ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಮತ್ತೆ ಉಗ್ರರ ಆರ್ಭಟ: ಓರ್ವ ಯೋಧ ಹುತಾತ್ಮ
ಬೆಂಗಳೂರು, ಜುಲೈ. 27: ಗಡಿನಾಡಿನ ಕುಪ್ವಾರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ನಿನ್ನೆಯಷ್ಟೇ ಕಾರ್ಗಿಲ್ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಅವರ ನೀಚ ಪ್ಲ್ಯಾನ್ಗಳು ಎಂದಿಗೂ ಯಶಸ್ವಿಯಾಗುವುದಿಲ್ಲ ಮತ್ತು ಶತ್ರುಗಳಿಗೆ ಬಲವಾದ ಪ್ರತಿಕ್ರಿಯೆಯನ್ನು ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ. ಇದಾದ ಒಂದು ದಿನದ ನಂತರ ಶಂಕಿತ ಉಗ್ರರು ಒಳನುಸುಳಿದ್ದು, ಗುಂಡಿನ ಚಕಮಕಿ ನಡೆದಿದೆ.

ಕುಪ್ವಾರದ ಮಚಿಲ್ ಸೆಕ್ಟರ್ನ ಗಡಿ ನಿಯಂತ್ರಣ ರೇಖೆಯ (ಎಲ್ಒಸಿ) ಕುಮ್ಕಾರಿ ಪೋಸ್ಟ್ ಬಳಿ ಶನಿವಾರ ಬೆಳಗ್ಗೆ ಶಂಕಿತ ಉಗ್ರರ ಚಲನವಲನವನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಭದ್ರತಾ ಪಡೆಗಳು ಉಗ್ರರಿಗೆ ಸವಾಲೆಸೆಯುತ್ತಿದ್ದಂತೆ ಗುಂಡಿನ ದಾಳಿ ನಡೆಸಿದ್ದು, ಗುಂಡಿನ ಚಕಮಕಿ ನಡೆದಿದೆ.
ಮೂಲಗಳ ಪ್ರಕಾರ ಉಗ್ರರು ನಡೆಸಿದ ಆರಂಭಿಕ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆಸ್ಥಳಾಂತರಿಸಲಾಯಿತು. ಗಾಯಗೊಂಡ ಸೈನಿಕರನ್ನು ನಂತರ ಶ್ರೀನಗರದಲ್ಲಿರುವ ಸೇನೆಯ 92 ಮೂಲ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿರಿಯ ಪೊಲೀಸ್ ಅಧಿಕಾರಿ ಗಾಯಗೊಂಡಿರುವುದನ್ನು ದೃಢಪಡಿಸಿದ್ದಾರೆ.
"ಇದು ಪ್ರಾಥಮಿಕ ಮಾಹಿತಿ. ಗಡಿ ನಿಯಂತ್ರಣ ರೇಖೆಗೆ ಸಮೀಪದಲ್ಲಿರುವ ಕಾರಣ ಆ ಪ್ರದೇಶದಿಂದ ಮಾಹಿತಿ ಸಂಗ್ರಹಿಸಲು ಸಮಯ ತೆಗೆದುಕೊಳ್ಳುತ್ತದೆ'' ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವಿಟರ್ ಪೋಸ್ಟ್ನಲ್ಲಿ ಸೇನೆಯು, ಗುಂಡಿನ ಚಕಮಕಿಯಲ್ಲಿ ತನ್ನ ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ. ಒಬ್ಬ ಉಗ್ರಗಾಮಿ ಕೊಲ್ಲಲ್ಪಟ್ಟಿದ್ದಾರೆ ಎಂದು ಹೇಳಿದೆ.
"ನಿಯಂತ್ರಣ ರೇಖೆಯ ಕುಮ್ಕರಿಯಲ್ಲಿ ಫಾರ್ವರ್ಡ್ ಪೋಸ್ಟ್ನಲ್ಲಿ ಅಪರಿಚಿತ ವ್ಯಕ್ತಿಗಳೊಂದಿಗೆ ಗುಂಡಿನ ಚಕಮಕಿ ನಡೆದಿದೆ. ಒಬ್ಬ ಪಾಕಿಸ್ತಾನಿ ವ್ಯಕ್ತಿ ಸಾವನ್ನಪ್ಪಿದ್ದು, ನಮ್ಮ ಇಬ್ಬರು ಸೈನಿಕರು ಗಾಯಗೊಂಡಿದ್ದು, ಅವರನ್ನು ಸ್ಥಳಾಂತರಿಸಲಾಗಿದೆ. ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ" ಎಂದು ಸೇನೆಯ ಚಿನಾರ್ ಕಾರ್ಪ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಇನ್ನು, ಜುಲೈ 15 ರಂದು ದೋಡಾದ ದೇಸಾದಲ್ಲಿ ಆರ್ಮಿ ಕ್ಯಾಪ್ಟನ್ ಸೇರಿದಂತೆ ನಾಲ್ವರು ಸೈನಿಕರನ್ನು ಹತ್ಯೆಗೈದ ದಾಳಿಯ ಹಿಂದೆ ಮೂವರು ಉಗ್ರಗಾಮಿಗಳ ರೇಖಾಚಿತ್ರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಪೊಲೀಸರ ಪ್ರಕಾರ, ಈ ಉಗ್ರರು ದೋಡಾ ಮತ್ತು ದೇಸಾದ ಮೇಲ್ಭಾಗದಲ್ಲಿದ್ದಾರೆ. ಜುಲೈ 15 ರಂದು ಉರಾರ್ ಬಾಗಿಯಲ್ಲಿ ನಡೆದ ದಾಳಿಯಲ್ಲಿ ಭಾಗಿಯಾಗಿದ್ದಾರೆ. ಪೊಲೀಸರು ಪ್ರತಿ ಉಗ್ರರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದ್ದಾರೆ. ಮಾಹಿತಿ ನೀಡುವವರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ.
ಈ ಕೆಳಗಿನ ಸಂಪರ್ಕ ಸಂಖ್ಯೆ(ಗಳು) ಎಸ್ಎಸ್ಪಿ ದೋಡಾ-9541904201, ಎಸ್ಪಿ ಎಚ್ಕ್ಯೂಆರ್ಎಸ್ ದೋಡಾ-9797649362, 9541904202, ಎಸ್ಪಿ ಒಪಿಎಸ್ 4319, ಎಸ್ಪಿ ಒಪಿಎಸ್ 4319, ಡಿವೈಎಸ್ಪಿ ದಾರ್ ದೊಡಾ-9541904205, ಡಿವೈ. SP HQRS ದೋಡಾ-9541904207, SHO PS ದೋಡಾ-9419163516, 9541904211, SHO PS DESSA-8082383906, IC PP ಬಾಗ್ಲಾ ಭಾರತ್-7051484314, 3950 ಪಿಸಿಆರ್.ಡಿ.ಆರ್ , 7298923100, 9469365174, 9103317361 ಭಯೋತ್ಪಾದಕರ ಉಪಸ್ಥಿತಿ / ಚಲನವಲನದ ಬಗ್ಗೆ ಮಾಹಿತಿಯನ್ನು ಒದಗಿಸುವಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸ್ (ಜಿಲ್ಲಾ ದೋಡಾ) ಸಾರ್ವಜನಿಕರಿಗೆ ಮನವಿ ಮಾಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications