Delhi Election: ಅರವಿಂದ್ ಕೇಜ್ರಿವಾಲ್ ವಿರುದ್ಧ ಕಿಡಿಕಾರಿದ ನರೇಂದ್ರ ಮೋದಿ
ದೆಹಲಿ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 5 ರಂದು ಮತದಾನ ನಡೆಯಲಿದ್ದು ಎಲ್ಲಾ ಅಭ್ಯರ್ಥಿಗಳು ಕೊನೆಯ ಕ್ಷಣದ ಕಸರತ್ತು ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ನಡುವೆ ಪರಸ್ಪರ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ತಮ್ಮ ಭಾಷಣದಲ್ಲಿ ಮಾತನಾಡಿದ ಅವರು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ರನ್ನು ಪರೋಕ್ಷವಾಗಿ ಟೀಕಿಸಿದ್ದು, ಕೆಲವು ನಾಯಕರು ಐಷಾರಾಮಿ ಶವರ್ ಮತ್ತು ಬಾತ್ಟಬ್ಗಳ ಮೇಲೆ ಗಮನಹರಿಸಿದ್ದಾರೆ. ಆದರೆ ಬಿಜೆಪಿ ಪ್ರತಿ ಮನೆಯಲ್ಲೂ ನೀರು ಲಭ್ಯವಾಗುವಂತೆ ಮಾಡಿದೆ ಎಂದು ಹೇಳಿದರು. ಚುನಾವಣೆಗೆ ಒಂದು ದಿನ ಮುಂಚೆ ಅವರು ದೆಹಲಿ ಮಾಜಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶೀಷ್ಮಹಲ್ ಟೀಕೆಯನ್ನು ಮತ್ತೊಮ್ಮೆ ಪುನರುಚ್ಚಿಸಿದರು.

ನರೇಂದ್ರ ಮೋದಿ ಹೇಳಿದ್ದೇನು?
ಅರವಿಂದ್ ಕೇಜ್ರಿವಾಲ್ ಸಿಎಂ ಆಗಿದ್ದ ಸಂದರ್ಭದಲ್ಲಿ ಶೀಷ್ಮಹಲ್ ನಿರ್ಮಿಸುತ್ತಿರುವಾಗ ನಾವು ಬಡವರಿಗೆ ಮನೆಗಳನ್ನು ನಿರ್ಮಿಸುವತ್ತ ಗಮನಹರಿಸಿದ್ದೇವೆ. ಅರವಿಂದ್ ಕೇಜ್ರಿವಾಲ್ ಸಿಎಂ ಆಗಿದ್ದಾಗ ಅವರ ಬಂಗಲೆಯ ನವೀಕರಣ ಮಾಡಿದ್ದನ್ನು ಮೋದಿ ಟೀಕಿಸಿದ್ದರು.
ದೆಹಲಿ ಸಿಎಂ ನಿವಾಸದ ನವೀಕರಣದಲ್ಲಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಸಿದ್ಧಪಡಿಸಿದ ದಾಸ್ತಾನು ಪಟ್ಟಿಯಲ್ಲಿ ಬಾಡಿ ಮಸಾಜ್ ಯತ್ರಗಳು, ಬಾತ್ಟಬ್ಗಳಂತಹ ಐಷಾರಾಮಿ ವಸ್ತುಗಳನ್ನು ಬಳಕೆ ಮಾಡಿರುವುದು ಬಹಿರಂಗವಾಗಿದೆ.
ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಅಕ್ಟೋಬರ್ ತಿಂಗಳಿನಲ್ಲಿ ಕೇಜ್ರಿವಾಲ್ ನಿವಾಸವನ್ನು ಖಾಲಿ ಮಾಡಿದ್ದರು. ಬಳಿಕ ಅತಿಶಿ ದೆಹಲಿ ಸಿಎಂ ಆಗಿ ಆಯ್ಕೆಯಾಗಿದ್ದರು.
ಶೀಷ್ಮಹಲ್ ನವೀಕರಣದಲ್ಲಿ ಅಡುಗೆಮನೆಗಳು, ಶೌಚಾಲಯಗಳು, ತೊಳೆಯುವ ಪ್ರದೇಶಗಳು ಮತ್ತು ಜಿಮ್ಗಳಲ್ಲಿ 75 ಬೋಸ್ ಸೀಲಿಂಗ್ ಸ್ಪೀಕರ್ಗಳು ಕಂಡುಬಂದಿವೆ ಎಂದು ಬಿಜೆಪಿ ಆರೋಪಿಸಿದೆ. ಸುಧಾರಿತ ತಾಂತ್ರಿಕ ವೈಶಿಷ್ಟ್ಯಗಳನ್ನು ಹೊಂದಿರುವ 934 ಲೀಟರ್ ಮಲ್ಟಿ-ಡೋರ್ ಫ್ರಿಡ್ಜ್ ಕೂಡ ಖರೀದಿ ಮಾಡಲಾಗಿದೆ. ಐಷಾರಾಮಿ ವಸ್ತುಗಳಲ್ಲಿ ಟಚ್ಸ್ಕ್ರೀನ್ ಹೊಂದಿರುವ 73 ಲೀಟರ್ ಸ್ಟೀಮ್ ಓವನ್ ಕೂಡ ಸೇರಿದೆ ಎಂದು ಬಿಜೆಪಿ ಟೀಕಸಿದೆ.
ನಾನು ಶೀಶ್ಮಹಲ್ ನಿರ್ಮಿಸಬಹುದಿತ್ತು, ಆದರೆ ನನ್ನ ದೇಶವಾಸಿಗಳು ಶಾಶ್ವತ ಮನೆಗಳನ್ನು ಪಡೆಯಬೇಕು ಎಂಬುದು ನನ್ನ ಕನಸಾಗಿತ್ತು ಎಂದು ಪ್ರಧಾನಿ ಮೋದಿ ಈ ಮೊದಲು ಕೇಜ್ರಿವಾಲ್ ವಿರುದ್ಧ ಟೀಕೆ ಮಾಡಿದ್ದರು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications