ಅನಾರೋಗ್ಯಪೀಡಿತಳೆಂದು ತಾಯಿಯನ್ನು ಟೆರೆಸ್ ನಿಂದ ನೂಕಿ ಕೊಂದ ಮಗ!
ರಾಜ್ ಕೋಟ್, ಜನವರಿ 05: ಅನಾರೋಗ್ಯ ಪೀಡಿತ ತಾಯಿ ಜಯಶ್ರೀ(64) ಎಂಬುವವರನ್ನು ಸ್ವಂತ ಮಗನೇ ಟೆರೆಸ್ ನಿಂದ ನೂಕಿ ಕೊಲೆ ಮಾಡಿದ ಅಮಾನವೀಯ, ಹೀನಾತಿಹೀನ ಘಟನೆ ಗುಜರಾತಿನ ರಾಜಕೋಟ್ ನಲ್ಲಿ ನಡೆದಿದೆ.
ತಾಯಿಯನ್ನು ಟೆರೆಸ್ ನಿಂದ ನೂಕಿ ಕೊಲೆ ಮಾಡಿದ ನಂತರ, ಮನೆಯಲ್ಲಿ ಏನೂ ಆಗಿಯೇ ಇಲ್ಲ ಎಂಬಂತೆ ಕುಳಿತಿದ್ದ ಮಗ ಸಂದೀಪ್(36) ಗೆ ಅಪಾರ್ಟ್ ಮೆಂಟಿನ ಭದ್ರತಾ ಸಿಬ್ಬಂದಿ ಬಂದು, 'ನಿಮ್ಮ ತಾಯಿ ಟೆರೆಸ್ ನಿಂದ ಬಿದ್ದಿದ್ದಾರೆ' ಎಂಬ ಮಾಹಿತಿ ನೀಡಿದ್ದಾರೆ. ನಂತರ ಆತಂಕಗೊಂಡವನಂತೆ ಓಡಿದ ಕಾಲೇಜೊಂದರಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಆಗಿರುವ ಸಂದೀಪ್, 'ಈ ಘಟನೆ ನಡೆದಾಗ ನಾನು ಟೆರೆಸ್ ನಲ್ಲಿ ಇರಲೇ ಇಲ್ಲ. ಟೆರೆಸ್ ಗೆ ತೆರಳಿದ್ದ ನನ್ನ ತಾಯಿ ನೀರು ತರುವಂತೆ ನನ್ನನ್ನು ಮನೆಗೆ ಕಳಿಸಿದ್ದರು. ಆಗ ಅವರು ಆಯತಪ್ಪಿ ಬಿದ್ದಿರಬೇಕು' ಎಂದು ಪೊಲೀಸರ ಮುಂದೆ ನಾಟಕವಾಡಿದ್ದಾನೆ.
ಕೆಲವು ದಿನಗಳಿಂದ ಬ್ರೈನ್ ಹೆಮರೆಜ್ ಕಾಯಿಲೆಯಿಂದ ಬಳಲುತ್ತಿದ್ದ ತಾಯಿ ಜಯಶ್ರೀ ಅವರು ಬಾತ್ ರೂಮ್ ಕೆಲಸಗಳಿಗೂ ಮತ್ತೊಬ್ಬರ ಮೇಲೆ ಅವಲಂಬಿತರಾಗಿದ್ದರು. ಈ ವಿಷಯವನ್ನು ತಿಳಿದ ಪೊಲೀಸರು ತಕ್ಷಣವೇ ಸಂದೀಪ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಬಾತ್ ರೂಮ್ ಗೆ ಹೋಗುವುದಕ್ಕೂ ಮತ್ತೊಬ್ಬರ ಮೇಲೆ ಅವಲಂಬಿತರಾಗುವ ವ್ಯಕ್ತಿ, ಟೆರೆಸ್ ವರೆಗೂ ಒಬ್ಬರೇ ನಡೆದುಕೊಂಡು ಹೋಗಲು ಸಾಧ್ಯವಿಲ್ಲ ಎಂಬುದನ್ನು ಅರಿತ ಪೊಲೀಸರು ತಕ್ಷಣವೇ ಅಪಾರ್ಟ್ ಮೆಂಟಿನ ಸಿಸಿಟಿವಿ ಕ್ಯಾಮೆರಾ ಫೂಟೇಜ್ ಪರೀಕ್ಷಿಸಿದ್ದಾರೆ.

ತಾಯಿಯನ್ನು ಮಗ ಬಲವಂತವಾಗಿ ಟೆರೆಸ್ ಗೆ ಕರೆದೊಯ್ಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿರುವುದರಿಂದ ಸಂದೀಪನೇ ಕೊಲೆಗಾರ ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ. ಪೊಲೀಸರು ಅನುಮಾನ ವ್ಯಕ್ತಪಡಿಸುತ್ತಿದ್ದಂತೆಯೇ ಎದೆ ನೋವು ಎಂದು ಹೇಳಿ ಸಂದೀಪ್ ಆಸ್ಪತ್ರೆ ಸೇರಿದ್ದಾನೆ. ಆತ ಗುಣಮುಖನಾಗುತ್ತಿದ್ದಂತೆಯೇ ಬಂಧಿಸಿ, ವಿಚಾರಣೆ ನಡೆಸುವುದಾಗಿ ಪೊಲೀಸರು ಹೇಳಿದ್ದಾರೆ.
ಅನಾರೋಗ್ಯಪೀಡಿತಳಾಗಿರುವ ಕಾರಣಕ್ಕೆ ಹೆತ್ತ ತಾಯಿಯನ್ನೇ ಕೊಲ್ಲುವುದು ಎಷ್ಟು ಕ್ರೌರ್ಯ? ಅನಾರೋಗ್ಯ ಪೀಡಿತ ಮಗುವನ್ನು ನಿದ್ದೆ ಬಿಟ್ಟು, ಕಣ್ಣಲ್ಲಿ ಕಣ್ಣಿಟ್ಟು ಸಾಕುವ ಅಮ್ಮಂದಿರಿಗೆ ಮಕ್ಕಳ ಕೊಡುಗೆ ಇದೇನಾ..?
-
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications