'ಸುಂದರ ಮಹಿಳೆ' ಎಂದ ಭಾರ್ತಿಗೆ ಹೆಂಡತಿ ಲಿಪಿಕಾ ತಿರುಗೇಟು
ನವದೆಹಲಿ, ಆ. 04: ನವದೆಹಲಿಯ ಮಾಜಿ ಸಚಿವ ಸೋಮನಾಥ್ ಭಾರ್ತಿ ಅವರ 'ಸುಂದರ ಮಹಿಳೆ' ಹೇಳಿಕೆ ವಿವಾದ ಧೂಳೆಬ್ಬಿಸಿದ್ದು ಅವರ ಪತ್ನಿ ಇದಕ್ಕೆ ತಿರುಗೇಟು ನೀಡಿದ್ದಾರೆ.
'ನಾನೇನು ರೂಪವತಿಯಲ್ಲ, ಸುಂದರಿಯಲ್ಲ ಹಾಗಾಗಿಯೇ ನನ್ನ ಮೇಲೆ ದೌರ್ಜನ್ಯವೆಸಗಿರಬಹುದು ಎಂದು ಹೇಳಿರುವ ಭಾರ್ತಿ ಪತ್ನಿ ಲಿಪಿಕಾ ಮಿತ್ರಾ ವ್ಯಂಗದ ಮೂಲಕ ತಕ್ಕ ಉತ್ತರವನ್ನೇ ನೀಡಿದ್ದಾರೆ.

ಭಾರ್ತಿ ಅವರಿಗೆ ನನ್ನ ರಕ್ಷಣೆ ಬಗ್ಗೆ ಯೋಚನೆಯಿಲ್ಲ. ಆದರೆ, 'ಸುಂದರ ಮಹಿಳೆ'ಯರ ರಕ್ಷಣೆ ಚಿಂತೆ ಸದಾ ಕಾಡುತ್ತಿರುತ್ತದೆ. ಮಹಿಳೆಯರ ಭದ್ರತೆಯಲ್ಲಿಯೂ ಎರಡು ಬಗೆ ಇದೆ ಎಂಬುದು ನನಗೆ ಈಗಲೇ ತಿಳಿದಿದ್ದು ಎಂದು ಹೇಳಿದ್ದಾರೆ. ಸೋಮನಾಥ್ ಭಾರ್ತಿ ಅವರ ಮೇಲೆ ಅವರ ಹೆಂಡತಿ ಲಿಪಿಕಾ ದೆಹಲಿ ಮಹಿಳಾ ಆಯೋಗಕ್ಕೆ ಹಲ್ಲೆ, ಮಾನಸಿಕ ಹಿಂಸೆ ದೂರು ನೀಡಿದ್ದರು. ಆಯೋಗ ಭಾರ್ತಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗಲು ತಿಳಿಸಿತ್ತು.
ದೆಹಲಿಯ ಪೊಲೀಸ್ ವ್ಯವಸ್ಥೆಯನ್ನು ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡರೆ, 'ಸುಂದರ ಮಹಿಳೆ'ಯರೂ (ಬ್ಯೂಟಿಫುಲ್ ವುಮೆನ್) ಮಧ್ಯರಾತ್ರಿ ನಂತರ ದಿಲ್ಲಿಯಲ್ಲಿ ಯಾವುದೇ ಭಯವಿಲ್ಲದೆ ಓಡಾಡಬಹುದು,' ಎಂದು ಹೇಳಿಕೆ ಭಾರ್ತಿ ಹೇಳಿಕೆ ನೀಡಿದ್ದರು. ಇದಕ್ಕೆ ಎಲ್ಲೆಡೆಯಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು ಮಹಿಳಾ ಪರ ಸಂಘಟನೆಗಳು ಪ್ರತಿಭಟನೆಯನ್ನು ನಡೆಸಿದ್ದವು.
ನಾನು ಹೇಳಿದ್ದು ಒಂದು, ನೀವು ಅರ್ಥ ಮಾಡಿಕೊಂಡಿರುವುದೇ ಒಂದು, ಆಭರಣಗಳನ್ನು ಧರಿಸಿಯೂ ನಿರ್ಭೀತಿಯಿಂದ ಓಡಾಡಲು ಸಾಧ್ಯಮಾಡಿಕೊಡಬೇಕು ಎಂದು ಹೇಳಿದ್ದೆ ಎಂದು ಭಾರ್ತಿ ಸ್ಪಷ್ಟನೆ ನೀಡಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications