ಗುಜರಾತ್: ತನ್ನ ಮಗಳಿಗೆ ಸಂಬಂಧಿಸಿದ್ದ ಅಶ್ಲೀಲ ವಿಡಿಯೋ ವಿರೋಧಿಸಿಕ್ಕಾಗಿ ಯೋಧನ ಹತ್ಯೆ
ನವದೆಹಲಿ, ಡಿಸೆಂಬರ್ 26: ತನ್ನ ಮಗಳ ಅಶ್ಲೀಲ ವೀಡಿಯೋವನ್ನು ಪ್ರಸಾರ ಮಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಗಡಿ ಭದ್ರತಾ ಪಡೆಯ ಯೋಧನನ್ನು ಹತ್ಯೆ ಮಾಡಲಾಗಿದೆ. ಗುಜರಾತ್ನ ನಾಡಿಯಾಡ್ನಲ್ಲಿ ಯೋಧನನ್ನು ಹೊಡೆದು ಕೊಂದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿದಂತೆ ಪೊಲೀಸ್ ಕೇಸು ದಾಖಲಾಗಿದೆ.
ಶನಿವಾರ ಚಕ್ಲಾಸಿ ಗ್ರಾಮದಲ್ಲಿ ವಿಡಿಯೋವನ್ನು ಆನ್ಲೈನ್ನಲ್ಲಿ ಪೋಸ್ಟ್ ಮಾಡಿದ 15 ವರ್ಷದ ಯುವಕನ ಮನೆಗೆ ಯೋಧ ಹೋಗಿದ್ದ ಎಂದು ಮೂಲಗಳು ತಿಳಿಸಿವೆ. ಅಲ್ಲಿ ಮನೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ.
ವಿಡಿಯೋ ಮಾಡಿದ್ದ ಆರೋಪಿ ಬಾಲಕಿ ಓದಿದ ಶಾಲೆಯ ವಿದ್ಯಾರ್ಥಿಯಾಗಿದ್ದು, ಇಬ್ಬರೂ ಸಂಬಂಧ ಹೊಂದಿದ್ದರು ಎಂದು ಮೂಲಗಳು ತಿಳಿಸಿವೆ.

ಆತ(ಆರೋಪಿ) ಬಾಲಕಿಯ ಅಶ್ಲೀಲ ವಿಡಿಯೋವನ್ನು ಆನ್ಲೈನ್ನಲ್ಲಿ ಪೋಸ್ಟ್ ಮಾಡಿದ್ದ. ಆ ನಂತರ ಬಿಎಸ್ಎಫ್ ಜವಾನ ತನ್ನ ಕುಟುಂಬದೊಂದಿಗೆ ಹುಡುಗನ ಕುಟುಂಬದೊಂದಿಗೆ ಮಾತನಾಡಲು ಹೋಗಿದ್ದ ಎಂದು ಗಡಿ ಭದ್ರತಾ ಪಡೆ ಮೂಲಗಳು ಖಚಿತಪಡಿಸಿವೆ.
ಪೊಲೀಸರು ದಾಖಲಿಸಿದ ಎಫ್ಐಆರ್ನಲ್ಲಿ ಶನಿವಾರ ರಾತ್ರಿ ಯೋಧನು ತನ್ನ ಪತ್ನಿ, ಇಬ್ಬರು ಪುತ್ರರು ಮತ್ತು ಸೋದರಳಿಯನೊಂದಿಗೆ ಯುವಕನ ಮನೆಗೆ ಹೋಗಿದ್ದರು.

ಆರೋಪಿಯ ಕುಟುಂಬದ ಸದಸ್ಯರು ಅವರನ್ನು ನಿಂದಿಸಲು ಪ್ರಾರಂಭಿಸಿದರು. ಯೋಧ ಅದನ್ನು ವಿರೋಧಿಸಿದಾಗ, ಗುಂಪು ಆತನ ಕುಟುಂಬದ ಮೇಲೆ ಹಲ್ಲೆ ನಡೆಸಿತು. ಆ ನಂತರ ಯೋಧ ಸಾವನ್ನಪ್ಪಿದನೆಂದು ತಿಳಿದುಬಂದಿದೆ.
ಪ್ರಧಾನಿ ಮೋದಿ ಅವರ ತವರು ರಾಜ್ಯದಲ್ಲಿ ಇಂತಹ ಘಟನೆ ನಡೆದಿರುವುದಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ. ಬಿಎಸ್ಎಫ್ ಯೋಧರಿಗೆ ಭದ್ರತೆ ಇಲ್ಲದಿರುವಾಗ ಇನ್ನು ಸಾಮಾನ್ಯ ಜನರಿಗೆ ಭದ್ರತೆ ಎಲ್ಲಿಂದ ಸಿಗುತ್ತದೆಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪ್ರಕರಣವನ್ನು ಗುಜರಾತ್ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮೂಲಗಳು ತಿಳಿಸಿವೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications