Delhi Election: ಅರವಿಂದ್ ಕೇಜ್ರಿವಾಲ್ ವಿರುದ್ಧ ಕಿಡಿಕಾರಿದ ನರೇಂದ್ರ ಮೋದಿ
ದೆಹಲಿ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 5 ರಂದು ಮತದಾನ ನಡೆಯಲಿದ್ದು ಎಲ್ಲಾ ಅಭ್ಯರ್ಥಿಗಳು ಕೊನೆಯ ಕ್ಷಣದ ಕಸರತ್ತು ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ನಡುವೆ ಪರಸ್ಪರ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ತಮ್ಮ ಭಾಷಣದಲ್ಲಿ ಮಾತನಾಡಿದ ಅವರು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ರನ್ನು ಪರೋಕ್ಷವಾಗಿ ಟೀಕಿಸಿದ್ದು, ಕೆಲವು ನಾಯಕರು ಐಷಾರಾಮಿ ಶವರ್ ಮತ್ತು ಬಾತ್ಟಬ್ಗಳ ಮೇಲೆ ಗಮನಹರಿಸಿದ್ದಾರೆ. ಆದರೆ ಬಿಜೆಪಿ ಪ್ರತಿ ಮನೆಯಲ್ಲೂ ನೀರು ಲಭ್ಯವಾಗುವಂತೆ ಮಾಡಿದೆ ಎಂದು ಹೇಳಿದರು. ಚುನಾವಣೆಗೆ ಒಂದು ದಿನ ಮುಂಚೆ ಅವರು ದೆಹಲಿ ಮಾಜಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶೀಷ್ಮಹಲ್ ಟೀಕೆಯನ್ನು ಮತ್ತೊಮ್ಮೆ ಪುನರುಚ್ಚಿಸಿದರು.

ನರೇಂದ್ರ ಮೋದಿ ಹೇಳಿದ್ದೇನು?
ಅರವಿಂದ್ ಕೇಜ್ರಿವಾಲ್ ಸಿಎಂ ಆಗಿದ್ದ ಸಂದರ್ಭದಲ್ಲಿ ಶೀಷ್ಮಹಲ್ ನಿರ್ಮಿಸುತ್ತಿರುವಾಗ ನಾವು ಬಡವರಿಗೆ ಮನೆಗಳನ್ನು ನಿರ್ಮಿಸುವತ್ತ ಗಮನಹರಿಸಿದ್ದೇವೆ. ಅರವಿಂದ್ ಕೇಜ್ರಿವಾಲ್ ಸಿಎಂ ಆಗಿದ್ದಾಗ ಅವರ ಬಂಗಲೆಯ ನವೀಕರಣ ಮಾಡಿದ್ದನ್ನು ಮೋದಿ ಟೀಕಿಸಿದ್ದರು.
ದೆಹಲಿ ಸಿಎಂ ನಿವಾಸದ ನವೀಕರಣದಲ್ಲಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಸಿದ್ಧಪಡಿಸಿದ ದಾಸ್ತಾನು ಪಟ್ಟಿಯಲ್ಲಿ ಬಾಡಿ ಮಸಾಜ್ ಯತ್ರಗಳು, ಬಾತ್ಟಬ್ಗಳಂತಹ ಐಷಾರಾಮಿ ವಸ್ತುಗಳನ್ನು ಬಳಕೆ ಮಾಡಿರುವುದು ಬಹಿರಂಗವಾಗಿದೆ.
ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಅಕ್ಟೋಬರ್ ತಿಂಗಳಿನಲ್ಲಿ ಕೇಜ್ರಿವಾಲ್ ನಿವಾಸವನ್ನು ಖಾಲಿ ಮಾಡಿದ್ದರು. ಬಳಿಕ ಅತಿಶಿ ದೆಹಲಿ ಸಿಎಂ ಆಗಿ ಆಯ್ಕೆಯಾಗಿದ್ದರು.
ಶೀಷ್ಮಹಲ್ ನವೀಕರಣದಲ್ಲಿ ಅಡುಗೆಮನೆಗಳು, ಶೌಚಾಲಯಗಳು, ತೊಳೆಯುವ ಪ್ರದೇಶಗಳು ಮತ್ತು ಜಿಮ್ಗಳಲ್ಲಿ 75 ಬೋಸ್ ಸೀಲಿಂಗ್ ಸ್ಪೀಕರ್ಗಳು ಕಂಡುಬಂದಿವೆ ಎಂದು ಬಿಜೆಪಿ ಆರೋಪಿಸಿದೆ. ಸುಧಾರಿತ ತಾಂತ್ರಿಕ ವೈಶಿಷ್ಟ್ಯಗಳನ್ನು ಹೊಂದಿರುವ 934 ಲೀಟರ್ ಮಲ್ಟಿ-ಡೋರ್ ಫ್ರಿಡ್ಜ್ ಕೂಡ ಖರೀದಿ ಮಾಡಲಾಗಿದೆ. ಐಷಾರಾಮಿ ವಸ್ತುಗಳಲ್ಲಿ ಟಚ್ಸ್ಕ್ರೀನ್ ಹೊಂದಿರುವ 73 ಲೀಟರ್ ಸ್ಟೀಮ್ ಓವನ್ ಕೂಡ ಸೇರಿದೆ ಎಂದು ಬಿಜೆಪಿ ಟೀಕಸಿದೆ.
ನಾನು ಶೀಶ್ಮಹಲ್ ನಿರ್ಮಿಸಬಹುದಿತ್ತು, ಆದರೆ ನನ್ನ ದೇಶವಾಸಿಗಳು ಶಾಶ್ವತ ಮನೆಗಳನ್ನು ಪಡೆಯಬೇಕು ಎಂಬುದು ನನ್ನ ಕನಸಾಗಿತ್ತು ಎಂದು ಪ್ರಧಾನಿ ಮೋದಿ ಈ ಮೊದಲು ಕೇಜ್ರಿವಾಲ್ ವಿರುದ್ಧ ಟೀಕೆ ಮಾಡಿದ್ದರು.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications