಶ್ರೀ ಕೊಂಗಳ್ಳಿ ಬೆಟ್ಟದ ಮಲ್ಲಿಕಾರ್ಜುನ ದೇಗುಲದಲ್ಲಿಯೂ ವಿಶೇಷ ಪೂಜೆ ನಡೆಯುತ್ತದೆ.
ದೀಪಾವಳಿ ಹಿನ್ನಲೆಯಲ್ಲಿ ಜಿಲ್ಲೆ ಮಾತ್ರವಲ್ಲದೆ, ಹೊರ ಊರುಗಳಿಂದ ಆಗಮಿಸಿದ ಭಕ್ತರು ಕೊಂಗಳ್ಳಿ ಮಲ್ಲಿಕಾರ್ಜುನನ್ನು ಪೂಜಿಸಿ ಹರಕೆ ಸಲ್ಲಿಸಿ, ಹುಲಿವಾಹನ ಸೇವೆ ಮಾಡಿ, ಸಾಮೂಹಿಕ ಬೋಜನ ಮಾಡಿ ಹಿಂತಿರುಗುವುದು ಇಲ್ಲಿನ ವಿಶೇಷವಾಗಿದೆ. ಮೊದಲೆಲ್ಲ ಈ ಬೆಟ್ಟಕ್ಕೆ ದೀಪಾವಳಿ ಹಬ್ಬ ಹಾಗೂ ಕಾರ್ತಿಕ ಮಾಸಗಳಲ್ಲಿ ಅತಿ ಹೆಚ್ಚಿನ ಭಕ್ತರು ಆಗಮಿಸಿ ವಿಶೇಷ ಪೂಜೆಗಳನ್ನು ಮಾಡಿ ಅಲ್ಲಿಯೇ ಒಂದು ರಾತ್ರಿ ಕಳೆದು ತಮ್ಮ ಹರಕೆಯನ್ನು ತೀರಿಸಿಕೊಂಡು ಹೋಗುತ್ತಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಮಂಗಳವಾರದಂದು ಮಧ್ಯಾಹ್ನದವರೆಗೆ ಎಂದಿನಂತೆ ಭಕ್ತರಿಗೆ ದೇವರ ದರ್ಶನ ಮಾಡಲು ಅವಕಾಶವಿದ್ದು, ಬಳಿಕ ಮಧ್ಯಾಹ್ನ 2:30ರಿಂದ ರಾತ್ರಿ 7:30ರವರೆಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಅನ್ನಸಂತರ್ಪಣೆ ಛತ್ರದಲ್ಲಿ ಮಧ್ಯಾಹ್ನ 2:30ರವರೆಗೆ ಭೋಜನ ಪ್ರಸಾದದ ವ್ಯವಸ್ಥೆ ಇರಲಿದೆ. ಬಳಿಕ ರಾತ್ರಿ 7:30ರ ನಂತರ ಭೋಜನ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತ ಮಂಡಳಿ ಪ್ರಕಟಣೆಯನ್ನು ಹೊರಡಿಸಿದೆ.
ಕಟೀಲು ದೇವಸ್ಥಾನದಲ್ಲಿ ದೇವಿ ಲಿಂಗ ಸ್ವರೂಪಿ ಆಗಿರುವುದರಿಂದ ಅಕ್ಟೋಬರ್ 25ರಂದು ಸಂಜೆ 5:08ಕ್ಕೆ ಸೂರ್ಯಗ್ರಹಣ ಆರಂಭ ಗೊಂಡ ಅವಧಿಯಿಂದ ಮಧ್ಯಕಾಲ 5:51ರವರೆಗೆ ನಿರಂತರ ಅಭಿಷೇಕ ನಡೆಯಲಿದೆ. ಬಳಿಕ ಸಂಜೆ 6:29ರ ಮೋಕ್ಷ ಕಾಲದವರೆಗೆ ಪುನಃ ನಿರಂತರ ದೇವರಿಗೆ ಅಭಿಷೇಕ ನಡೆಯಲಿದ್ದು, ಮೋಕ್ಷದ ಬಳಿಕ ದೇವರಿಗೆ ಪೂಜೆ ಜರುಗಲಿದೆ. ಗ್ರಹಣದ ಅವಧಿಯಲ್ಲಿ ಭಕ್ತರು ದೇವರಿಗೆ ತುಪ್ಪವನ್ನು ನೀಡಬಹುದು. ಭಕ್ತಾದಿಗಳು ದೇವರ ದೀಪಕ್ಕೆ ಶುದ್ಧ ಅರಳೆಣ್ಣೆ, ತುಪ್ಪ, ಬತ್ತಿ ಸಮರ್ಪಿಸುವುದರಿಂದ ಗ್ರಹಣ ದೋಷ ತೊಲಗಿ ಅನುಗ್ರಹ ಪ್ರಾಪ್ತಿ ಆಗುತ್ತದೆ. ರಾತ್ರಿ ಅನ್ನ ಪ್ರಸಾದ ಇರುವುದಿಲ್ಲ. ಬದಲಿಗೆ ಫಲಾಹಾರ ಇರುತ್ತದೆ ಎಂದು ಅರ್ಚಕ ಶ್ರೀಹರಿನಾರಾಯಣ ತಿಳಿಸಿದ್ದಾರೆ.
10:51 AM, 25 Oct
ಮಧ್ಯಾಹ್ನದ ಅನ್ನಸಂತರ್ಪಣೆ ಇರುವುದಿಲ್ಲ
ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೂರ್ಯ ಗ್ರಹಣದ ದಿನದಂದು ಸಂಜೆ 4:45ರಿಂದ 6:45ರವರೆಗೆ ಯಾವುದೇ ಪೂಜೆ, ಸೇವೆ, ಪ್ರಸಾದ ವಿತರಣೆ ಇರುವುದಿಲ್ಲ. ಸಂಜೆ 6:45ರ ಬಳಿಕ ನಿತ್ಯ ಪೂಜೆ ಜರುಗಲಿದೆ. ಆದರೆ ಅಂದು ಮಧ್ಯಾಹ್ನ ಅನ್ನ ಪ್ರಸಾದ ಇರುವುದಿಲ್ಲ ಎಂದು ತಿಳಿಸಲಾಗಿದೆ. ಸೂರ್ಯಗ್ರಹಣದ ಹಿನ್ನೆಲೆ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಮಧ್ಯಾಹ್ನದ ಅನ್ನಸಂತರ್ಪಣೆ ಇರುವುದಿಲ್ಲ.
11:36 AM, 25 Oct
ಅಕ್ಟೋಬರ್ 25ರಂದು ಸೂರ್ಯಗ್ರಹಣ ಇದ್ದು, ಭೂಮಿ ಮತ್ತು ಸೂರ್ಯನ ನಡುವೆ ಚಂದ್ರ ಹಾದು ಹೋಗಲಿದ್ದಾನೆ. ಈ ವೇಳೆ ಸೂರ್ಯನ ಬೆಳಕು ಭೂಮಿ ಮೇಲೆ ಬೀಳುವುದನ್ನು ಚಂದ್ರ ತಡೆಯಲಿದ್ದಾನೆ. ಸೂರ್ಯಗ್ರಹಣದ ಹಿನ್ನೆಲೆ ಅಕ್ಟೋಬರ್ 25ರಂದು ಸಿಗಂದೂರಿನ ಶ್ರೀ ಚೌಡೇಶ್ವರಿ ಕ್ಷೇತ್ರದಲ್ಲಿ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. 'ಗ್ರಹಣದ ಪ್ರಯುಕ್ತ ಬೆಳಗ್ಗೆ 9 ಗಂಟೆಯಿಂದ ಸಂಜೆಯವರೆಗೆ ಸಾರ್ವಜನಿಕರಿಗೆ ಯಾವುದೆ ಪೂಜೆ ಮತ್ತು ದರ್ಶನಕ್ಕೆ ಅವಕಾಶ ಇರುವುದಿಲ್ಲ' ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
11:53 AM, 25 Oct
ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿಯೂ ಗ್ರಹಣದ ಸಂದರ್ಭಲ್ಲಿ ದೇವರ ದರ್ಶನ, ಪೂಜೆಗೆ ಅವಕಾಶವಿಲ್ಲ. ಈ ಬಗ್ಗೆ ಮಾತನಾಡಿದ ದೇವಸ್ಥಾನದ ಅರ್ಚಕ ರಾಮ ಪ್ರಸಾದ್ ಅವರು, 'ಗ್ರಹಣದ ಸಮಯದಲ್ಲಿ ದೇವಸ್ಥಾನದ ಬಾಗಿಲನ್ನು ಮುಚ್ಚಲಾಗುತ್ತದೆ. ಗ್ರಹಣ ಮುಗಿದ ಮೇಲೆ ದೇವಸ್ಥಾನದ ಆವರಣವನ್ನು ಶುಚಿಗೊಳಿಸಲಾಗುತ್ತದೆ. ಪುಣ್ಯಾಹ ಮಾಡಿ ಬಾಗಿಲು ತೆಗೆದು ಅಂಜನೇಯನಿಗೆ ಪೂಜೆ ಸಲ್ಲಿಸಲಾಗುತ್ತದೆ
11:59 AM, 25 Oct
ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿ ಬೆಟ್ಟಕ್ಕೆ ದೂರದ ಊರುಗಳಿಂದ ಸಾಕಷ್ಟು ಭಕ್ತರು ಹರಿದುಬರುತ್ತಾರೆ. ಆದರೆ ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಇರುವುದರಿಂದ ಈ ಬಾರಿ ಭಕ್ತರಿಗೆ ದರ್ಶನ ಸಮಯದಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ.
12:28 PM, 25 Oct
ಹಿಮಾಲಯದ ತಪ್ಪಲಿನ ಬದರಿನಾಥ, ಕೇದಾರನಾಥ ದೇಗುಲಗಳು ಕೂಡಾ ಸೂರ್ಯಗ್ರಹಣದ ನಿಮಿತ್ತ ಬಾಗಿಲು ಮುಚ್ಚಲಿವೆ. ಈ ಸಮಯದಲ್ಲಿ ಭಕ್ತರಿಗೆ ದರ್ಶನ ಭಾಗ್ಯ ಇರುವುದಿಲ್ಲ.
Uttarakhand | Due to the partial solar eclipse, the doors of the Badrinath Dham & Kedarnath Dham are closed today. pic.twitter.com/JnyXdL7gi8
ಗೋವರ್ಧನ ಪೂಜೆ ಸಾಮಾನ್ಯವಾಗಿ ದೀಪಾವಳಿ ಆಚರಣೆಯ ಒಂದು ದಿನದ ನಂತರ ನಡೆಯುತ್ತದೆ. ಈ ವರ್ಷ ದೀಪಾವಳಿ ಅಕ್ಟೋಬರ್ 24, ಗೋವರ್ಧನ ಪೂಜೆ ಅಕ್ಟೋಬರ್ 26ಕ್ಕೆ ಬಂದಿದೆ. ದೀಪಾವಳಿಯ ನಂತರದ ದಿನವಾದ ಅಕ್ಟೋಬರ್ 25 ರಂದು ಸಂಭವಿಸುವ ಭಾಗಶಃ ಸೂರ್ಯಗ್ರಹಣ ಇದಕ್ಕೆ ಕಾರಣ. ಗ್ರಹಣ, ಒಂದು ಆಕಾಶ ವಿದ್ಯಮಾನ, ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜನರ ಜೀವನದ ಮೇಲೆ ಭಾರಿ ಪ್ರಭಾವವನ್ನು ಉಂಟುಮಾಡಬಹುದು.
1:43 PM, 25 Oct
ಈ ಶತಮಾನದ ಅತಿ ದೊಡ್ಡ ಸೂರ್ಯಗ್ರಹಣ ಇಂದು ಸಂಭವಿಸಲಿದೆ, ಇದೀಗ 'ಸೂತಕ' ನಡೆಯುತ್ತಿದೆ; ಮಕ್ಕಳು, ವೃದ್ಧರು ಮತ್ತು ರೋಗಿಗಳನ್ನು ಹೊರತುಪಡಿಸಿ ನಾವು ಅನಗತ್ಯವಾಗಿ ಪ್ರಯಾಣಿಸಬಾರದು, ತಿನ್ನಬಾರದು, ಮಲಗಬಾರದು. ನಾವು ನಮ್ಮ ಮನೆಗಳಲ್ಲಿಯೇ ಇರಬೇಕು ಮತ್ತು ಶಾಂತಿಯಿಂದ ಇರಬೇಕು ಎಂದು ಬಿರ್ಲಾ ಮಂದಿರದ ಅರ್ಚಕ ಲಾಲ್ ಚಂದ್ ಶರ್ಮಾ ಹೇಳಿದ್ದಾರೆ
2:13 PM, 25 Oct
ಗ್ರಹಣದ ಸಮಯದಲ್ಲಿ ಶ್ರೀ ಕಾಳಹಸ್ತಿಯಲ್ಲಿರುವ ಕಾಳಹಸ್ತೀಶ್ವರ ದೇವಸ್ಥಾನವನ್ನು ಮುಚ್ಚುವುದಿಲ್ಲ. ಈ ದೇವಾಲಯವು ರಾಹು ಮತ್ತು ಕೇತುಗಳಿಗೆ ಪೂಜೆ ಮತ್ತು ಪ್ರಾರ್ಥನೆಗಳನ್ನು ಸಲ್ಲಿಸುವ ಭಾರತದ ಏಕೈಕ ದೇವಾಲಯವಾಗಿದೆ ಎಂದು ಹೇಳಲಾಗುತ್ತದೆ, ಹೀಗಾಗಿ, ಈ ದೇವಾಲಯವು ಗ್ರಹಣದಿಂದ ಪ್ರಭಾವಿತವಾಗುವುದಿಲ್ಲ.
2:48 PM, 25 Oct
ಭಾರತದಲ್ಲಿ ದೀಪಾವಳಿಯಂದು ಸೂರ್ಯಗ್ರಹಣವನ್ನು ನೋಡುವುದು ಸಾಮಾನ್ಯವಾಗಿದೆ. ಈ ಹಿಂದೆ 1762 ರ ಅಕ್ಟೋಬರ್ 17 ರಂದು ಸಂಭವಿಸಿದ ಗ್ರಹಣವು ದೀಪಾವಳಿಯ ದಿನವಾಗಿತ್ತು. 1995 ರಲ್ಲಿ ಸಹ, ಅಕ್ಟೋಬರ್ 24 ರಂದು ಸಂಪೂರ್ಣ ಸೂರ್ಯಗ್ರಹಣವು ಸಂಭವಿಸಿತು, ಇದು ಬೆಳಕಿನ ಹಬ್ಬದಂದು ಸಂಭವಿಸಿತು ಮತ್ತು ದಿನದ ಅನುಕೂಲಕರ ಸಮಯದಲ್ಲಿ ಸಮಗ್ರತೆಯ ಹಾದಿಯು ಭಾರತದ ಮೇಲೆ ಹಾದುಹೋಯಿತು" ಎಂದು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ನ ಮಾಜಿ ಪ್ರೊಫೆಸರ್ ಆರ್ಸಿ ಕಪೂರ್ ಹೇಳಿದ್ದಾರೆ.
3:50 PM, 25 Oct
ತೆಲಂಗಾಣದ ಪ್ರಮುಖ ದೇವಾಲಯಗಳಿಗೆ ಪ್ರವೇಶ ನಿರ್ಬಂಧ
ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣದ ಎಲ್ಲಾ ಪ್ರಮುಖ ದೇವಾಲಯಗಳನ್ನು ಇಂದು ಮುಚ್ಚಲಾಗಿದೆ. ಈ ದೇವಾಲಯಗಳಲ್ಲಿ ಎಲ್ಲಾ ಪೂಜಾ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ತಿರುಮಲದಲ್ಲಿರುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ನಡೆಸುತ್ತಿರುವ ವೆಂಕಟೇಶ್ವರ ದೇವಸ್ಥಾನವನ್ನು ಇಂದು ಬೆಳಗ್ಗೆ 8 ಗಂಟೆಗೆ ಮುಚ್ಚಲಾಗಿದ್ದು, ರಾತ್ರಿ 7.30ಕ್ಕೆ ಮತ್ತೆ ತೆರೆಯಲಾಗುವುದು. ಮಂಗಳವಾರದ ಸೂರ್ಯಗ್ರಹಣದಿಂದಾಗಿ ಟಿಟಿಡಿ ಆಡಳಿತದಲ್ಲಿರುವ ಎಲ್ಲಾ ದೇವಾಲಯಗಳನ್ನು ಸಹ ಮುಚ್ಚಲಾಗಿದೆ.
3:51 PM, 25 Oct
'ಆಸ್ಟ್ರೋ ನೈಟ್ ಸ್ಕೈ ಟೂರಿಸಂ'
ರಾಜಸ್ಥಾನ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು 'ಆಸ್ಟ್ರೋ ನೈಟ್ ಸ್ಕೈ ಟೂರಿಸಂ' ಅಡಿಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಇದರಲ್ಲಿ ಆಕಾಶ ನೋಡುವ ಉತ್ಸಾಹಿಗಳು ತಜ್ಞರ ಸಮ್ಮುಖದಲ್ಲಿ ಕನ್ನಡಕವನ್ನು ಬಳಸಿಕೊಂಡು ಮಂಗಳವಾರ ಭಾಗಶಃ ಸೂರ್ಯಗ್ರಹಣವನ್ನು ವೀಕ್ಷಿಸಬಹುದು ಎಂದು ಸೈನ್ಸ್ ಪಾರ್ಕ್ ಮುಖ್ಯಸ್ಥ ಕೈಲಾಶ್ ಮಿಶ್ರಾ ಹೇಳಿದ್ದಾರೆ. ಖಗೋಳ ವಿಜ್ಞಾನದಲ್ಲಿ ಆಸಕ್ತಿ ಇರುವವರಿಗೆ ಉಚಿತವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಮಿಶ್ರಾ ಹೇಳಿದರು. ಸಂಜೆ 4.30 ರಿಂದ 5.30 ರವರೆಗೆ ಗಲ್ಟಾ ಗೇಟ್ ಬೆಟ್ಟದ ಸೂರ್ಯ ಮಂದಿರದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
4:03 PM, 25 Oct
ಪ್ರಮುಖ ಹಬ್ಬ ದೀಪಾವಳಿ ನಡುವೆ ಮಂಗಳವಾರ ಸೂರ್ಯಗ್ರಹಣವೂ ಇದೆ. ಈ ಹಿನ್ನೆಲೆ ದೀಪಾವಳಿ ಹಬ್ಬದ ಸಾಲು ಸಾಲು ರಜೆ ಅಂತ ದೇವಾಲಯಗಳಿಗೆ ಭೇಟಿ ನೀಡಲು ಹೊರಟಿರುವ ಭಕ್ತರಿಗೆ ಸೂರ್ಯಗ್ರಹಣದಿಂದ ನಿರಾಸೆ ಕಾದಿದೆ. ಹೌದು, ಪ್ರಮುಖ ದೀಪಾವಳಿ ಹಬ್ಬ ಇರುವುದರಿಂದ ದೇವಾಲಯಕ್ಕೆ ಭೇಟಿ ಭಕ್ತರಿಗೆ ಮಂಗಳವಾರ ಸೂರ್ಯಗ್ರಹಣ ಅಡ್ಡಿ ಪಡಿಸಿದೆ.
ಸೂರ್ಯ ಗ್ರಹಣ ಇರುವುದರಿಂದ ಹುಬ್ಬಳ್ಳಿ ನಗರದಲ್ಲಿ ಹಲವು ದೇವಸ್ಥಾನಗಳು ಬಂದ್ ಮಾಡಲಾಗಿದೆ. ಇನ್ನು, ಕೆಲವು ದೇವಾಲಯಗಳಲ್ಲಿ ಸಮಯ ಬದಲಾವಣೆ ಮಾಡಿವೆ. ಖಂಡಗ್ರಾಸ ಕೇತು ಸೂರ್ಯಗ್ರಹಣ ಹಿನ್ನೆಲೆಯಲ್ಲಿ ನಗರದ ವಿವಿಧ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲೂ ವಿರಳವಾಗಿದೆ.
4:18 PM, 25 Oct
ಶೃಂಗೇರಿಯಲ್ಲಿ ದರ್ಶನಕ್ಕೆ ಅವಕಾಶ
ಸೂರ್ಯ ಗ್ರಹಣದ ವೇಳೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಸಂಜೆ 4 ರಿಂದ ರಾತ್ರಿ 9 ಗಂಟೆವರೆಗೆ ಎಂದಿನಂತೆ ಶಾರದಾಂಭೆ ದರ್ಶನ ಇರಲಿದೆ. ಭಕ್ತರು ದೇವಸ್ಥಾನಕ್ಕೆ ಬಂದು-ಹೋಗುತ್ತಿದ್ದಾರೆ. ಆದರೆ ಈ ವೇಳೆ ಪ್ರಸಾದದ ಸೌಲಭ್ಯ ಇರುವುದಿಲ್ಲ.
4:48 PM, 25 Oct
ಭಾಗಶಃ ಸೂರ್ಯಗ್ರಹಣ ಅಥವಾ ಸೂರ್ಯ ಗ್ರಹಣವು ಅಕ್ಟೋಬರ್ 25 ರಂದು ಸಂಭವಿಸಲಿದೆ. ಇದು ಯುರೋಪ್, ಮಧ್ಯಪ್ರಾಚ್ಯ, ಆಫ್ರಿಕಾ ಮತ್ತು ಏಷ್ಯಾದ ಪಶ್ಚಿಮ ಪ್ರದೇಶಗಳ ಹೆಚ್ಚಿನ ಭಾಗಗಳಿಂದ ಗೋಚರಿಸುತ್ತದೆ. ಭಾರತದಲ್ಲಿ, ಗ್ರಹಣವು ಮಧ್ಯಾಹ್ನ ಪ್ರಾರಂಭವಾಗುತ್ತದೆ.
5:12 PM, 25 Oct
ಭಾಗಶಃ ಸೂರ್ಯಗ್ರಹಣದ ಖಗೋಳ ಅದ್ಭುತವು ಜಮ್ಮು ಮತ್ತು ಕಾಶ್ಮೀರ(ಚಿತ್ರ 1) ಮತ್ತು ಚಂಡೀಗಢದಲ್ಲಿ (ಚಿತ್ರ 2)ಕಂಡಿದ್ದು ಹೀಗೆ.
Solar Eclipse 2022 Live Updates in Kannada: Check Solar eclipse October 2022 date, timings in india, visibility, live streaming, latest news and highlights.