ಬ್ರಹ್ಮಪುತ್ರಾ ಉಪನದಿಗೆ ಉರುಳಿದ ಸೇನಾ ಜೀಪ್: 3 ಮಂದಿ ಸಾವು
ಗುವಾಹಟಿ, ಏಪ್ರಿಲ್ 23: 18 ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಸೇನಾ ಜೀಪ್ ವೊಂದು ಅರುಣಾಚಲಪ್ರದೇಶ ಹಾಗೂ ಅಸ್ಸಾಮ್ ರಾಜ್ಯಗಳ ಗಡಿಭಾಗದ ಬ್ರಹ್ಮಪುತ್ರ ಉಪನದಿಯಲ್ಲಿ ಉರುಳಿಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ದುರ್ಘಟನೆಯಲ್ಲಿ ಓರ್ವ ಯೋಧ ಕರ್ನಾಟಕದವರಾಗಿದ್ದು, ವಿಜಯಪುರದ ಬಸವನಬಾಗೇವಾಡಿ ತಾಲೂಕಿನ ರೋಣಿಹಾಳ ಗ್ರಾಮದ ಯೋಧ ಪರಶುರಾಮ ಖ್ಯಾತನ್ನವರ್(32) ಸಾವನ್ನಪ್ಪಿದ ದುರ್ದೈವಿ. ಕಳೆದ 14 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಪತ್ನಿ, ಪುತ್ರಿ, ಪುತ್ರ, ತಂದೆ-ತಾಯಿ ಮತ್ತು ಸೋದರ ಸೋದರಿಯರನ್ನು ಅಗಲಿದ್ದಾರೆ.

ಘಟನೆಯಲ್ಲಿ ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಬಹುದೆಂದು ಅಂದಾಜಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಇನ್ನಿಬ್ಬರು ಮೃತ ಸೈನಿಕರ ಗುರುತು ಪತ್ತೆಯಾಗಿಲ್ಲ.












Click it and Unblock the Notifications