Get Updates
Get notified of breaking news, exclusive insights, and must-see stories!

ಸೋಲಾರ್ ಹಗರಣ: ಉಮ್ಮನ್ ಚಾಂಡಿ ವಿರುದ್ಧ ಎಫ್ಐಆರ್ ಗೆ ಅನುಮತಿ

ತಿರುವನಂತಪುರಂ, ಜ.28: ಬಹುಕೋಟಿ ಸೌರಶಕ್ತಿ ಫಲಕ ಯೋಜನೆ ಲಂಚ ಪ್ರಕರಣದ ಆರೋಪಿಯಾಗಿರುವ ಕೇರಳದ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ಭಾರಿ ಹಿನ್ನಡೆ ಉಂಟಾಗಿದೆ. ಕೇರಳ ಸಿಎಂ ಚಾಂಡಿ ವಿರುದ್ಧ ಎಫ್ ಐಆರ್ ದಾಖಲಿಸಿಕೊಳ್ಳಲು ತ್ರಿಸ್ಸೂರಿನ ಕೋರ್ಟ್ ತನಿಖಾ ತಂಡಕ್ಕೆ ಅನುಮತಿ ನೀಡಿದೆ.

ಸೋಲಾರ್ ಹಗರಣದ ಪ್ರಮುಖ ಆರೋಪಿಯಾಗಿರುವ ಸರಿತಾ ನಾಯರ್ ಅವರು ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹಾಗೂ ಅವರ ಕ್ಯಾಬಿನೆಟ್ ಸದಸ್ಯರಿಗೆ 1.90 ಕೋಟಿ ರು ಲಂಚ ನೀಡಿರುವುದಾಗಿ ನ್ಯಾಯಾಂಗ ಸಮಿತಿ ಮುಂದೆ ಹೇಳಿಕೆ ನೀಡಿದ್ದರು.[ಸೋಲಾರ್ ಹಗರಣ: ಸೆಕ್ಸ್ ಆಫರ್ ಬದಲಿಗೆ ಕೋಟಿ ರು ಲಂಚ?]

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ತ್ರಿಶೂರಿನ ವಿಜಿಲೆನ್ಸ್ ಕೋರ್ಟ್, ಉಮ್ಮನ್ ಚಾಂಡಿ ಹಾಗೂ ಇಂಧನ ಸಚಿವ ಮೊಹಮ್ಮದ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ನಿರ್ದೇಶಿಸಿದೆ.[ಸೋಲಾರ್ ಹಗರಣ ಶಾಕ್ ನಿಂದ ಕೇರಳ ಸಿಎಂಗೆ ರಿಲೀಫ್]

Thrissur court orders FIR against Kerala CM
ಮತ್ತೊಬ್ಬ ಆರೋಪಿ ಬಿಜು ರಾಧಾಕೃಷ್ಣನ್ ಅವರು ಈ ಹಿಂದೆ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ಮೇಲೆ ಲಂಚಕ್ಕೆ ಬದಲಾಗಿ ಸೆಕ್ಸ್ ಆಫರ್ ಕೇಳಿದ್ರು ಎಂದು ಆರೋಪಿಸಿದ್ದರು. ಆದರೆ, ಎಲ್ಲಾ ಆರೋಪಗಳನ್ನು ಮುಖ್ಯಮಂತ್ರಿಗಳ ಕಚೇರಿ ಅಲ್ಲಗೆಳೆದಿತ್ತು.[ಹಗರಣದ ಗಣಿಯಲ್ಲಿ 'ಸೋಲಾರ್' ಸುಂದರಿಯರು]

ಕೇರಳ ಸಿಎಂ ಉಮ್ಮನ್ ಚಾಂಡಿ ಹಾಗೂ ಅವರ ಕ್ಯಾಬಿನೆಟ್ ಸದಸ್ಯ ಆರ್ಯದಾನ್ ಮೊಹಮ್ಮದ್ ಅವರು 1.90 ಕೋಟಿ ರು ಲಂಚ ಕೇಳಿದ್ದರು. ಲಂಚದ ಮೊತ್ತ ಪಾವತಿಸಿದ ಮೇಲೆ ಬಹುಕೋಟಿ ಸೋಲಾರ್ ಯೋಜನೆಯನ್ನು ವಹಿಸಲಾಯಿತು. ['ನನಗೆ ಗಲ್ಲು ಶಿಕ್ಷೆ ಕೊಡಿ' ಎಂದ 'ಸೋಲಾರ್' ಅಪರಾಧಿ]

ಇದಲ್ಲದೆ ಇಂಧನ ಸಚಿವ ಅರ್ಯದಾನ್ ಮೊಹಮ್ಮದ್ ಅವರ ಪಿಎಗೂ 40 ಲಕ್ಷ ರು ಲಂಚ ನೀಡಲಾಗಿದೆ ಎಂದು ಸರಿತಾ ಹೇಳಿದ್ದಾರೆ. ಚಾಂಡಿ ಅವರ ಮಾಜಿ ಪಿಎ ಜಿಕುಮೊನ್ ಅವರಿಂದ 7 ಕೋಟಿ ರು ಲಂಚ ಬೇಡಿಕೆ ಬಂದಿತ್ತು. ಈ ಮೊತ್ತವನ್ನು ಚಾಂಡಿ ಅವರ ಅನಧಿಕೃತ ಸಾಥಿ ದೆಹಲಿ ನಿವಾಸಿ ಕುರುವಿಲ್ಲ ಎಂಬುವವರಿಗೆ ನೀಡಬೇಕಿತ್ತು ಎಂದಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+