ರಾಜಕೀಯವಾಗಿ ದುರ್ಬಳಕೆಯಾದ ಸರ್ಜಿಕಲ್ ಸ್ಟ್ರೈಕ್: ಮೋದಿ
ಕಳೆದ ವರ್ಷ ಭಾರತೀಯ ಸೇನೆಯು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ವಿಚಾರವನ್ನು ಕೆಲವರು ರಾಜಕೀಯವಾಗಿ ಬಳಸಿಕೊಂಡರು ಎಂದು ಪ್ರಧಾನಿ ನರೇಂದ್ರ ಮೋದಿ ಖೇದ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಜವೂನ್ ಪುರದಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಜಿಕಲ್ ಸ್ಟ್ರೈಕ್ ವಿಚಾರವನ್ನು ರಾಜಕೀಯವಾಗಿ ಬಳಸಿಕೊಂಡವರ ತಪ್ಪು ಅಕ್ಷಮ್ಯ ಎಂದರು.
ಶುಕ್ರವಾರ ಬೆಳಗ್ಗೆಯೇ ವಾರಣಾಸಿಗೆ ಆಗಮಿಸಿದ್ದ ಮೋದಿ, ಬನಾರಸ್ ಹಿಂದೂ ವಿಶ್ವ ವಿದ್ಯಾಲಯಕ್ಕೆ ಭೇಟಿ ನೀಡಿದರಲ್ಲದೆ ಅಲ್ಲಿ ಸುಮಾರು 1 ಗಂಟೆಯ ಕಾಲ ವಿಶ್ರಾಂತಿ ಪಡೆದರು.
ಆನಂತರ, ಪುರಾಣ ಪ್ರಸಿದ್ಧ ಕಾಶಿ ವಿಶ್ವನಾಥೇಶ್ವರ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿ ಆನಂತರ ರೋಡ್ ಶೋನಲ್ಲಿ ಪಾಲ್ಗೊಂಡರು. ಸುಮಾರು 10 ಕಿಮೀ.ಗಳಷ್ಟು ರೋಡ್ ಶೋ ನಡೆಸಿದ ಅವರು, ಆನಂತರ ಜವೂನ್ ಪುರದಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಅಲ್ಲಿ ಅವರ ಮಾಡಿದ ಭಾಷಣದ ಹೈಲೈಟ್ಸ್, ರೋಡ್ ಶೋನ ಫೋಟೋಗಳೊಂದಿಗೆ ಇಲ್ಲಿ ನಿಮಗಾಗಿ....

ಅತ್ಯಂತ ಜಾಣತನ ಕಾರ್ಯಾಚರಣೆ ಅದು
- ಚರಿತ್ರೆಯನ್ನು ತನ್ನ ಗರ್ಭದಲ್ಲಿಟ್ಟುಕೊಂಡಿರುವ ಜವೂನ್ ಪುರದ ಈ ನೆಲಕ್ಕೆ ನಾನು ಶಿರಬಾಗಿಸಿ ಪ್ರಣಾಮಗಳನ್ನು ಸಲ್ಲಿಸುತ್ತೇನೆ.
- ಸರ್ಜಿಕಲ್ ಸ್ಟ್ರೈಕ್ ಮೂಲಕ ಉಗ್ರರ ನೆಲೆಗಳನ್ನು ರಾತ್ರಿ ಕಳೆದು ಬೆಳಗಾಗುವುದರೊಳಗಾಗಿ ಧ್ವಂಸ ಮಾಡಿದ ಬಂದ ನಮ್ಮ ಸೇನೆಯ ಶೌರ್ಯವನ್ನು ಮೆಚ್ಚಲೇ ಬೇಕು.
- ಈ ಕಾರ್ಯಾಚರಣೆಯನ್ನು ಪ್ರತಿ ನಿಮಿಷದ ಪ್ಲಾನ್ ಅನ್ನೂ ಮೊದಲೇ ನಿರ್ಧರಿಸಲಾಗಿತ್ತು.

ಸೈನಿಕರ ಕನಸು ನನಸಾಗಿದೆ
- ಸರ್ಜಿಕಲ್ ಸ್ಟ್ರೈಕ್ ಅನ್ನು ಇಡೀ ವಿಶ್ವವೇ ಅಧ್ಯಯನ ಮಾಡಿ ಸೈ ಎಂದಿತು.
- ಸುಮಾರು 40 ವರ್ಷಗಳಿಂದ ಭಾರತೀಯ ಸೈನಿಕರು 'ಒನ್ ರ್ಯಾಂಕ್, ಒನ್ ಪೆನ್ಷನ್' ಗಾಗಿ ಆಗ್ರಹಿಸುತ್ತಲೇ ಬಂದಿದ್ದರು. ಆದರೆ ಈವರೆಗೆ ಏನೂ ಆಗಿರಲಿಲ್ಲ. ಆದರೆ, ನಮ್ಮ ಸರ್ಕಾರ, ಸೈನಿಕರ ಆ ಕನಸನ್ನು ನನಸು ಮಾಡಿದೆ.

ವಿಶೇಷವಾಗಿರಲಿದೆಯೇ ಈ ಬಾರಿಯ ಹೋಳಿ?
- ಶೀಘ್ರದಲ್ಲೇ ವಿಧಾನಸಭೆಯ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಆಗ, ಕಾಂಗ್ರೆಸ್, ಸಮಾಜವಾದಿ, ಬಹುಜನ ಸಮಾಜವಾದಿ ಪಕ್ಷಗಳ ಬಗೆಗಿನ ಜನರ ತೀರ್ಪು ಬಹಿರಂಗವಾಗಲಿದೆ. ಇದೇ ವೇಳೆ, ಬಿಜೆಪಿ ಬಹುಮತದಿಂದ ಗೆದ್ದು ಅಧಿಕಾರಕ್ಕೆ ಬರಲಿದೆ.
- ಇದೇ 13ರಂದು ಇಡೀ ಉತ್ತರ ಪ್ರದೇಶ ಹೋಲಿ ಹಬ್ಬವನ್ನು ಆಚರಿಸುತ್ತದೆ. ನಾನು ಹೇಳುತ್ತೇನೆ, ಈ ಬಾರಿಯ ಹೋಳಿ ಹಬ್ಬ ಬಿಜೆಪಿ ಅಧಿಕಾರ ಹಿಡಿಯುವ ಸಂಕೇತವಾಗಿರುತ್ತದೆ.

ಪಾರದರ್ಶಕ ಸರ್ಕಾರಕ್ಕೆ ಆದ್ಯತೆ
- ಬಿಜೆಪಿಗೆ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೆ ರಕ್ಷಣೆ ನೀಡುವತ್ತ ಮೊದಲ ಆದ್ಯತೆ ನೀಡುತ್ತೇವೆ.
-ಸಣ್ಣ ರೈತರ ಸಾಲ ಮನ್ನಾ ಮಾಡುತ್ತೇವೆ.
- ನೀವು ನನಗೆ (ಬಿಜೆಪಿ) ಬಹುಮತ ತಂದುಕೊಟ್ಟರೆ, ನಾನು ನಿಮಗೆ ಪಾರದರ್ಶಕ ಸರ್ಕಾರವನ್ನು ನೀಡುತ್ತೇನೆ.
- ನೀವೆಂದಾದರೂ ದಿನದ 24 ಗಂಟೆ ನಿರಂತರ ವಿದ್ಯುತ್ ನೋಡಿದ್ದೀರಾ? ಇಲ್ಲ ತಾನೇ? ಈ ಬಾರಿ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದರೆ ನಿರಂತರವಾಗಿ 24 ಗಂಟೆ ವಿದ್ಯುತ್ ಸರಬರಾಜು ಇರುವ ಸೌಕರ್ಯವು ನಿಮ್ಮದಾಗುತ್ತದೆ.

ದುರವಸ್ಥೆಯಿಂದ ಕಾಪಾಡುತ್ತೇನೆ
- ಜವೂನ್ ಪುರದಲ್ಲಿ ಸಂಜೆ ಕತ್ತಲಾದ ನಂತರ, ನಿಮ್ಮ ತಾಯಂದಿರು ಸೇರಿದಂತೆ ನಿಮ್ಮ ಮನೆಯ ಹೆಣ್ಣು ಮಕ್ಕಳು ನಿರ್ಭಯವಾಗಿ ಮನೆಯಿಂದ ಹೊರ ಹೋಗಿ ಬರುವ ಸ್ವಾತಂತ್ರ್ಯವನ್ನು ನಾನು ತಂದುಕೊಡುತ್ತೇನೆ.
- ನಿಮ್ಮ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಭ್ರಷ್ಚಾಚಾರಿಗಳನ್ನು, ಅತ್ಯಾಚಾರಿಗಳನ್ನು ರಕ್ಷಿಸುತ್ತಿದ್ದಾರೆ. ಅತ್ಯಾಚಾರದ ಆರೋಪಿಯಾದ ಸಮಾಜವಾದಿ ಪಕ್ಷದ ಶಾಸಕ ಪ್ರಜಾಪತಿಯವರ ರಕ್ಷಣೆಗೆ ನಿಂತಿದ್ದಾರೆ.
- ಇಂಥ ದುರವಸ್ಥೆಯಿಂದ ನಾನು ನಿಮ್ಮನ್ನು ಕಾಪಾಡಬಯಸುತ್ತೇನೆ.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications